ಮೂರು ದಿನಗಳ ಹಿಂದೆ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಕೊರೋನಾ ಸೋಂಕು ನಿಯಂತ್ರಣಕ್ಕಾಗಿ ಮಾಸ್ಕ್ ಧರಿಸದೇ ಇದ್ದಲ್ಲಿ ದಂಡ ವಿಧಿಸಲಾಗುತ್ತದೆ. ನಗರ ಪ್ರದೇಶದಲ್ಲಿ ರೂ.1000 ಹಾಗೂ ಗ್ರಾಮೀಣ ಪ್ರದೇಶದಲ್ಲಿ ರೂ.500 ದಂಡ ಹಾಕಲಾಗುತ್ತದೆ ಎಂದು ತಿಳಿಸಿದ್ದರು. ಇದನ್ನು ರಾಜ್ಯ ಸರ್ಕಾರ ಅಧಿಕೃತವಾಗಿ ಜಾರಿಗೊಳಿಸಿತ್ತು.
ಆದರೆ ಇದಕ್ಕೆ ಸಾರ್ವಜನಿಕರ ವಿರೋಧ ವ್ಯಕ್ತಪಡಿಸಿದ್ದರು. ಈ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಪ್ರಕಟಣೆ ಹೊರಡಿಸಿದ್ದು, ಇತ್ತೀಚೆಗೆ ರಾಜ್ಯ ಸರ್ಕಾರವು ನಗರ ಪ್ರದೇಶದಲ್ಲಿ ಮಾಸ್ಕ್ ಬಳಸದಿದ್ದರೆ ರೂ.1000 ದಂಡ ಮತ್ತು ಗ್ರಾಮೀಣ ಪ್ರದೇಶದಲ್ಲಿ ರೂ.500 ದಂಡ ವಿಧಿಸುವ ಕ್ರಮವನ್ನು ತೆಗೆದುಕೊಳ್ಳಲಾಗಿತ್ತು. ಆದರೆ ಸಾರ್ವಜನಿಕರ ವಿರೋಧ ಮತ್ತು ತಜ್ಞರ ಅಭಿಪ್ರಾಯದ ಹಿನ್ನಲೆಯಲ್ಲಿ ದಂಡದ ಪ್ರಮಾಣದಲ್ಲಿ ನಗರ ಪ್ರದೇಶದಲ್ಲಿ ರೂ.1000 ದಿಂದ ರೂ.250 ಮತ್ತು ಗ್ರಾಮೀಣ ಪ್ರದೇಶದಲ್ಲಿ ರೂ.500ರಿಂದ ರೂ.100ಕ್ಕೆ ಇಳಿಸಲು ತೀರ್ಮಾನಿಸಲಾಗಿರುತ್ತದೆ. ಈ ಮೂಲಕ ಸರಕಾರದೊಂದಿಗೆ ಕೈಜೋಡಿಸುವಂತೆ ಮನವಿ ಮಾಡಿದ್ದಾರೆ. ತಕ್ಷಣದಿಂದ ಜಾರಿಗೆ ಬರುವಂತೆ ಆದೇಶಿಸಿದ್ದಾರೆ. ಜನರು ಸ್ವಯಂ ಪ್ರೇರಿತರಾಗಿ ಮಾಸ್ಕ್ , ಸ್ಯಾನಿಟೈಸರ್ ಬಳಕೆ, ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಎಂದು ಅವರು ತಿಳಿಸಿದ್ದಾರೆ.
ಮಾಘ ಮಾಸ ಕೃಷ್ಣ ಪಕ್ಷದ ಚತುರ್ದಶಿಯಂದು ಆಚರಿಸಲಾಗುವ ಶಿವರಾತ್ರಿ, ಶಿವ ಭಕ್ತರ ಪಾಲಿಗೆ…
ಧರ್ಮಸ್ಥಳಕ್ಕೆ ಸಂಬಂಧಿಸಿದಂತೆ “ಮಾತು ಬಿಡ ಮಂಜುನಾಥ” ಎಂಬ ಮಾತು ಎಲ್ಲರಿಗೂ ಚಿರಪರಿಚಿತವಾಗಿದೆ. ಮಾತೇ…
ಮಂಗಳೂರು ಮಹಾನಗರಪಾಲಿಕೆ ವತಿಯಿಂದ ತುಂಬೆಯಲ್ಲಿರುವ ಕಿಂಡಿ ಅಣೆಕಟ್ಟಿನ ಬಳಿ ನೇತ್ರಾವತಿ ನದಿಗೆ ಗಂಗಾ…
ಈ ಬಾರಿ ಫೆಬ್ರವರಿ ತಿಂಗಳಲ್ಲಿ ವಾಡಿಕೆಗಿಂತ 2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು…
ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಚಾಲಕ ಮತ್ತು ನಿರ್ವಾಹಕರ ಮೇಲೆ ಪ್ರಯಾಣಿಕರು…
ಕೃಷಿ ಹಾಗೂ ರೈತರ ಅಭ್ಯುದಯವೇ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯಗಳ ಮೂಲ ಆಶಯವಾಗಿದೆ…