ಸಾಗರ ಆರ್ಥಿಕತೆ ವಲಯದಲ್ಲಿ ಹೆಚ್ಚಿನ ಉದ್ಯೋಗಸೃಷ್ಟಿ ಮತ್ತು ಸುಸ್ಥಿರತೆ ಕಾಯ್ದುಕೊಳ್ಳುವುದು ಸರ್ಕಾರದ ಗುರಿಯಾಗಿದೆ. ಈ ನಿಟ್ಟಿನಲ್ಲಿ ಕಳೆದ ವರ್ಷ 100 ಶತಕೋಟಿ ಡಾಲರ್ ಬಂಡವಾಳ ಹೂಡಿಕೆ ಆಕರ್ಷಿಸಲಾಗಿದೆ ಎಂದು ಕೇಂದ್ರ ಹಡಗುಯಾನ ಮತ್ತು ಬಂದರು ಖಾತೆ ಸಚಿವ ಸರ್ಬಾನಂದ ಸೋನೊವಾಲ್ ಹೇಳಿದ್ದಾರೆ.
ಚೆನ್ನೈನಲ್ಲಿ, ಸಾಗರ ವ್ಯಾಪಾರ ಸಮಾವೇಶ 2024ರಲ್ಲಿ ಅವರು, ವಿಕಸಿತ ಭಾರತ ಗುರಿ ತಲುಪುವ ಅಮೃತಕಾಲದಲ್ಲಿ ದೇಶದ ಸಾಗರ ವಲಯ ಕೈಗಾರಿಕೆ ಮಹತ್ವದ ಪಾತ್ರ ವಹಿಸಲಿದೆ ಎಂದರು.ಜಿ-20 ನಿರ್ಣಯದ ಅನುಸಾರ ಭಾರತ -ಮಧ್ಯಪ್ರಾಚ್ಯ-ಯುರೋಪ್ ಸಾಗರ ಕಾರಿಡಾರ್ ನಿರ್ಮಿಸಲು ಸರ್ಕಾರ ಬದ್ಧವಾಗಿದೆ. ಅತ್ಯಾಧುನಿಕ ಮೂಲಸೌಕರ್ಯದ ಮೂಲಕ ಭಾರತವನ್ನು ಸಾಗರ ವ್ಯಾಪಾರದ ಪ್ರಮುಖ ತಾಣವನ್ನಾಗಿಸುವ ನಿಟ್ಟಿನಲ್ಲಿ ಸಾಗರ ಮಾಲಾ, ಸಾಗರ ಸೇತು, ಸಾಗರ ಸಮೃದ್ಧಿ ಸೇರಿದಂತೆ ಹಲವು ಯೋಜನೆಗಳನ್ನು ಜಾರಿಗೊಳಿಸಲಾಗುತ್ತಿದೆ ಎಂದು ತಿಳಿಸಿದರು. ದೇಶದ 9 ಬಂದರುಗಳನ್ನು ಜಾಗತಿಕ ಶ್ರೇಣಿಗೆ ಅನುಸಾರವಾಗಿ ಅಭಿವೃದ್ಧಿಪಡಿಸಲಾಗಿದ್ದು, ಹಡಗು ನಿರ್ಮಾಣ ಕೈಗಾರಿಕೆಯಲ್ಲಿ ಭಾರತ ಶೀಘ್ರವೇ ಅಗ್ರ 5 ರಾಷ್ಟ್ರಗಳ ಪಟ್ಟಿಯಲ್ಲಿ ಸೇರ್ಪಡೆಯಾಗುವ ವಿಶ್ವಾಸವಿದೆ. ಪರಿಸರಸ್ನೇಹಿ ಕ್ರಮದ ಅನುಸಾರ ದೇಶದ ಬಂದರುಗಳಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಗೊಳಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು. ದೇಶದ ಆರ್ಥಿಕತೆ ಬಲಪಡಿಸುವಲ್ಲಿ ಒಳನಾಡು ಜಲಮಾರ್ಗಗಳು ಮುಖ್ಯ ಪಾತ್ರ ವಹಿಸಲಿದ್ದು, ಇವುಗಳ ಅಭಿವೃದ್ಧಿಗೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.
ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…
ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…