ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದು ಕಡ್ಡಾಯವಾಗಿದೆ. ಕೇಂದ್ರ ಆರೋಗ್ಯ ಇಲಾಖೆಯ ಸಭೆಯಲ್ಲಿ ಈ ಕುರಿತು ನಿರ್ಧಾರ ಕೈಗೊಳ್ಳಲಾಗಿದೆ.ಇನ್ನೂ ಕೋವಿಡ್ ಮುಕ್ತವಾಗದ ಹಿನ್ನಲೆಯಲ್ಲಿ ಮಾಸ್ಕ್ ಕಡ್ಡಾಯ ನಿಯಮ ಮುಂದುವರೆಸಲು ತೀರ್ಮಾನಿಸಲಾಗಿದೆ.
ದೇಶದಲ್ಲಿ ಒಮಿಕ್ರಾನ್ ಮತ್ತು ಕೊರೊನಾ ಸ್ಥಿತಿಯ ಕುರಿತಾಗಿ ಕೇಂದ್ರ ಆರೋಗ್ಯ ಸಚಿವ ಡಾ. ಮನ್ ಸುಖ್ ಮಾಂಡವಿಯಾ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಭೆ ನಡೆಸಲಾಗಿದೆ. ಸಭೆಯಲ್ಲಿ ಡಾ. ವಿ.ಕೆ. ಪೌಲ್, ಡಾ.ಎನ್.ಕೆ. ಅರೋರಾ, ಇತರ ಹಿರಿಯ ಆರೋಗ್ಯ ಅಧಿಕಾರಿಗಳು ಭಾಗವಹಿಸಿದ್ದರು.
ಹೊಸ ಒಮಿಕ್ರಾನ್ ರೂಪಾಂತರ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಾಸ್ಕ್ ಧರಿಸುವುದು ಅಗತ್ಯವಾಗಿದೆ ಎಂದು ಸಚಿವಾಲಯ ನಿರ್ಧರಿಸಿದೆ. ದೇಶಾದ್ಯಂತ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದು ಸೇರಿದಂತೆ ಕೋವಿಡ್ ಮಾರ್ಗ ಸೂಚಿಗಳನ್ನು ಮುಂದುವರೆಸುವ ಬಗ್ಗೆ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಸುದ್ದಿಸಂಸ್ಥೆ ವರದಿ ಮಾಡಿದೆ.
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಜುಲೈ 23ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ…
23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…