ಶಿವಮೊಗ್ಗದಲ್ಲಿ(shivamogga) ಇತ್ತೀಚೆಗೆ ಕೊಲೆಯಾದ ಹರ್ಷ(Harsha) ನಿವಾಸದ ಬಳಿ ದುಷ್ಕರ್ಮಿಗಳು ಅವಾಚ್ಯ ಪದ ಬಳಸಿ ಗಲಾಟೆ ನಡೆಸಿದ್ದು, ಈ ಸಂದರ್ಭ ಯುವನೊಬ್ಬನಿಗೆ ಗಾಯವಾಗಿದೆ. ಹೀಗಾಗಿ ಅಶಾಂತಿ ಉಂಟಾಗಿ ಶಿವಮೊಗ್ಗದಲ್ಲಿ ಮತ್ತೆ ಕಲ್ಲು ತೂರಾಟ ಸಹ ನಡೆಸಲಾಗಿದೆ. ಪೊಲೀಸರು ಬಿಗು ಬಂದೋಬಸ್ತ್ ಕೈಗೊಂಡಿದ್ದಾರೆ.
ಶಿವಮೊಗ್ಗ ನಗರದ ಕೆಲವು ಭಾಗಗಳಲ್ಲಿ ಅಪರಿಚಿತರು ಲಾಂಗು ಮತ್ತು ಮಚ್ಚು ಝಳಪಿಸುತ್ತಾ ಭಯದ ವಾತಾವರಣ ನಿರ್ಮಿಸಲು ಮುಂದಾಗಿದ್ದರು ಎಂದು ವರದಿಯಾಗಿದೆ. ಮಾರಕಾಸ್ತ್ರಗಳನ್ನು ಹಿಡಿದುಕೊಂಡು ಬಂದ ದುಷ್ಕರ್ಮಿಗಳು ಮೃತ ಹರ್ಷ ಕುಟುಂಬಸ್ಥರಿಗೆ ದುಷ್ಕರ್ಮಿಗಳಿಂದ ಬೆದರಿಕೆ ಹಾಕಿದ್ದಾರೆ. ವಿಷಯ ತಿಳಿದು ಸ್ಥಳೀಯರು ಹೋದಾಗ ದುಷ್ಕರ್ಮಿಗಳು ಓಡಿದ್ದಾರೆ. ಈ ಸಂದರ್ಭ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ ಬಗ್ಗೆ ವರದಿಯಾಗಿದೆ. ಕಲ್ಲು ತೂರಟದಲ್ಲಿ ಪ್ರಕಾಶ್ ಎಂಬವರಿಗೆ ಗಾಯವಾಗಿದ್ದು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಸ್ಥಳಕ್ಕಾಗಮಿಸಿದ ಪೊಲೀಸರ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ರಾತ್ರಿ ಮೂರು ಬೈಕ್ಗಳಲ್ಲಿ ಸುಮಾರು 9 ಮಂದಿ ಮಾಸ್ಕ್ ಹಾಕಿಕೊಂಡು ಹೋಗುತ್ತಿದ್ದರು ಎಂದು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಈ ನಡುವೆ ಖಾಸಗಿ ಆಸ್ಪತ್ರೆಯ ಸಿಬ್ಬಂದಿ ವಿಜಯ್ ಎಂಬವರ ಹತ್ಯೆಯಾಗಿದೆ. ಆದರೆ ಈ ಹತ್ಯೆ ಪರಿಚಿತರಿಂದಲೇ ನಡೆದಿದ್ದು, ಖಾಸಗಿ ವಿಚಾರದಲ್ಲಿ ಈ ಕೃತ್ಯ ನಡೆದಿದೆ ಎಂದು ಪೊಲೀಸರು ಶಂಕಿಸಿದ್ದಾರೆ.ಈ ಬಗ್ಗೆಯೂ ತನಿಖೆ ನಡೆಯುತ್ತಿದೆ.
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ…
16.06.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ಕೃಷಿಯನ್ನು ನಂಬಿ ಕೆಲಸ ಮಾಡಿದರೆ ಯಶಸ್ಸು ಕಾಣಬಹುದು ಎಂಬುದನ್ನು ರೈತ ಯೋಗೇಶ್ ತೋರಿಸಿಕೊಟ್ಟಿದ್ದಾರೆ.…
ನುಡಿದಂತೆ ನಡೆದಾತ ‘ರಾಜಾ ಹರಿಶ್ಚಂದ್ರ’. ಸತ್ಯಕ್ಕಾಗಿ ಸರ್ವಸ್ವವನ್ನೂ ತ್ಯಾಗ ಮಾಡಿದ ತ್ಯಾಗಿ. ಅನೃತವನ್ನಾಡದೆ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಸಾರ್ವಜನಿಕ ಹಿತದೃಷ್ಠಿಯಿಂದ ಆಗುಂಬೆ ಘಾಟಿಯ ಮೂಲಕ ನಾಳೆಯಿಂದ ಸೆಪ್ಟಂಬರ್ 30 ರವರೆಗೆ ಲಘು…