Advertisement
ಸುದ್ದಿಗಳು

ಉತ್ತರದಿಂದ ವೈವಾಹಿಕ ಸಂಬಂಧ | ಶ್ರೀರಾಮಚಂದ್ರಾಪುರ ಮಠ ಸ್ಪಷ್ಟನೆ

Share

ಬ್ರಾಹ್ಮಣ ಯುವಕರಿಗೆ ಉತ್ತರ ಭಾರತದ ಕನ್ಯೆಯರ ಜತೆ ವೈವಾಹಿಕ ಸಂಬಂಧ ಏರ್ಪಡಿಸುವ ಉದ್ದೇಶದಿಂದ ಅಧ್ಯಯನ ನಡೆಸಲು ಓಂ ಗುರೂಜಿ ಮತ್ತು ಕನ್ಯೆಯರ ಪೋಷಕರನ್ನು ಒಳಗೊಂಡ ತಂಡ ಕರಾವಳಿ ಕರ್ನಾಟಕಕ್ಕೆ ಆಗಮಿಸುತ್ತಿದೆ ಎಂಬ ಮಾಹಿತಿ ಸಮಾಜ ಮಾಧ್ಯಮಗಳಲ್ಲಿ ಹರಿದಾಡುತ್ತಿದ್ದು, ಇದಕ್ಕೂ ಶ್ರೀರಾಮಚಂದ್ರಾಪುರ ಮಠಕ್ಕೂ ಯಾವುದೇ ಸಂಬಂಧ ಇಲ್ಲ ಎಂದು ಶ್ರೀಮಠ ಸ್ಪಷ್ಟಪಡಿಸಿದೆ.

“ಈ ತಂಡದ ಜತೆ ಸಂಪರ್ಕ ಮಾಡಿದವರ ಪೈಕಿ ರಾಮಚಂದ್ರಾಪುರ ಮಠದ ಶ್ರೀರಾಘವೇಶ್ವರಭಾರತೀಸ್ವಾಮೀಜಿಯವರಿಗೆ ಆಪ್ತರಾಗಿರುವವರು ಇದ್ದಾರೆ. ಆದ್ದರಿಂದ ಮೋಸ ಹೋಗಲು ಅವಕಾಶವಿಲ್ಲ” ಎಂಬ ಮಾಹಿತಿ ಈ ವಾಟ್ಸಪ್ ಸಂದೇಶಗಳಲ್ಲಿ ಇದ್ದು, ಶ್ರೀಮಠದ ಜತೆ ನೇರ ಸಂಪರ್ಕ ಇರುವ ಯಾರೂ ಇಂತಹ ವ್ಯವಸ್ಥೆಯಲ್ಲಿ ತೊಡಗಿಸಿಕೊಂಡಿಲ್ಲ ಅಥವಾ ಶ್ರೀಮಠ ಇಂತಹ ಯಾರನ್ನೂ ಈ ಉದ್ದೇಶಕ್ಕೆ ನಿಯೋಜಿಸಿಲ್ಲ ಎಂದು ಶ್ರೀಮಠದ ಪ್ರಶಾಸನಾಧಿಕಾರಿ ಸಂತೋಷ್ ಹೆಗಡೆ ಪ್ರಕಟಣೆಯಲ್ಲಿ ಹೇಳಿದ್ದಾರೆ.

ಉತ್ತರ ಭಾರತದಿಂದ ವೈವಾಹಿಕ ಸಂಬಂಧ ಬಯಸುವವರು ಉತ್ತರ ಭಾರತಕ್ಕೆ ಹೋಗಿ ಕನ್ಯೆಯರನ್ನು ನೋಡುವುದು, ಅವರು ವರನ ಮನೆಗೆ ಬಂದು ನೋಡುವುದು, ಒಪ್ಪಿಗೆಯಾದಲ್ಲಿ ಮಠದ ಕಾಣಿಕೆ, ಮದುವೆ ಖರ್ಚು ಹೀಗೆ ಕನಿಷ್ಠ 1.5 ಲಕ್ಷ ರೂಪಾಯಿ ಭರಿಸಲು ಸಿದ್ಧರಿರಬೇಕು ಎಂದು ಈ ವಾಟ್ಸಪ್ ಸಂದೇಶದಲ್ಲಿ ತಿಳಿಸಲಾಗಿದೆ. ಆದರೆ ಈ ಒಡಂಬಡಿಕೆಗೆ ಒಪ್ಪಿಕೊಳ್ಳುವವರು ತಮ್ಮದೇ ಸ್ವಂತ ವಿವೇಚನೆಯಿಂದ ಈ ಬಗ್ಗೆ ನಿರ್ಧಾರ ಕೈಗೊಳ್ಳಬೇಕೇ ವಿನಃ ಇದಕ್ಕೆ ಶ್ರೀಮಠವಾಗಲೀ ಅಥವಾ ಮಠಕ್ಕೆ ಸಂಬಂಧಿಸಿದ ಯಾವುದೇ ಸಂಘಟನೆ, ಸಂಘ ಸಂಸ್ಥೆಗಳಾಗಲೀ ಹೊಣೆ ಆಗಿರುವುದಿಲ್ಲ ಎಂದು ಹೇಳಿದ್ದಾರೆ.

ಹವ್ಯಕ ಸಮಾಜ ಸೇರಿದಂತೆ ಬ್ರಾಹ್ಮಣ ಸಮಾಜದ ಇತರ ಉಪ ಪಂಗಡಗಳಿಗೆ ಸೇರಿದ ಕೃಷಿಕರು, ಅಡುಗೆಯವರು, ಪುರೋಹಿತರು ಮತ್ತು ಇತರ ವೃತ್ತಿಪರರನ್ನು ಗುರಿಯಾಗಿಸಿಕೊಂಡು ಈ ಗುಂಪು ಕೆಲಸ ಮಾಡುತ್ತಿದೆ. ಒಂದು ವೇಳೆ ಈ ವ್ಯವಸ್ಥೆ ಜತೆ ವ್ಯವಹಾರ ನಡೆಸುವ ಮುನ್ನ ಸೂಕ್ತ ಮುನ್ನೆಚ್ಚರಿಕೆ ವಹಿಸಿಕೊಳ್ಳುವಂತೆ ಮನವಿ ಮಾಡಿದ್ದಾರೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ತೆಂಗು–ಅಡಿಕೆ ನಡುವೆ ಏಲಕ್ಕಿ, ಮೆಣಸು, ಅರಿಶಿಣ | ತುಮಕೂರಿನಲ್ಲೂ ಬೆಳೆಗಾರರು ಪರ್ಯಾಯ ಆದಾಯದ ಕಡೆಗೆ ಹೆಜ್ಜೆ

ತೆಂಗು–ಅಡಿಕೆ ತೋಟಗಳ ನಡುವೆ ಅರಿಶಿಣ, ಏಲಕ್ಕಿ, ಮೆಣಸು ಬೆಳೆದು ತುಮಕೂರು ಜಿಲ್ಲೆಯ ರೈತರು…

1 day ago

ಮಳೆ ಕೊರತೆ ನೀಗಿಸಲು ಕರ್ನಾಟಕದಲ್ಲಿ ಮೋಡ ಬಿತ್ತನೆ

ಮುಂಗಾರು ಮಳೆಯ ಕೊರತೆ ಎದುರಿಸುತ್ತಿರುವ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಹೆಚ್ಚಿಸಲು ಸರ್ಕಾರ…

1 day ago

ಕಸ್ತೂರಿ ರಂಗನ್ ವರದಿ ಜಾರಿಗೆ ಅವಕಾಶವಿಲ್ಲ

ಕಸ್ತೂರಿ ರಂಗನ್ ವರದಿ ಜಾರಿಗೆ ಕರ್ನಾಟಕ ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ಶಿಕ್ಷಣ…

1 day ago

ಪ್ರತೀ ವರ್ಷ “ಕ್ಲೈಮೇಟ್ ರಿಪೋರ್ಟ್ ಕಾರ್ಡ್” ಏಕೆ ಬೇಕು..? ನಮ್ಮ ನಗರ-ಹಳ್ಳಿಗಳು ಹವಾಮಾನ ಬದಲಾವಣೆಗೆ ಎಷ್ಟು ಸಿದ್ಧ?

ಭಾರತದ 126 ಪ್ರಮುಖ ನಗರಗಳ ಹವಾಮಾನ ಸಿದ್ಧತೆಯನ್ನು ಅಳೆಯಲಾಗಿದ್ದರೂ, 2021ರ ಮೌಲ್ಯಮಾಪನದಲ್ಲಿ ರಾಷ್ಟ್ರೀಯ…

1 day ago

ಭಾರತದ ಕಾಫಿಗೆ ಜಾಗತಿಕ ಬೇಡಿಕೆ ಹೆಚ್ಚಳ : ‘ಇಂಡಿ ಕಾಫಿ’ಗೆ ಹೊಸ ಬ್ರ್ಯಾಂಡ್‌ ಒತ್ತು

ಭಾರತದ ಕಾಫಿ ರಫ್ತು ಗಳಿಕೆ 2021-22ರ ಸುಮಾರು 1 ಶತಕೋಟಿ ಡಾಲರ್‌ನಿಂದ 2025-26ರಲ್ಲಿ…

2 days ago

ಕಸವೆಂದು ಎಸೆಯುವ ಮೀನಿನ ಮುಳ್ಳು–ಹುರುಪೆಯಲ್ಲಿ ‘ಸಂಜೀವಿನಿ’!

ಮೀನಿನ ಮುಳ್ಳು ಮತ್ತು ಹುರುಪೆಯನ್ನು ವೈಜ್ಞಾನಿಕವಾಗಿ ಸಂಸ್ಕರಿಸಿ ಹಲ್ಲುಗಳ ಪುನರ್ ನಿರ್ಮಾಣ ಹಾಗೂ…

2 days ago