Advertisement
ಸುದ್ದಿಗಳು

ಉತ್ತರದಿಂದ ವೈವಾಹಿಕ ಸಂಬಂಧ | ಶ್ರೀರಾಮಚಂದ್ರಾಪುರ ಮಠ ಸ್ಪಷ್ಟನೆ

Share

ಬ್ರಾಹ್ಮಣ ಯುವಕರಿಗೆ ಉತ್ತರ ಭಾರತದ ಕನ್ಯೆಯರ ಜತೆ ವೈವಾಹಿಕ ಸಂಬಂಧ ಏರ್ಪಡಿಸುವ ಉದ್ದೇಶದಿಂದ ಅಧ್ಯಯನ ನಡೆಸಲು ಓಂ ಗುರೂಜಿ ಮತ್ತು ಕನ್ಯೆಯರ ಪೋಷಕರನ್ನು ಒಳಗೊಂಡ ತಂಡ ಕರಾವಳಿ ಕರ್ನಾಟಕಕ್ಕೆ ಆಗಮಿಸುತ್ತಿದೆ ಎಂಬ ಮಾಹಿತಿ ಸಮಾಜ ಮಾಧ್ಯಮಗಳಲ್ಲಿ ಹರಿದಾಡುತ್ತಿದ್ದು, ಇದಕ್ಕೂ ಶ್ರೀರಾಮಚಂದ್ರಾಪುರ ಮಠಕ್ಕೂ ಯಾವುದೇ ಸಂಬಂಧ ಇಲ್ಲ ಎಂದು ಶ್ರೀಮಠ ಸ್ಪಷ್ಟಪಡಿಸಿದೆ.

“ಈ ತಂಡದ ಜತೆ ಸಂಪರ್ಕ ಮಾಡಿದವರ ಪೈಕಿ ರಾಮಚಂದ್ರಾಪುರ ಮಠದ ಶ್ರೀರಾಘವೇಶ್ವರಭಾರತೀಸ್ವಾಮೀಜಿಯವರಿಗೆ ಆಪ್ತರಾಗಿರುವವರು ಇದ್ದಾರೆ. ಆದ್ದರಿಂದ ಮೋಸ ಹೋಗಲು ಅವಕಾಶವಿಲ್ಲ” ಎಂಬ ಮಾಹಿತಿ ಈ ವಾಟ್ಸಪ್ ಸಂದೇಶಗಳಲ್ಲಿ ಇದ್ದು, ಶ್ರೀಮಠದ ಜತೆ ನೇರ ಸಂಪರ್ಕ ಇರುವ ಯಾರೂ ಇಂತಹ ವ್ಯವಸ್ಥೆಯಲ್ಲಿ ತೊಡಗಿಸಿಕೊಂಡಿಲ್ಲ ಅಥವಾ ಶ್ರೀಮಠ ಇಂತಹ ಯಾರನ್ನೂ ಈ ಉದ್ದೇಶಕ್ಕೆ ನಿಯೋಜಿಸಿಲ್ಲ ಎಂದು ಶ್ರೀಮಠದ ಪ್ರಶಾಸನಾಧಿಕಾರಿ ಸಂತೋಷ್ ಹೆಗಡೆ ಪ್ರಕಟಣೆಯಲ್ಲಿ ಹೇಳಿದ್ದಾರೆ.

ಉತ್ತರ ಭಾರತದಿಂದ ವೈವಾಹಿಕ ಸಂಬಂಧ ಬಯಸುವವರು ಉತ್ತರ ಭಾರತಕ್ಕೆ ಹೋಗಿ ಕನ್ಯೆಯರನ್ನು ನೋಡುವುದು, ಅವರು ವರನ ಮನೆಗೆ ಬಂದು ನೋಡುವುದು, ಒಪ್ಪಿಗೆಯಾದಲ್ಲಿ ಮಠದ ಕಾಣಿಕೆ, ಮದುವೆ ಖರ್ಚು ಹೀಗೆ ಕನಿಷ್ಠ 1.5 ಲಕ್ಷ ರೂಪಾಯಿ ಭರಿಸಲು ಸಿದ್ಧರಿರಬೇಕು ಎಂದು ಈ ವಾಟ್ಸಪ್ ಸಂದೇಶದಲ್ಲಿ ತಿಳಿಸಲಾಗಿದೆ. ಆದರೆ ಈ ಒಡಂಬಡಿಕೆಗೆ ಒಪ್ಪಿಕೊಳ್ಳುವವರು ತಮ್ಮದೇ ಸ್ವಂತ ವಿವೇಚನೆಯಿಂದ ಈ ಬಗ್ಗೆ ನಿರ್ಧಾರ ಕೈಗೊಳ್ಳಬೇಕೇ ವಿನಃ ಇದಕ್ಕೆ ಶ್ರೀಮಠವಾಗಲೀ ಅಥವಾ ಮಠಕ್ಕೆ ಸಂಬಂಧಿಸಿದ ಯಾವುದೇ ಸಂಘಟನೆ, ಸಂಘ ಸಂಸ್ಥೆಗಳಾಗಲೀ ಹೊಣೆ ಆಗಿರುವುದಿಲ್ಲ ಎಂದು ಹೇಳಿದ್ದಾರೆ.

ಹವ್ಯಕ ಸಮಾಜ ಸೇರಿದಂತೆ ಬ್ರಾಹ್ಮಣ ಸಮಾಜದ ಇತರ ಉಪ ಪಂಗಡಗಳಿಗೆ ಸೇರಿದ ಕೃಷಿಕರು, ಅಡುಗೆಯವರು, ಪುರೋಹಿತರು ಮತ್ತು ಇತರ ವೃತ್ತಿಪರರನ್ನು ಗುರಿಯಾಗಿಸಿಕೊಂಡು ಈ ಗುಂಪು ಕೆಲಸ ಮಾಡುತ್ತಿದೆ. ಒಂದು ವೇಳೆ ಈ ವ್ಯವಸ್ಥೆ ಜತೆ ವ್ಯವಹಾರ ನಡೆಸುವ ಮುನ್ನ ಸೂಕ್ತ ಮುನ್ನೆಚ್ಚರಿಕೆ ವಹಿಸಿಕೊಳ್ಳುವಂತೆ ಮನವಿ ಮಾಡಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ

ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…

12 hours ago

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…

19 hours ago

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…

2 days ago

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್

ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…

2 days ago

ರಾಜ್ಯದಲ್ಲಿ ಬರದ ಛಾಯೆ | 178 ತಾಲ್ಲೂಕುಗಳಲ್ಲಿ ತೀವ್ರ ಮಳೆ ಕೊರತೆ, ಜಲಾಶಯಗಳ ನೀರಿನ ಮಟ್ಟ ಶೇ.40ಕ್ಕೆ ಕುಸಿತ

ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…

3 days ago

ಪುತ್ತೂರಿಗೆ ಪುತ್ತಿಲ? ಪುತ್ತೂರಿನ ರಾಜಕೀಯದ ಹೊಸ ವ್ಯಾಕರಣ

ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…

3 days ago