Advertisement
ಸುದ್ದಿಗಳು

ಉತ್ತರದಿಂದ ವೈವಾಹಿಕ ಸಂಬಂಧ | ಶ್ರೀರಾಮಚಂದ್ರಾಪುರ ಮಠ ಸ್ಪಷ್ಟನೆ

Share

ಬ್ರಾಹ್ಮಣ ಯುವಕರಿಗೆ ಉತ್ತರ ಭಾರತದ ಕನ್ಯೆಯರ ಜತೆ ವೈವಾಹಿಕ ಸಂಬಂಧ ಏರ್ಪಡಿಸುವ ಉದ್ದೇಶದಿಂದ ಅಧ್ಯಯನ ನಡೆಸಲು ಓಂ ಗುರೂಜಿ ಮತ್ತು ಕನ್ಯೆಯರ ಪೋಷಕರನ್ನು ಒಳಗೊಂಡ ತಂಡ ಕರಾವಳಿ ಕರ್ನಾಟಕಕ್ಕೆ ಆಗಮಿಸುತ್ತಿದೆ ಎಂಬ ಮಾಹಿತಿ ಸಮಾಜ ಮಾಧ್ಯಮಗಳಲ್ಲಿ ಹರಿದಾಡುತ್ತಿದ್ದು, ಇದಕ್ಕೂ ಶ್ರೀರಾಮಚಂದ್ರಾಪುರ ಮಠಕ್ಕೂ ಯಾವುದೇ ಸಂಬಂಧ ಇಲ್ಲ ಎಂದು ಶ್ರೀಮಠ ಸ್ಪಷ್ಟಪಡಿಸಿದೆ.

“ಈ ತಂಡದ ಜತೆ ಸಂಪರ್ಕ ಮಾಡಿದವರ ಪೈಕಿ ರಾಮಚಂದ್ರಾಪುರ ಮಠದ ಶ್ರೀರಾಘವೇಶ್ವರಭಾರತೀಸ್ವಾಮೀಜಿಯವರಿಗೆ ಆಪ್ತರಾಗಿರುವವರು ಇದ್ದಾರೆ. ಆದ್ದರಿಂದ ಮೋಸ ಹೋಗಲು ಅವಕಾಶವಿಲ್ಲ” ಎಂಬ ಮಾಹಿತಿ ಈ ವಾಟ್ಸಪ್ ಸಂದೇಶಗಳಲ್ಲಿ ಇದ್ದು, ಶ್ರೀಮಠದ ಜತೆ ನೇರ ಸಂಪರ್ಕ ಇರುವ ಯಾರೂ ಇಂತಹ ವ್ಯವಸ್ಥೆಯಲ್ಲಿ ತೊಡಗಿಸಿಕೊಂಡಿಲ್ಲ ಅಥವಾ ಶ್ರೀಮಠ ಇಂತಹ ಯಾರನ್ನೂ ಈ ಉದ್ದೇಶಕ್ಕೆ ನಿಯೋಜಿಸಿಲ್ಲ ಎಂದು ಶ್ರೀಮಠದ ಪ್ರಶಾಸನಾಧಿಕಾರಿ ಸಂತೋಷ್ ಹೆಗಡೆ ಪ್ರಕಟಣೆಯಲ್ಲಿ ಹೇಳಿದ್ದಾರೆ.

ಉತ್ತರ ಭಾರತದಿಂದ ವೈವಾಹಿಕ ಸಂಬಂಧ ಬಯಸುವವರು ಉತ್ತರ ಭಾರತಕ್ಕೆ ಹೋಗಿ ಕನ್ಯೆಯರನ್ನು ನೋಡುವುದು, ಅವರು ವರನ ಮನೆಗೆ ಬಂದು ನೋಡುವುದು, ಒಪ್ಪಿಗೆಯಾದಲ್ಲಿ ಮಠದ ಕಾಣಿಕೆ, ಮದುವೆ ಖರ್ಚು ಹೀಗೆ ಕನಿಷ್ಠ 1.5 ಲಕ್ಷ ರೂಪಾಯಿ ಭರಿಸಲು ಸಿದ್ಧರಿರಬೇಕು ಎಂದು ಈ ವಾಟ್ಸಪ್ ಸಂದೇಶದಲ್ಲಿ ತಿಳಿಸಲಾಗಿದೆ. ಆದರೆ ಈ ಒಡಂಬಡಿಕೆಗೆ ಒಪ್ಪಿಕೊಳ್ಳುವವರು ತಮ್ಮದೇ ಸ್ವಂತ ವಿವೇಚನೆಯಿಂದ ಈ ಬಗ್ಗೆ ನಿರ್ಧಾರ ಕೈಗೊಳ್ಳಬೇಕೇ ವಿನಃ ಇದಕ್ಕೆ ಶ್ರೀಮಠವಾಗಲೀ ಅಥವಾ ಮಠಕ್ಕೆ ಸಂಬಂಧಿಸಿದ ಯಾವುದೇ ಸಂಘಟನೆ, ಸಂಘ ಸಂಸ್ಥೆಗಳಾಗಲೀ ಹೊಣೆ ಆಗಿರುವುದಿಲ್ಲ ಎಂದು ಹೇಳಿದ್ದಾರೆ.

ಹವ್ಯಕ ಸಮಾಜ ಸೇರಿದಂತೆ ಬ್ರಾಹ್ಮಣ ಸಮಾಜದ ಇತರ ಉಪ ಪಂಗಡಗಳಿಗೆ ಸೇರಿದ ಕೃಷಿಕರು, ಅಡುಗೆಯವರು, ಪುರೋಹಿತರು ಮತ್ತು ಇತರ ವೃತ್ತಿಪರರನ್ನು ಗುರಿಯಾಗಿಸಿಕೊಂಡು ಈ ಗುಂಪು ಕೆಲಸ ಮಾಡುತ್ತಿದೆ. ಒಂದು ವೇಳೆ ಈ ವ್ಯವಸ್ಥೆ ಜತೆ ವ್ಯವಹಾರ ನಡೆಸುವ ಮುನ್ನ ಸೂಕ್ತ ಮುನ್ನೆಚ್ಚರಿಕೆ ವಹಿಸಿಕೊಳ್ಳುವಂತೆ ಮನವಿ ಮಾಡಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಂಗಳೂರು ಅಡಿಕೆ ಮಾರುಕಟ್ಟೆ | ಸ್ಥಿರತೆಯಿಂದ ಏರಿಕೆಯತ್ತ ಮುಖ ಮಾಡಿದ ಧಾರಣೆ

ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.

5 hours ago

ಜನಗಣತಿ 2026 – ಏಪ್ರಿಲ್ 1ರಿಂದ ಸ್ವಯಂ-ಎಣಿಕೆ ಆರಂಭ – ಸಹಕರಿಸಲು ಜಿಲ್ಲಾಧಿಕಾರಿ ಕರೆ

ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…

5 hours ago

ಹವಾಮಾನ ವರದಿ | 01-04-2026 | ಕರಾವಳಿ-ಮಲೆನಾಡಿನಲ್ಲಿ ಗುಡುಗು ಮಳೆ ಮುಂದುವರಿಕೆ – ಏ.10 ರಿಂದ ಮತ್ತೆ ಮಳೆ ಚುರುಕು ಸಾಧ್ಯತೆ!

ಏಪ್ರಿಲ್ 4ರವರೆಗೆ ಮಳೆ ಮುಂದುವರಿಯಲಿದೆ, ಬಳಿಕ ತಾತ್ಕಾಲಿಕ ಕಡಿಮೆ. ಏಪ್ರಿಲ್ 10ರಿಂದ ಮತ್ತೆ…

21 hours ago

ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!

ಏಪ್ರಿಲ್‌ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…

1 day ago

ಗ್ಯಾಸ್ ಸಿಲಿಂಡರ್ ಕೊರತೆ ಪರಿಣಾಮ : ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆ

ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…

1 day ago

ಹಸಿರು ಅಮೋನಿಯಾ ಒಪ್ಪಂದಗಳು | ಭಾರತದ ಇಂಧನ ಭದ್ರತೆಗೆ ಹೊಸ ಬಲ..! 2030 ಗುರಿಗೆ ವೇಗ

ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…

1 day ago