ಸಾಗರ ಆರ್ಥಿಕತೆ ವಲಯದಲ್ಲಿ ಹೆಚ್ಚಿನ ಉದ್ಯೋಗಸೃಷ್ಟಿ ಮತ್ತು ಸುಸ್ಥಿರತೆ ಕಾಯ್ದುಕೊಳ್ಳುವುದು ಸರ್ಕಾರದ ಗುರಿಯಾಗಿದೆ. ಈ ನಿಟ್ಟಿನಲ್ಲಿ ಕಳೆದ ವರ್ಷ 100 ಶತಕೋಟಿ ಡಾಲರ್ ಬಂಡವಾಳ ಹೂಡಿಕೆ ಆಕರ್ಷಿಸಲಾಗಿದೆ ಎಂದು ಕೇಂದ್ರ ಹಡಗುಯಾನ ಮತ್ತು ಬಂದರು ಖಾತೆ ಸಚಿವ ಸರ್ಬಾನಂದ ಸೋನೊವಾಲ್ ಹೇಳಿದ್ದಾರೆ.
ಚೆನ್ನೈನಲ್ಲಿ, ಸಾಗರ ವ್ಯಾಪಾರ ಸಮಾವೇಶ 2024ರಲ್ಲಿ ಅವರು, ವಿಕಸಿತ ಭಾರತ ಗುರಿ ತಲುಪುವ ಅಮೃತಕಾಲದಲ್ಲಿ ದೇಶದ ಸಾಗರ ವಲಯ ಕೈಗಾರಿಕೆ ಮಹತ್ವದ ಪಾತ್ರ ವಹಿಸಲಿದೆ ಎಂದರು.ಜಿ-20 ನಿರ್ಣಯದ ಅನುಸಾರ ಭಾರತ -ಮಧ್ಯಪ್ರಾಚ್ಯ-ಯುರೋಪ್ ಸಾಗರ ಕಾರಿಡಾರ್ ನಿರ್ಮಿಸಲು ಸರ್ಕಾರ ಬದ್ಧವಾಗಿದೆ. ಅತ್ಯಾಧುನಿಕ ಮೂಲಸೌಕರ್ಯದ ಮೂಲಕ ಭಾರತವನ್ನು ಸಾಗರ ವ್ಯಾಪಾರದ ಪ್ರಮುಖ ತಾಣವನ್ನಾಗಿಸುವ ನಿಟ್ಟಿನಲ್ಲಿ ಸಾಗರ ಮಾಲಾ, ಸಾಗರ ಸೇತು, ಸಾಗರ ಸಮೃದ್ಧಿ ಸೇರಿದಂತೆ ಹಲವು ಯೋಜನೆಗಳನ್ನು ಜಾರಿಗೊಳಿಸಲಾಗುತ್ತಿದೆ ಎಂದು ತಿಳಿಸಿದರು. ದೇಶದ 9 ಬಂದರುಗಳನ್ನು ಜಾಗತಿಕ ಶ್ರೇಣಿಗೆ ಅನುಸಾರವಾಗಿ ಅಭಿವೃದ್ಧಿಪಡಿಸಲಾಗಿದ್ದು, ಹಡಗು ನಿರ್ಮಾಣ ಕೈಗಾರಿಕೆಯಲ್ಲಿ ಭಾರತ ಶೀಘ್ರವೇ ಅಗ್ರ 5 ರಾಷ್ಟ್ರಗಳ ಪಟ್ಟಿಯಲ್ಲಿ ಸೇರ್ಪಡೆಯಾಗುವ ವಿಶ್ವಾಸವಿದೆ. ಪರಿಸರಸ್ನೇಹಿ ಕ್ರಮದ ಅನುಸಾರ ದೇಶದ ಬಂದರುಗಳಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಗೊಳಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು. ದೇಶದ ಆರ್ಥಿಕತೆ ಬಲಪಡಿಸುವಲ್ಲಿ ಒಳನಾಡು ಜಲಮಾರ್ಗಗಳು ಮುಖ್ಯ ಪಾತ್ರ ವಹಿಸಲಿದ್ದು, ಇವುಗಳ ಅಭಿವೃದ್ಧಿಗೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.
ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಸ್ತೆ, ಗುಡ್ಡ…
ಈಶಾನ್ಯ ಭಾರತದಲ್ಲಿ ಡಿಆರ್ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಮಳೆಯ…
ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…
“ಕಾಕ್ರೋಚ್ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್ ಪ್ಯಾರಾಸಿಟಿಕ್ ಫ್ರಂಟ್” ಎಂಬ ಹೊಸ…