Advertisement
ಸುದ್ದಿಗಳು

ಶಿವಮೊಗ್ಗದಲ್ಲಿ ಮತ್ತೆ ಗಲಾಟೆ | ಕೊಲೆಯಾದ ಹರ್ಷ ನಿವಾಸದ ಬಳಿ ದುಷ್ಕರ್ಮಿಗಳಿಂದ ಬೆದರಿಕೆ | ಯುವಕನಿಗೆ ಹಲ್ಲೆ |

Share

ಶಿವಮೊಗ್ಗದಲ್ಲಿ(shivamogga) ಇತ್ತೀಚೆಗೆ ಕೊಲೆಯಾದ ಹರ್ಷ(Harsha) ನಿವಾಸದ ಬಳಿ  ದುಷ್ಕರ್ಮಿಗಳು ಅವಾಚ್ಯ ಪದ ಬಳಸಿ ಗಲಾಟೆ ನಡೆಸಿದ್ದು, ಈ ಸಂದರ್ಭ ಯುವನೊಬ್ಬನಿಗೆ ಗಾಯವಾಗಿದೆ.  ಹೀಗಾಗಿ ಅಶಾಂತಿ ಉಂಟಾಗಿ ಶಿವಮೊಗ್ಗದಲ್ಲಿ ಮತ್ತೆ ಕಲ್ಲು ತೂರಾಟ ಸಹ ನಡೆಸಲಾಗಿದೆ. ಪೊಲೀಸರು ಬಿಗು ಬಂದೋಬಸ್ತ್‌ ಕೈಗೊಂಡಿದ್ದಾರೆ.

ಶಿವಮೊಗ್ಗ ನಗರದ ಕೆಲವು ಭಾಗಗಳಲ್ಲಿ  ಅಪರಿಚಿತರು ಲಾಂಗು ಮತ್ತು ಮಚ್ಚು ಝಳಪಿಸುತ್ತಾ ಭಯದ ವಾತಾವರಣ ನಿರ್ಮಿಸಲು ಮುಂದಾಗಿದ್ದರು ಎಂದು ವರದಿಯಾಗಿದೆ. ಮಾರಕಾಸ್ತ್ರಗಳನ್ನು ಹಿಡಿದುಕೊಂಡು ಬಂದ ದುಷ್ಕರ್ಮಿಗಳು ಮೃತ ಹರ್ಷ ಕುಟುಂಬಸ್ಥರಿಗೆ ದುಷ್ಕರ್ಮಿಗಳಿಂದ ಬೆದರಿಕೆ‌ ಹಾಕಿದ್ದಾರೆ. ವಿಷಯ ತಿಳಿದು ಸ್ಥಳೀಯರು ಹೋದಾಗ ದುಷ್ಕರ್ಮಿಗಳು ಓಡಿದ್ದಾರೆ. ಈ ಸಂದರ್ಭ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ ಬಗ್ಗೆ ವರದಿಯಾಗಿದೆ. ಕಲ್ಲು ತೂರಟದಲ್ಲಿ  ಪ್ರಕಾಶ್‌ ಎಂಬವರಿಗೆ ಗಾಯವಾಗಿದ್ದು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಸ್ಥಳಕ್ಕಾಗಮಿಸಿದ ಪೊಲೀಸರ  ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.  ರಾತ್ರಿ ಮೂರು ಬೈಕ್‌ಗಳಲ್ಲಿ ಸುಮಾರು 9 ಮಂದಿ ಮಾಸ್ಕ್ ಹಾಕಿಕೊಂಡು ಹೋಗುತ್ತಿದ್ದರು ಎಂದು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

Advertisement

ಈ ನಡುವೆ ಖಾಸಗಿ ಆಸ್ಪತ್ರೆಯ ಸಿಬ್ಬಂದಿ ವಿಜಯ್‌ ಎಂಬವರ ಹತ್ಯೆಯಾಗಿದೆ. ಆದರೆ ಈ ಹತ್ಯೆ ಪರಿಚಿತರಿಂದಲೇ ನಡೆದಿದ್ದು, ಖಾಸಗಿ ವಿಚಾರದಲ್ಲಿ ಈ ಕೃತ್ಯ ನಡೆದಿದೆ ಎಂದು ಪೊಲೀಸರು ಶಂಕಿಸಿದ್ದಾರೆ.ಈ ಬಗ್ಗೆಯೂ ತನಿಖೆ ನಡೆಯುತ್ತಿದೆ.

 

Advertisement

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕಾಪುವಿನಲ್ಲಿ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ಗೆ ಚಾಲನೆ – 400ಕ್ಕೂ ಅಧಿಕ ಪ್ರತಿಭೆಗಳು ಭಾಗಿ, 24 ಮಂದಿಗೆ ರಾಷ್ಟ್ರಮಟ್ಟದ ಅವಕಾಶ

ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…

1 hour ago

34 ಟನ್ ಅಡಿಕೆ ವಂಚನೆ – ಅಸ್ಸಾಂ ವ್ಯಾಪಾರಿಗಳಿಗೆ ಹರಿಯಾಣದಲ್ಲಿ ವಂಚನೆ..!

ಅಸ್ಸಾಂನ ಇಬ್ಬರು ಅಡಿಕೆ ವ್ಯಾಪಾರಿಗಳಿಗೆ ಸೇರಿದ ₹1.12 ಕೋಟಿ ಮೌಲ್ಯದ 34 ಟನ್…

2 hours ago

ದೇಶದಲ್ಲಿ ಬರಗಾಲದ ಸಾಧ್ಯತೆ – ರೈತರನ್ನು ಉಳಿಸಲು ಎಲ್ಲರೂ ಕೈಜೋಡಿಸಬೇಕು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಈ ವರ್ಷ ದೇಶದಲ್ಲಿ ಬರಗಾಲ ಉಂಟಾಗುವ ಸಾಧ್ಯತೆ ಇರುವುದರಿಂದ ರೈತರನ್ನು ರಕ್ಷಿಸಲು ಎಲ್ಲರೂ…

2 hours ago

ಹಲಸು ಈಗ ಕೇವಲ ಹಣ್ಣು ಅಲ್ಲ… ಸೂಪರ್ ಫುಡ್..!‌ ಹಲಸಿನ ಹಣ್ಣಿನ ಔಷಧೀಯ ಗುಣಗಳಿಗೆ ಕೇರಳದಲ್ಲಿ ಪ್ರಚಾರ ಅಭಿಯಾನ

ಒಂದು ಕಾಲದಲ್ಲಿ ಬಡವರ ಹಣ್ಣು ಎಂದೇ ಕರೆಯಲ್ಪಟ್ಟ ಹಲಸು ಈಗ ಆರೋಗ್ಯಕರ ಆಹಾರ…

1 day ago

ಧರ್ಮಸ್ಥಳದಲ್ಲಿ ವಿಜಯೇಂದ್ರ ಪ್ರಾರ್ಥನೆ: “ರೈತರಿಗೆ ಉತ್ತಮ ಬೆಲೆ, ಬಿಜೆಪಿ ಸರ್ಕಾರ ಮತ್ತೆ ಅಧಿಕಾರಕ್ಕೆ ಬರಲಿ”

ಧರ್ಮಸ್ಥಳದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ರೈತರಿಗೆ ಉತ್ತಮ…

1 day ago

ಅಡಿಕೆ ಕನಿಷ್ಠ ಆಮದು ಬೆಲೆ (MIP) ಪರಿಷ್ಕರಣೆ – ರೈತರ ಹಿತಾಸಕ್ತಿಗೆ ಕೇಂದ್ರ ಸರ್ಕಾರದ ತ್ವರಿತ ನೀತಿ ನಿರ್ಧಾರ ಅನಿವಾರ್ಯ

ಅಡಿಕೆ ಉತ್ಪಾದನಾ ವೆಚ್ಚ ಭಾರೀ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಕನಿಷ್ಠ ಆಮದು ಬೆಲೆ (MIP)ಯನ್ನು…

2 days ago