ಶಿವಮೊಗ್ಗದಲ್ಲಿ ಮತ್ತೆ ಗಲಾಟೆ | ಕೊಲೆಯಾದ ಹರ್ಷ ನಿವಾಸದ ಬಳಿ ದುಷ್ಕರ್ಮಿಗಳಿಂದ ಬೆದರಿಕೆ | ಯುವಕನಿಗೆ ಹಲ್ಲೆ |

October 25, 2022
10:08 AM

ಶಿವಮೊಗ್ಗದಲ್ಲಿ(shivamogga) ಇತ್ತೀಚೆಗೆ ಕೊಲೆಯಾದ ಹರ್ಷ(Harsha) ನಿವಾಸದ ಬಳಿ  ದುಷ್ಕರ್ಮಿಗಳು ಅವಾಚ್ಯ ಪದ ಬಳಸಿ ಗಲಾಟೆ ನಡೆಸಿದ್ದು, ಈ ಸಂದರ್ಭ ಯುವನೊಬ್ಬನಿಗೆ ಗಾಯವಾಗಿದೆ.  ಹೀಗಾಗಿ ಅಶಾಂತಿ ಉಂಟಾಗಿ ಶಿವಮೊಗ್ಗದಲ್ಲಿ ಮತ್ತೆ ಕಲ್ಲು ತೂರಾಟ ಸಹ ನಡೆಸಲಾಗಿದೆ. ಪೊಲೀಸರು ಬಿಗು ಬಂದೋಬಸ್ತ್‌ ಕೈಗೊಂಡಿದ್ದಾರೆ.

ಶಿವಮೊಗ್ಗ ನಗರದ ಕೆಲವು ಭಾಗಗಳಲ್ಲಿ  ಅಪರಿಚಿತರು ಲಾಂಗು ಮತ್ತು ಮಚ್ಚು ಝಳಪಿಸುತ್ತಾ ಭಯದ ವಾತಾವರಣ ನಿರ್ಮಿಸಲು ಮುಂದಾಗಿದ್ದರು ಎಂದು ವರದಿಯಾಗಿದೆ. ಮಾರಕಾಸ್ತ್ರಗಳನ್ನು ಹಿಡಿದುಕೊಂಡು ಬಂದ ದುಷ್ಕರ್ಮಿಗಳು ಮೃತ ಹರ್ಷ ಕುಟುಂಬಸ್ಥರಿಗೆ ದುಷ್ಕರ್ಮಿಗಳಿಂದ ಬೆದರಿಕೆ‌ ಹಾಕಿದ್ದಾರೆ. ವಿಷಯ ತಿಳಿದು ಸ್ಥಳೀಯರು ಹೋದಾಗ ದುಷ್ಕರ್ಮಿಗಳು ಓಡಿದ್ದಾರೆ. ಈ ಸಂದರ್ಭ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ ಬಗ್ಗೆ ವರದಿಯಾಗಿದೆ. ಕಲ್ಲು ತೂರಟದಲ್ಲಿ  ಪ್ರಕಾಶ್‌ ಎಂಬವರಿಗೆ ಗಾಯವಾಗಿದ್ದು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಸ್ಥಳಕ್ಕಾಗಮಿಸಿದ ಪೊಲೀಸರ  ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.  ರಾತ್ರಿ ಮೂರು ಬೈಕ್‌ಗಳಲ್ಲಿ ಸುಮಾರು 9 ಮಂದಿ ಮಾಸ್ಕ್ ಹಾಕಿಕೊಂಡು ಹೋಗುತ್ತಿದ್ದರು ಎಂದು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಈ ನಡುವೆ ಖಾಸಗಿ ಆಸ್ಪತ್ರೆಯ ಸಿಬ್ಬಂದಿ ವಿಜಯ್‌ ಎಂಬವರ ಹತ್ಯೆಯಾಗಿದೆ. ಆದರೆ ಈ ಹತ್ಯೆ ಪರಿಚಿತರಿಂದಲೇ ನಡೆದಿದ್ದು, ಖಾಸಗಿ ವಿಚಾರದಲ್ಲಿ ಈ ಕೃತ್ಯ ನಡೆದಿದೆ ಎಂದು ಪೊಲೀಸರು ಶಂಕಿಸಿದ್ದಾರೆ.ಈ ಬಗ್ಗೆಯೂ ತನಿಖೆ ನಡೆಯುತ್ತಿದೆ.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮ್ಯಾನ್ಮಾರ್‌ನಿಂದ ಭಾರತಕ್ಕೆ ಅಕ್ರಮ ಅಡಿಕೆ ಜಾಲ | ಮೂರು ಹಂತದ ಕಳ್ಳಸಾಗಣೆ ಜಾಲವನ್ನು ಬಯಲಿಗೆಳೆದ ಇಡಿ
August 7, 2026
7:34 AM
by: ದ ರೂರಲ್ ಮಿರರ್.ಕಾಂ
‘ಅನ್ನಂ ಬ್ರಹ್ಮ’ ಭಾವದಿಂದ ಆಹಾರ ಸೇವಿಸಿದರೆ ಮುಕ್ತಿಯ ಸಾಧನ – ರಾಘವೇಶ್ವರ ಶ್ರೀ
August 6, 2026
11:04 PM
by: ದ ರೂರಲ್ ಮಿರರ್.ಕಾಂ
ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆ ತಾತ್ಕಾಲಿಕ ಮುಂದೂಡಿಕೆ | ಪ್ರತಿಭಟನಾನಿರತ ವಿದ್ಯಾರ್ಥಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಭರವಸೆ
August 6, 2026
9:23 PM
by: ದ ರೂರಲ್ ಮಿರರ್.ಕಾಂ
ಕರ್ನಾಟಕದಲ್ಲಿ ಅತ್ಯಾಧುನಿಕ ‘ಸಂಯೋಜಿತ ಡಿಜಿಟಲ್ ಬೆಳೆ ಸಮೀಕ್ಷೆ’ | ಉಪಗ್ರಹ, ಡ್ರೋನ್‌, AI ತಂತ್ರಜ್ಞಾನ ಬಳಕೆಗೆ ಸರ್ಕಾರದ ಚಾಲನೆ
August 6, 2026
9:10 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror