Advertisement
ಸುದ್ದಿಗಳು

ಉತ್ತರದಿಂದ ವೈವಾಹಿಕ ಸಂಬಂಧ | ಶ್ರೀರಾಮಚಂದ್ರಾಪುರ ಮಠ ಸ್ಪಷ್ಟನೆ

Share

ಬ್ರಾಹ್ಮಣ ಯುವಕರಿಗೆ ಉತ್ತರ ಭಾರತದ ಕನ್ಯೆಯರ ಜತೆ ವೈವಾಹಿಕ ಸಂಬಂಧ ಏರ್ಪಡಿಸುವ ಉದ್ದೇಶದಿಂದ ಅಧ್ಯಯನ ನಡೆಸಲು ಓಂ ಗುರೂಜಿ ಮತ್ತು ಕನ್ಯೆಯರ ಪೋಷಕರನ್ನು ಒಳಗೊಂಡ ತಂಡ ಕರಾವಳಿ ಕರ್ನಾಟಕಕ್ಕೆ ಆಗಮಿಸುತ್ತಿದೆ ಎಂಬ ಮಾಹಿತಿ ಸಮಾಜ ಮಾಧ್ಯಮಗಳಲ್ಲಿ ಹರಿದಾಡುತ್ತಿದ್ದು, ಇದಕ್ಕೂ ಶ್ರೀರಾಮಚಂದ್ರಾಪುರ ಮಠಕ್ಕೂ ಯಾವುದೇ ಸಂಬಂಧ ಇಲ್ಲ ಎಂದು ಶ್ರೀಮಠ ಸ್ಪಷ್ಟಪಡಿಸಿದೆ.

“ಈ ತಂಡದ ಜತೆ ಸಂಪರ್ಕ ಮಾಡಿದವರ ಪೈಕಿ ರಾಮಚಂದ್ರಾಪುರ ಮಠದ ಶ್ರೀರಾಘವೇಶ್ವರಭಾರತೀಸ್ವಾಮೀಜಿಯವರಿಗೆ ಆಪ್ತರಾಗಿರುವವರು ಇದ್ದಾರೆ. ಆದ್ದರಿಂದ ಮೋಸ ಹೋಗಲು ಅವಕಾಶವಿಲ್ಲ” ಎಂಬ ಮಾಹಿತಿ ಈ ವಾಟ್ಸಪ್ ಸಂದೇಶಗಳಲ್ಲಿ ಇದ್ದು, ಶ್ರೀಮಠದ ಜತೆ ನೇರ ಸಂಪರ್ಕ ಇರುವ ಯಾರೂ ಇಂತಹ ವ್ಯವಸ್ಥೆಯಲ್ಲಿ ತೊಡಗಿಸಿಕೊಂಡಿಲ್ಲ ಅಥವಾ ಶ್ರೀಮಠ ಇಂತಹ ಯಾರನ್ನೂ ಈ ಉದ್ದೇಶಕ್ಕೆ ನಿಯೋಜಿಸಿಲ್ಲ ಎಂದು ಶ್ರೀಮಠದ ಪ್ರಶಾಸನಾಧಿಕಾರಿ ಸಂತೋಷ್ ಹೆಗಡೆ ಪ್ರಕಟಣೆಯಲ್ಲಿ ಹೇಳಿದ್ದಾರೆ.

ಉತ್ತರ ಭಾರತದಿಂದ ವೈವಾಹಿಕ ಸಂಬಂಧ ಬಯಸುವವರು ಉತ್ತರ ಭಾರತಕ್ಕೆ ಹೋಗಿ ಕನ್ಯೆಯರನ್ನು ನೋಡುವುದು, ಅವರು ವರನ ಮನೆಗೆ ಬಂದು ನೋಡುವುದು, ಒಪ್ಪಿಗೆಯಾದಲ್ಲಿ ಮಠದ ಕಾಣಿಕೆ, ಮದುವೆ ಖರ್ಚು ಹೀಗೆ ಕನಿಷ್ಠ 1.5 ಲಕ್ಷ ರೂಪಾಯಿ ಭರಿಸಲು ಸಿದ್ಧರಿರಬೇಕು ಎಂದು ಈ ವಾಟ್ಸಪ್ ಸಂದೇಶದಲ್ಲಿ ತಿಳಿಸಲಾಗಿದೆ. ಆದರೆ ಈ ಒಡಂಬಡಿಕೆಗೆ ಒಪ್ಪಿಕೊಳ್ಳುವವರು ತಮ್ಮದೇ ಸ್ವಂತ ವಿವೇಚನೆಯಿಂದ ಈ ಬಗ್ಗೆ ನಿರ್ಧಾರ ಕೈಗೊಳ್ಳಬೇಕೇ ವಿನಃ ಇದಕ್ಕೆ ಶ್ರೀಮಠವಾಗಲೀ ಅಥವಾ ಮಠಕ್ಕೆ ಸಂಬಂಧಿಸಿದ ಯಾವುದೇ ಸಂಘಟನೆ, ಸಂಘ ಸಂಸ್ಥೆಗಳಾಗಲೀ ಹೊಣೆ ಆಗಿರುವುದಿಲ್ಲ ಎಂದು ಹೇಳಿದ್ದಾರೆ.

ಹವ್ಯಕ ಸಮಾಜ ಸೇರಿದಂತೆ ಬ್ರಾಹ್ಮಣ ಸಮಾಜದ ಇತರ ಉಪ ಪಂಗಡಗಳಿಗೆ ಸೇರಿದ ಕೃಷಿಕರು, ಅಡುಗೆಯವರು, ಪುರೋಹಿತರು ಮತ್ತು ಇತರ ವೃತ್ತಿಪರರನ್ನು ಗುರಿಯಾಗಿಸಿಕೊಂಡು ಈ ಗುಂಪು ಕೆಲಸ ಮಾಡುತ್ತಿದೆ. ಒಂದು ವೇಳೆ ಈ ವ್ಯವಸ್ಥೆ ಜತೆ ವ್ಯವಹಾರ ನಡೆಸುವ ಮುನ್ನ ಸೂಕ್ತ ಮುನ್ನೆಚ್ಚರಿಕೆ ವಹಿಸಿಕೊಳ್ಳುವಂತೆ ಮನವಿ ಮಾಡಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬಿ.ಎಸ್‌ಸಿ. ಕೃಷಿ ನಂತರ ಏನು ? ಉದ್ಯೋಗ, ಉದ್ಯಮ ಮತ್ತು ಉನ್ನತ ಶಿಕ್ಷಣದ ಅತ್ಯುತ್ತಮ ಅವಕಾಶಗಳು ಇಲ್ಲಿವೆ

ಬಿ.ಎಸ್‌ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…

8 hours ago

ಅಡಿಕೆ–ಕಾಳುಮೆಣಸು ಬೆಳೆ ವಿಮೆ: ರೈತರ ನೋಂದಣಿಗೆ ಆ.17 ಅಂತಿಮ ದಿನ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…

9 hours ago

ಹವಾಮಾನ ವರದಿ | 10.08.2026 | ಕರ್ನಾಟಕದಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆ; ಆಗಸ್ಟ್‌ 12ರಂದು ಕರಾವಳಿಯಲ್ಲಿ ಮಳೆ ಹೆಚ್ಚಳ ಸಾಧ್ಯತೆ

ಮಧ್ಯಪ್ರದೇಶದಲ್ಲಿ ಹೊಸ ತಿರುವಿಕೆ ಪರಿಣಾಮ: ಕರಾವಳಿ, ಮಲೆನಾಡಿನಲ್ಲಿ ಮಳೆ ಚುರುಕು ಸಾಧ್ಯತೆ ಕರ್ನಾಟಕದ…

24 hours ago

ಕಡಿಮೆ ನೀರು, ಕಡಿಮೆ ಗೊಬ್ಬರ… ಹೆಚ್ಚು ಇಳುವರಿ – ಕೃಷಿಯಲ್ಲಿ ಹೊಸ ಕ್ರಾಂತಿ

ಕಡಿಮೆ ಸಂಪನ್ಮೂಲ ಬಳಸಿ ಹೆಚ್ಚು ಉತ್ಪಾದನೆ ಪಡೆಯಲು ಸ್ಮಾರ್ಟ್ ಸಂಪನ್ಮೂಲ ನಿರ್ವಹಣೆ ಅಗತ್ಯವಾಗಿದೆ.…

1 day ago

ಬರದತ್ತ ಇಂಗ್ಲೆಂಡ್‌ – ಆಹಾರ ಕೊರತೆ, ಕಾಡ್ಗಿಚ್ಚಿನ ಎಚ್ಚರಿಕೆ – ಕೃಷಿಗೆ ಭಾರಿ ಹೊಡೆತ – ರೈತರಿಗೆ ₹4,400 ಕೋಟಿ ನಷ್ಟದ ಅಂದಾಜು

ತೀವ್ರ ಬರ ಮತ್ತು ಉಷ್ಣಾಂಶದಿಂದ ಇಂಗ್ಲೆಂಡ್‌ನಲ್ಲಿ ಕೃಷಿ ಉತ್ಪಾದನೆ ಕುಸಿದಿದ್ದು, ಆಹಾರ ಕೊರತೆ…

1 day ago

ಹವಾಮಾನ ವರದಿ | 09.08.2026 | ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ ಕ್ಷೀಣ; ಆಗಸ್ಟ್‌ 11ರಿಂದ ಮಲೆನಾಡಿನಲ್ಲೂ ಮಳೆ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಸಣ್ಣ ಅವಧಿಯ ಸಾಮಾನ್ಯ ಮಳೆ ಮಾತ್ರ; ಮಲೆನಾಡಿನಲ್ಲಿ ಮಳೆ ಕಡಿಮೆಯಾಗುವ…

2 days ago