ವರ್ಕ್ ಫ್ರಂ ಹೋಮ್ ನಿಲ್ಲಿಸಿದ್ದಕ್ಕೆ ಮಹಿಳಾ ಟೆಕ್ಕಿಗಳಿಂದ ಸಾಮೂಹಿಕ ರಾಜೀನಾಮೆ |

June 14, 2023
1:09 PM

ಮಹಾಮಾರಿ ಕೊರೊನಾ ಹರಡಿದ ನಂತರ ದೇಶಾದ್ಯಂತ ವರ್ಕ್ ಫ್ರಂ ಹೋಮ್ ಜಾರಿಗೊಳಿಸಲಾಗಿತ್ತು. ಇದೀಗ ಕಂಪನಿಯೊಂದು ವರ್ಕ್ ಫ್ರಂ ಹೋಂ ಸಾಕು, ಆಫೀಸಿಗೆ ಬಂದು ಕೆಲಸ ಮಾಡಿ ಎಂದು ಸೂಚನೆ ನೀಡಿದೆ. ಈ ಬೆನ್ನಲ್ಲೇ ಮಹಿಳಾ ಟೆಕ್ಕಿಗಳು ನಾವು ಇದಕ್ಕೆ ಒಪ್ಪುವುದಿಲ್ಲ ಎಂದು  ಸಾಮೂಹಿಕ ರಾಜೀನಾಮೆ ನೀಡಲು ಮುಂದಾಗಿದ್ದಾರೆ.

ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (TCS) ಕಂಪನಿಯು ಆಫೀಸಿಗೆ ಬಂದು ಕೆಲಸ ಮಾಡುವಂತೆ ತನ್ನ ಉದ್ಯೋಗಿಗಳಿಗೆ ಸೂಚನೆ ನೀಡಿದೆ. ಈ ಸಂಬಂಧ ಟಿಸಿಎಸ್ ಮಾನವ ಸಂಪನ್ಮೂಲ ಮುಖ್ಯಸ್ಥ ಮಿಲಿಂದ್ ಲಕ್ಕಡ್  ಮಾತನಾಡಿ, ಕಂಪನಿಯು ಮನೆಯಿಂದಲೇ ಕೆಲಸ ಮಾಡಿದ್ದು ಸಾಕು, ಕಚೇರಿಗೆ ಬಂದು ಕಾರ್ಯ ನಿರ್ವಹಿಸಿ ಎಂದು ಹೇಳಿದ ನಂತರ ಅನೇಕ ಮಂದಿ ಉದ್ಯೋಗಿಗಳಿಂದ ರಾಜೀನಾಮೆ ಪತ್ರಗಳು ಬಂದವು.

ಸಾಮಾನ್ಯವಾಗಿ ಟಿಸಿಎಸ್ ಕಂಪನಿಯಲ್ಲಿ ಹಿಂದೆಲ್ಲ ಪುರುಷರಿಗಿಂತ ಮಹಿಳೆಯರು ರಾಜೀನಾಮೆ ನೀಡುವ ಪ್ರಮಾಣ ಕಡಿಮೆ ಇತ್ತು. ಆದರೆ ಈ ಬಾರಿ ಮಾತ್ರ ಪುರುಷರಿಗಿಂತ ಮಹಿಳೆಯರೇ ಹೆಚ್ಚು ರಾಜೀನಾಮೆ ಕೊಟ್ಟಿದ್ದಾರೆ. ರಾಜೀನಾಮೆಗೆ ಬೇರೆ ಬೇರೆ ಕಾರಣಗಳಿರಬಹುದಾದರೂ ಪ್ರಮುಖ ಕಾರಣ ಮಾತ್ರ ವರ್ಕ್ ಫ್ರಂ ಹೋಮ್ ರದ್ದತಿ ಎಂಬುದು ಹೇಳಿದ್ದಾರೆ.

ಟಿಸಿಎಸ್ ನಲ್ಲಿ 6,00,000 ಕ್ಕೂ ಹೆಚ್ಚು ಜನರು ಕೆಲಸ ಮಾಡುತ್ತಾರೆ. ಅದರಲ್ಲಿ 35% ಮಹಿಳಾ ಉದ್ಯೋಗಿಗಳಿದ್ದಾರೆ. ಉದ್ಯೋಗಿಗಳಿಗೆ ಮನೆಯಿಂದಲೇ ಕೆಲಸ ಮಾಡುವ ಅವಕಾಶವನ್ನು ಕಂಪನಿ ನಿಲ್ಲಿಸಿದ ನಂತರ ಮಹಿಳಾ ಟೆಕ್ಕಿಗಳು ಹೆಚ್ಚಾಗಿ ರಾಜೀನಾಮೆಗಳನ್ನು ನೀಡುತ್ತಿದ್ದಾರೆ ಎಂದು ಅವರು ತಿಳಿಸಿದರು.

ಒಟ್ಟಿನಲ್ಲಿ ಕೋವಿಡ್ ಕಾರಣಕ್ಕೆ ಉದ್ಯೋಗಿಗಳಿಗೆ ಪ್ರಪಂಚದಾದ್ಯಂತ ವರ್ಕ್ ಫ್ರಂ ಹೋಮ್ ಸೌಲಭ್ಯ ನೀಡಲಾಗಿತ್ತು. ಹಲವು ಸಮೀಕ್ಷೆಗ ಪ್ರಕಾರ, ಈ ಸೌಲಭ್ಯದಿಂದಾಗಿ ಕೆಲಸದ ಔಟ್‍ಪು‌ಟ್ ಹೆಚ್ಚಾಗಿದೆ. ಕಂಪನಿಗಳಿಗೂ ಕೆಲವೊಂದಿಷ್ಟು ಆಡಳಿತಾತ್ಮಕ ವೆಚ್ಚ ತಗ್ಗಿದೆ ಎನ್ನಲಾಗಿತ್ತು. ಆದರೆ ಮನೆಯಿಂದ ಕೆಲಸ ಮಾಡಿದರೆ ತಂಡಗಳನ್ನು ನಿರ್ವಹಿಸುವುದು ಕಷ್ಟ ಎಂಬುದು ಕೆಲ ಕಂಪನಿಗಳ ಮ್ಯಾನೇಜ್ಮೆಂಟ್ ವಾದವಾಗಿತ್ತು. ಆದರೆ ಹೆಚ್ಚಿನ ಉದ್ಯೋಗಿಗಳು ಈಗಲೂ ವರ್ಕ್ ಫ್ರಂ ಹೋಮ್ ಸೌಲಭ್ಯವನ್ನೇ ಇಷ್ಟಪಡುತ್ತಾ ಇದ್ದಾರಂತೆ. ಮ್ಯಾನೇಜ್ಮೆಂಟ್ ಬಲವಂತಕ್ಕೆ ಕಚೇರಿಗೆ ಬರುವ ಉದ್ಯೋಗಿಗಳ ಸಂಖ್ಯೆ ಹೆಚ್ಚಿದೆ ಎಂದು ಕೆಲ ಸಮೀಕ್ಷೆಗಳು ಹೇಳಿವೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!
April 1, 2026
6:29 AM
by: ದ ರೂರಲ್ ಮಿರರ್.ಕಾಂ
ಗ್ಯಾಸ್ ಸಿಲಿಂಡರ್ ಕೊರತೆ ಪರಿಣಾಮ : ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆ
April 1, 2026
6:13 AM
by: ಮಿರರ್‌ ಡೆಸ್ಕ್
ಹಸಿರು ಅಮೋನಿಯಾ ಒಪ್ಪಂದಗಳು | ಭಾರತದ ಇಂಧನ ಭದ್ರತೆಗೆ ಹೊಸ ಬಲ..! 2030 ಗುರಿಗೆ ವೇಗ
April 1, 2026
6:07 AM
by: ಮಿರರ್‌ ಡೆಸ್ಕ್
ಕರಾವಳಿಯಲ್ಲಿ ಮಳೆಯ ರಭಸ | ಸುಬ್ರಹ್ಮಣ್ಯ ಆಸುಪಾಸಿನಲ್ಲಿ 50 ಮಿಮೀಗೂ ಹೆಚ್ಚು! ರಾಜ್ಯದ ಹಲವೆಡೆ ಇನ್ನೂ 2 ದಿನ ಮಳೆ ಅಲರ್ಟ್
April 1, 2026
5:56 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror