Advertisement
ಸುದ್ದಿಗಳು

ವರ್ಕ್ ಫ್ರಂ ಹೋಮ್ ನಿಲ್ಲಿಸಿದ್ದಕ್ಕೆ ಮಹಿಳಾ ಟೆಕ್ಕಿಗಳಿಂದ ಸಾಮೂಹಿಕ ರಾಜೀನಾಮೆ |

Share

ಮಹಾಮಾರಿ ಕೊರೊನಾ ಹರಡಿದ ನಂತರ ದೇಶಾದ್ಯಂತ ವರ್ಕ್ ಫ್ರಂ ಹೋಮ್ ಜಾರಿಗೊಳಿಸಲಾಗಿತ್ತು. ಇದೀಗ ಕಂಪನಿಯೊಂದು ವರ್ಕ್ ಫ್ರಂ ಹೋಂ ಸಾಕು, ಆಫೀಸಿಗೆ ಬಂದು ಕೆಲಸ ಮಾಡಿ ಎಂದು ಸೂಚನೆ ನೀಡಿದೆ. ಈ ಬೆನ್ನಲ್ಲೇ ಮಹಿಳಾ ಟೆಕ್ಕಿಗಳು ನಾವು ಇದಕ್ಕೆ ಒಪ್ಪುವುದಿಲ್ಲ ಎಂದು  ಸಾಮೂಹಿಕ ರಾಜೀನಾಮೆ ನೀಡಲು ಮುಂದಾಗಿದ್ದಾರೆ.

Advertisement
Advertisement

ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (TCS) ಕಂಪನಿಯು ಆಫೀಸಿಗೆ ಬಂದು ಕೆಲಸ ಮಾಡುವಂತೆ ತನ್ನ ಉದ್ಯೋಗಿಗಳಿಗೆ ಸೂಚನೆ ನೀಡಿದೆ. ಈ ಸಂಬಂಧ ಟಿಸಿಎಸ್ ಮಾನವ ಸಂಪನ್ಮೂಲ ಮುಖ್ಯಸ್ಥ ಮಿಲಿಂದ್ ಲಕ್ಕಡ್  ಮಾತನಾಡಿ, ಕಂಪನಿಯು ಮನೆಯಿಂದಲೇ ಕೆಲಸ ಮಾಡಿದ್ದು ಸಾಕು, ಕಚೇರಿಗೆ ಬಂದು ಕಾರ್ಯ ನಿರ್ವಹಿಸಿ ಎಂದು ಹೇಳಿದ ನಂತರ ಅನೇಕ ಮಂದಿ ಉದ್ಯೋಗಿಗಳಿಂದ ರಾಜೀನಾಮೆ ಪತ್ರಗಳು ಬಂದವು.

Advertisement

ಸಾಮಾನ್ಯವಾಗಿ ಟಿಸಿಎಸ್ ಕಂಪನಿಯಲ್ಲಿ ಹಿಂದೆಲ್ಲ ಪುರುಷರಿಗಿಂತ ಮಹಿಳೆಯರು ರಾಜೀನಾಮೆ ನೀಡುವ ಪ್ರಮಾಣ ಕಡಿಮೆ ಇತ್ತು. ಆದರೆ ಈ ಬಾರಿ ಮಾತ್ರ ಪುರುಷರಿಗಿಂತ ಮಹಿಳೆಯರೇ ಹೆಚ್ಚು ರಾಜೀನಾಮೆ ಕೊಟ್ಟಿದ್ದಾರೆ. ರಾಜೀನಾಮೆಗೆ ಬೇರೆ ಬೇರೆ ಕಾರಣಗಳಿರಬಹುದಾದರೂ ಪ್ರಮುಖ ಕಾರಣ ಮಾತ್ರ ವರ್ಕ್ ಫ್ರಂ ಹೋಮ್ ರದ್ದತಿ ಎಂಬುದು ಹೇಳಿದ್ದಾರೆ.

ಟಿಸಿಎಸ್ ನಲ್ಲಿ 6,00,000 ಕ್ಕೂ ಹೆಚ್ಚು ಜನರು ಕೆಲಸ ಮಾಡುತ್ತಾರೆ. ಅದರಲ್ಲಿ 35% ಮಹಿಳಾ ಉದ್ಯೋಗಿಗಳಿದ್ದಾರೆ. ಉದ್ಯೋಗಿಗಳಿಗೆ ಮನೆಯಿಂದಲೇ ಕೆಲಸ ಮಾಡುವ ಅವಕಾಶವನ್ನು ಕಂಪನಿ ನಿಲ್ಲಿಸಿದ ನಂತರ ಮಹಿಳಾ ಟೆಕ್ಕಿಗಳು ಹೆಚ್ಚಾಗಿ ರಾಜೀನಾಮೆಗಳನ್ನು ನೀಡುತ್ತಿದ್ದಾರೆ ಎಂದು ಅವರು ತಿಳಿಸಿದರು.

Advertisement

ಒಟ್ಟಿನಲ್ಲಿ ಕೋವಿಡ್ ಕಾರಣಕ್ಕೆ ಉದ್ಯೋಗಿಗಳಿಗೆ ಪ್ರಪಂಚದಾದ್ಯಂತ ವರ್ಕ್ ಫ್ರಂ ಹೋಮ್ ಸೌಲಭ್ಯ ನೀಡಲಾಗಿತ್ತು. ಹಲವು ಸಮೀಕ್ಷೆಗ ಪ್ರಕಾರ, ಈ ಸೌಲಭ್ಯದಿಂದಾಗಿ ಕೆಲಸದ ಔಟ್‍ಪು‌ಟ್ ಹೆಚ್ಚಾಗಿದೆ. ಕಂಪನಿಗಳಿಗೂ ಕೆಲವೊಂದಿಷ್ಟು ಆಡಳಿತಾತ್ಮಕ ವೆಚ್ಚ ತಗ್ಗಿದೆ ಎನ್ನಲಾಗಿತ್ತು. ಆದರೆ ಮನೆಯಿಂದ ಕೆಲಸ ಮಾಡಿದರೆ ತಂಡಗಳನ್ನು ನಿರ್ವಹಿಸುವುದು ಕಷ್ಟ ಎಂಬುದು ಕೆಲ ಕಂಪನಿಗಳ ಮ್ಯಾನೇಜ್ಮೆಂಟ್ ವಾದವಾಗಿತ್ತು. ಆದರೆ ಹೆಚ್ಚಿನ ಉದ್ಯೋಗಿಗಳು ಈಗಲೂ ವರ್ಕ್ ಫ್ರಂ ಹೋಮ್ ಸೌಲಭ್ಯವನ್ನೇ ಇಷ್ಟಪಡುತ್ತಾ ಇದ್ದಾರಂತೆ. ಮ್ಯಾನೇಜ್ಮೆಂಟ್ ಬಲವಂತಕ್ಕೆ ಕಚೇರಿಗೆ ಬರುವ ಉದ್ಯೋಗಿಗಳ ಸಂಖ್ಯೆ ಹೆಚ್ಚಿದೆ ಎಂದು ಕೆಲ ಸಮೀಕ್ಷೆಗಳು ಹೇಳಿವೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಗ್ರಾಮಗಳಲ್ಲಿ ನೀರಿನ ಹೊಂಡ | ಚಿತ್ರದುರ್ಗ ಜಿಲ್ಲೆಯ 7 ಹಳ್ಳಿಗಳಲ್ಲಿ ವಿಶ್ವಬ್ಯಾಂಕ್ ನೆರವಿನ ಯೋಜನೆ ಅನುಷ್ಟಾನ |

ಚಿತ್ರದುರ್ಗ ಜಿಲ್ಲೆಯ 7 ಹಳ್ಳಿಗಳಲ್ಲಿ 5 ಸಾವಿರದ 171 ಹೆಕ್ಟೇರ್ ಪ್ರದೇಶದಲ್ಲಿ ಯೋಜನೆ…

7 hours ago

ಕಿಸಾನ್‌ ಸಮ್ಮಾನ್‌ ನಿಧಿಯ ಮೂಲಕ ರೈತರಿಗೆ 21,000 ಕೋಟಿ ರೂಪಾಯಿ |

ಕಿಸಾನ್‌ ಸಮ್ಮಾನ್‌ ನಿಧಿಯಿಂದ 9 ಕೋಟಿ 50 ಲಕ್ಷ  ರೈತರಿಗೆ  21 ಸಾವಿರ…

8 hours ago

ತುಮಕೂರು ಜಿಲ್ಲೆಯಲ್ಲಿ ದಾಖಲೆಯ ಹಾಲು ಉತ್ಪಾದನೆ

ತುಮಕೂರು ಜಿಲ್ಲೆಯಲ್ಲಿ 1351 ಹಾಲು ಉತ್ಪಾದಕರ ಸಹಕಾರ ಸಂಘಗಳು ಕಾರ್ಯನಿರ್ವಹಿಸುತ್ತಿದ್ದು, ಪ್ರತಿನಿತ್ಯ 9.40…

8 hours ago

ಕೋಲಾರದಲ್ಲಿ ಸಾವಿರಕ್ಕೂ ಅಧಿಕ ನಕಲಿ ವೈದ್ಯರ ವಿರುದ್ಧ ಪ್ರಕರಣ |

ಖಾಸಗಿ ಮೆಡಿಕಲ್ ಕಾಲೇಜುಗಳಲ್ಲಿನ  ಜೈವಿಕ ತ್ಯಾಜ್ಯಗಳನ್ನು ನಗರಸಭೆ ಕಸ ಹಾಗೂ ಜನನಿಬಿಡ ಪ್ರದೇಶಗಳಲ್ಲಿ…

9 hours ago

ಹೊರನಾಡು ದೇವಾಲಯದಲ್ಲಿ ವಸ್ತ್ರ ಸಂಹಿತೆ ಜಾರಿ

ಚಿಕ್ಕಮಗಳೂರು ಜಿಲ್ಲೆಯ ಹೊರನಾಡಿನ ಪ್ರಸಿದ್ದ ಅನ್ನಪೂರ್ಣೇಶ್ವರಿ ದೇವಾಲಯದಲ್ಲಿ ವಸ್ತ್ರ ಸಂಹಿತೆ ಜಾರಿಗೆ ತರಲಾಗಿದೆ…

9 hours ago