ಬ್ರಾಹ್ಮಣ ಯುವಕರಿಗೆ ಉತ್ತರ ಭಾರತದ ಕನ್ಯೆಯರ ಜತೆ ವೈವಾಹಿಕ ಸಂಬಂಧ ಏರ್ಪಡಿಸುವ ಉದ್ದೇಶದಿಂದ ಅಧ್ಯಯನ ನಡೆಸಲು ಓಂ ಗುರೂಜಿ ಮತ್ತು ಕನ್ಯೆಯರ ಪೋಷಕರನ್ನು ಒಳಗೊಂಡ ತಂಡ ಕರಾವಳಿ ಕರ್ನಾಟಕಕ್ಕೆ ಆಗಮಿಸುತ್ತಿದೆ ಎಂಬ ಮಾಹಿತಿ ಸಮಾಜ ಮಾಧ್ಯಮಗಳಲ್ಲಿ ಹರಿದಾಡುತ್ತಿದ್ದು, ಇದಕ್ಕೂ ಶ್ರೀರಾಮಚಂದ್ರಾಪುರ ಮಠಕ್ಕೂ ಯಾವುದೇ ಸಂಬಂಧ ಇಲ್ಲ ಎಂದು ಶ್ರೀಮಠ ಸ್ಪಷ್ಟಪಡಿಸಿದೆ.
“ಈ ತಂಡದ ಜತೆ ಸಂಪರ್ಕ ಮಾಡಿದವರ ಪೈಕಿ ರಾಮಚಂದ್ರಾಪುರ ಮಠದ ಶ್ರೀರಾಘವೇಶ್ವರಭಾರತೀಸ್ವಾಮೀಜಿಯವರಿಗೆ ಆಪ್ತರಾಗಿರುವವರು ಇದ್ದಾರೆ. ಆದ್ದರಿಂದ ಮೋಸ ಹೋಗಲು ಅವಕಾಶವಿಲ್ಲ” ಎಂಬ ಮಾಹಿತಿ ಈ ವಾಟ್ಸಪ್ ಸಂದೇಶಗಳಲ್ಲಿ ಇದ್ದು, ಶ್ರೀಮಠದ ಜತೆ ನೇರ ಸಂಪರ್ಕ ಇರುವ ಯಾರೂ ಇಂತಹ ವ್ಯವಸ್ಥೆಯಲ್ಲಿ ತೊಡಗಿಸಿಕೊಂಡಿಲ್ಲ ಅಥವಾ ಶ್ರೀಮಠ ಇಂತಹ ಯಾರನ್ನೂ ಈ ಉದ್ದೇಶಕ್ಕೆ ನಿಯೋಜಿಸಿಲ್ಲ ಎಂದು ಶ್ರೀಮಠದ ಪ್ರಶಾಸನಾಧಿಕಾರಿ ಸಂತೋಷ್ ಹೆಗಡೆ ಪ್ರಕಟಣೆಯಲ್ಲಿ ಹೇಳಿದ್ದಾರೆ.
ಉತ್ತರ ಭಾರತದಿಂದ ವೈವಾಹಿಕ ಸಂಬಂಧ ಬಯಸುವವರು ಉತ್ತರ ಭಾರತಕ್ಕೆ ಹೋಗಿ ಕನ್ಯೆಯರನ್ನು ನೋಡುವುದು, ಅವರು ವರನ ಮನೆಗೆ ಬಂದು ನೋಡುವುದು, ಒಪ್ಪಿಗೆಯಾದಲ್ಲಿ ಮಠದ ಕಾಣಿಕೆ, ಮದುವೆ ಖರ್ಚು ಹೀಗೆ ಕನಿಷ್ಠ 1.5 ಲಕ್ಷ ರೂಪಾಯಿ ಭರಿಸಲು ಸಿದ್ಧರಿರಬೇಕು ಎಂದು ಈ ವಾಟ್ಸಪ್ ಸಂದೇಶದಲ್ಲಿ ತಿಳಿಸಲಾಗಿದೆ. ಆದರೆ ಈ ಒಡಂಬಡಿಕೆಗೆ ಒಪ್ಪಿಕೊಳ್ಳುವವರು ತಮ್ಮದೇ ಸ್ವಂತ ವಿವೇಚನೆಯಿಂದ ಈ ಬಗ್ಗೆ ನಿರ್ಧಾರ ಕೈಗೊಳ್ಳಬೇಕೇ ವಿನಃ ಇದಕ್ಕೆ ಶ್ರೀಮಠವಾಗಲೀ ಅಥವಾ ಮಠಕ್ಕೆ ಸಂಬಂಧಿಸಿದ ಯಾವುದೇ ಸಂಘಟನೆ, ಸಂಘ ಸಂಸ್ಥೆಗಳಾಗಲೀ ಹೊಣೆ ಆಗಿರುವುದಿಲ್ಲ ಎಂದು ಹೇಳಿದ್ದಾರೆ.
ಹವ್ಯಕ ಸಮಾಜ ಸೇರಿದಂತೆ ಬ್ರಾಹ್ಮಣ ಸಮಾಜದ ಇತರ ಉಪ ಪಂಗಡಗಳಿಗೆ ಸೇರಿದ ಕೃಷಿಕರು, ಅಡುಗೆಯವರು, ಪುರೋಹಿತರು ಮತ್ತು ಇತರ ವೃತ್ತಿಪರರನ್ನು ಗುರಿಯಾಗಿಸಿಕೊಂಡು ಈ ಗುಂಪು ಕೆಲಸ ಮಾಡುತ್ತಿದೆ. ಒಂದು ವೇಳೆ ಈ ವ್ಯವಸ್ಥೆ ಜತೆ ವ್ಯವಹಾರ ನಡೆಸುವ ಮುನ್ನ ಸೂಕ್ತ ಮುನ್ನೆಚ್ಚರಿಕೆ ವಹಿಸಿಕೊಳ್ಳುವಂತೆ ಮನವಿ ಮಾಡಿದ್ದಾರೆ.
ರಾಜ್ಯದಲ್ಲಿ ಮೇ 20ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಮೇ 27ರ ಸುಮಾರಿಗೆ…
ನೈರುತ್ಯ ಮುಂಗಾರು ಮೇ 26ರಂದು ಕೇರಳ ಪ್ರವೇಶಿಸುವ ಸಾಧ್ಯತೆ ಇದೆ ಎಂದು IMD…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಗಾರು ಪೂರ್ವ ಮಳೆ ಅಬ್ಬರಿಸಿದ್ದು, ಬೆಂಗಳೂರಿನಲ್ಲಿ ಜಲಾವೃತ ಪರಿಸ್ಥಿತಿ…
ಮೇ 20ರಿಂದ ರಾಜ್ಯದ ಹಲವೆಡೆ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ. ಆದರೆ…
ಅಡಿಕೆ ಇಳುವರಿ ಕಡಿಮೆಯಿದ್ದರೂ ನಿರೀಕ್ಷಿತ ಮಟ್ಟದಲ್ಲಿ ಧಾರಣೆ ಏರಿಕೆಯಾಗದಿರುವುದು ರೈತರಲ್ಲಿ ಆತಂಕ ಮೂಡಿಸಿದೆ.…
ದೆಹಲಿಯ ಗಾಜಿಪುರದಲ್ಲಿ ದಿನಕ್ಕೆ 300 ಟನ್ ಸಾಮರ್ಥ್ಯದ ಜೈವಿಕ ಅನಿಲ ಘಟಕ ಸ್ಥಾಪನೆಗೆ…