ಶಿವಮೊಗ್ಗದಲ್ಲಿ(shivamogga) ಇತ್ತೀಚೆಗೆ ಕೊಲೆಯಾದ ಹರ್ಷ(Harsha) ನಿವಾಸದ ಬಳಿ ದುಷ್ಕರ್ಮಿಗಳು ಅವಾಚ್ಯ ಪದ ಬಳಸಿ ಗಲಾಟೆ ನಡೆಸಿದ್ದು, ಈ ಸಂದರ್ಭ ಯುವನೊಬ್ಬನಿಗೆ ಗಾಯವಾಗಿದೆ. ಹೀಗಾಗಿ ಅಶಾಂತಿ ಉಂಟಾಗಿ ಶಿವಮೊಗ್ಗದಲ್ಲಿ ಮತ್ತೆ ಕಲ್ಲು ತೂರಾಟ ಸಹ ನಡೆಸಲಾಗಿದೆ. ಪೊಲೀಸರು ಬಿಗು ಬಂದೋಬಸ್ತ್ ಕೈಗೊಂಡಿದ್ದಾರೆ.
ಶಿವಮೊಗ್ಗ ನಗರದ ಕೆಲವು ಭಾಗಗಳಲ್ಲಿ ಅಪರಿಚಿತರು ಲಾಂಗು ಮತ್ತು ಮಚ್ಚು ಝಳಪಿಸುತ್ತಾ ಭಯದ ವಾತಾವರಣ ನಿರ್ಮಿಸಲು ಮುಂದಾಗಿದ್ದರು ಎಂದು ವರದಿಯಾಗಿದೆ. ಮಾರಕಾಸ್ತ್ರಗಳನ್ನು ಹಿಡಿದುಕೊಂಡು ಬಂದ ದುಷ್ಕರ್ಮಿಗಳು ಮೃತ ಹರ್ಷ ಕುಟುಂಬಸ್ಥರಿಗೆ ದುಷ್ಕರ್ಮಿಗಳಿಂದ ಬೆದರಿಕೆ ಹಾಕಿದ್ದಾರೆ. ವಿಷಯ ತಿಳಿದು ಸ್ಥಳೀಯರು ಹೋದಾಗ ದುಷ್ಕರ್ಮಿಗಳು ಓಡಿದ್ದಾರೆ. ಈ ಸಂದರ್ಭ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ ಬಗ್ಗೆ ವರದಿಯಾಗಿದೆ. ಕಲ್ಲು ತೂರಟದಲ್ಲಿ ಪ್ರಕಾಶ್ ಎಂಬವರಿಗೆ ಗಾಯವಾಗಿದ್ದು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಸ್ಥಳಕ್ಕಾಗಮಿಸಿದ ಪೊಲೀಸರ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ರಾತ್ರಿ ಮೂರು ಬೈಕ್ಗಳಲ್ಲಿ ಸುಮಾರು 9 ಮಂದಿ ಮಾಸ್ಕ್ ಹಾಕಿಕೊಂಡು ಹೋಗುತ್ತಿದ್ದರು ಎಂದು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಈ ನಡುವೆ ಖಾಸಗಿ ಆಸ್ಪತ್ರೆಯ ಸಿಬ್ಬಂದಿ ವಿಜಯ್ ಎಂಬವರ ಹತ್ಯೆಯಾಗಿದೆ. ಆದರೆ ಈ ಹತ್ಯೆ ಪರಿಚಿತರಿಂದಲೇ ನಡೆದಿದ್ದು, ಖಾಸಗಿ ವಿಚಾರದಲ್ಲಿ ಈ ಕೃತ್ಯ ನಡೆದಿದೆ ಎಂದು ಪೊಲೀಸರು ಶಂಕಿಸಿದ್ದಾರೆ.ಈ ಬಗ್ಗೆಯೂ ತನಿಖೆ ನಡೆಯುತ್ತಿದೆ.
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…