ವಿರೋಧ ಹಿನ್ನೆಲೆ ಮಾಸ್ಕ್‌ ದಂಡದ ಮೊತ್ತ 1000ದಿಂದ 250ಕ್ಕೆ ಇಳಿಸಿದ ರಾಜ್ಯ ಸರಕಾರ

October 7, 2020
4:18 PM

ಮೂರು ದಿನಗಳ ಹಿಂದೆ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಕೊರೋನಾ ಸೋಂಕು ನಿಯಂತ್ರಣಕ್ಕಾಗಿ ಮಾಸ್ಕ್ ಧರಿಸದೇ ಇದ್ದಲ್ಲಿ ದಂಡ ವಿಧಿಸಲಾಗುತ್ತದೆ. ನಗರ ಪ್ರದೇಶದಲ್ಲಿ ರೂ.1000 ಹಾಗೂ ಗ್ರಾಮೀಣ ಪ್ರದೇಶದಲ್ಲಿ ರೂ.500 ದಂಡ ಹಾಕಲಾಗುತ್ತದೆ ಎಂದು ತಿಳಿಸಿದ್ದರು. ಇದನ್ನು ರಾಜ್ಯ ಸರ್ಕಾರ ಅಧಿಕೃತವಾಗಿ ಜಾರಿಗೊಳಿಸಿತ್ತು.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

ಆದರೆ ಇದಕ್ಕೆ ಸಾರ್ವಜನಿಕರ ವಿರೋಧ ವ್ಯಕ್ತಪಡಿಸಿದ್ದರು. ಈ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಪ್ರಕಟಣೆ ಹೊರಡಿಸಿದ್ದು, ಇತ್ತೀಚೆಗೆ ರಾಜ್ಯ ಸರ್ಕಾರವು ನಗರ ಪ್ರದೇಶದಲ್ಲಿ ಮಾಸ್ಕ್ ಬಳಸದಿದ್ದರೆ ರೂ.1000 ದಂಡ ಮತ್ತು ಗ್ರಾಮೀಣ ಪ್ರದೇಶದಲ್ಲಿ ರೂ.500 ದಂಡ ವಿಧಿಸುವ ಕ್ರಮವನ್ನು ತೆಗೆದುಕೊಳ್ಳಲಾಗಿತ್ತು. ಆದರೆ ಸಾರ್ವಜನಿಕರ ವಿರೋಧ ಮತ್ತು ತಜ್ಞರ ಅಭಿಪ್ರಾಯದ ಹಿನ್ನಲೆಯಲ್ಲಿ ದಂಡದ ಪ್ರಮಾಣದಲ್ಲಿ ನಗರ ಪ್ರದೇಶದಲ್ಲಿ ರೂ.1000 ದಿಂದ ರೂ.250 ಮತ್ತು ಗ್ರಾಮೀಣ ಪ್ರದೇಶದಲ್ಲಿ ರೂ.500ರಿಂದ ರೂ.100ಕ್ಕೆ ಇಳಿಸಲು ತೀರ್ಮಾನಿಸಲಾಗಿರುತ್ತದೆ. ಈ ಮೂಲಕ ಸರಕಾರದೊಂದಿಗೆ ಕೈಜೋಡಿಸುವಂತೆ ಮನವಿ ಮಾಡಿದ್ದಾರೆ. ತಕ್ಷಣದಿಂದ ಜಾರಿಗೆ ಬರುವಂತೆ ಆದೇಶಿಸಿದ್ದಾರೆ. ಜನರು ಸ್ವಯಂ ಪ್ರೇರಿತರಾಗಿ ಮಾಸ್ಕ್ , ಸ್ಯಾನಿಟೈಸರ್ ಬಳಕೆ, ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಎಂದು ಅವರು ತಿಳಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 10-09-2026 | ಕರ್ನಾಟಕದಲ್ಲಿ ಮಳೆ ಏಕೆ ಇಳಿಮುಖವಾಗುತ್ತಿದೆ..?
September 10, 2026
11:29 AM
by: ಸಾಯಿಶೇಖರ್ ಕರಿಕಳ
ರಾಜ್ಯದಲ್ಲಿ ವಿದ್ಯುತ್‌ ಸಂಕಷ್ಟದ ಸುಳಿವು – ರಾತ್ರಿ 6.30 ರಿಂದ 9ರವರೆಗೆ ಪೂರೈಕೆ ವ್ಯತ್ಯಯ ಸಾಧ್ಯತೆ
September 10, 2026
10:59 AM
by: ದ ರೂರಲ್ ಮಿರರ್.ಕಾಂ
ಪರಿಸರ ಸ್ನೇಹಿ ಗೌರಿ-ಗಣೇಶ ಹಬ್ಬ : ಮಂಗಳೂರು ಮಹಾನಗರಪಾಲಿಕೆ ಸೂಚನೆ
September 9, 2026
9:26 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 09-09-2026 | ಕರ್ನಾಟಕದಲ್ಲಿ ಮಳೆಯ ಚಿತ್ರಣ ಬದಲಾಗುತ್ತಿದೆ – ಸೆ.11ರಿಂದ ಕರಾವಳಿಯಲ್ಲಿ ಬದಲಾವಣೆ
September 9, 2026
1:50 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror