ಸುದ್ದಿಗಳು

ವರ್ಕ್ ಫ್ರಂ ಹೋಮ್ ನಿಲ್ಲಿಸಿದ್ದಕ್ಕೆ ಮಹಿಳಾ ಟೆಕ್ಕಿಗಳಿಂದ ಸಾಮೂಹಿಕ ರಾಜೀನಾಮೆ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಮಹಾಮಾರಿ ಕೊರೊನಾ ಹರಡಿದ ನಂತರ ದೇಶಾದ್ಯಂತ ವರ್ಕ್ ಫ್ರಂ ಹೋಮ್ ಜಾರಿಗೊಳಿಸಲಾಗಿತ್ತು. ಇದೀಗ ಕಂಪನಿಯೊಂದು ವರ್ಕ್ ಫ್ರಂ ಹೋಂ ಸಾಕು, ಆಫೀಸಿಗೆ ಬಂದು ಕೆಲಸ ಮಾಡಿ ಎಂದು ಸೂಚನೆ ನೀಡಿದೆ. ಈ ಬೆನ್ನಲ್ಲೇ ಮಹಿಳಾ ಟೆಕ್ಕಿಗಳು ನಾವು ಇದಕ್ಕೆ ಒಪ್ಪುವುದಿಲ್ಲ ಎಂದು  ಸಾಮೂಹಿಕ ರಾಜೀನಾಮೆ ನೀಡಲು ಮುಂದಾಗಿದ್ದಾರೆ.

Advertisement
Advertisement

ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (TCS) ಕಂಪನಿಯು ಆಫೀಸಿಗೆ ಬಂದು ಕೆಲಸ ಮಾಡುವಂತೆ ತನ್ನ ಉದ್ಯೋಗಿಗಳಿಗೆ ಸೂಚನೆ ನೀಡಿದೆ. ಈ ಸಂಬಂಧ ಟಿಸಿಎಸ್ ಮಾನವ ಸಂಪನ್ಮೂಲ ಮುಖ್ಯಸ್ಥ ಮಿಲಿಂದ್ ಲಕ್ಕಡ್  ಮಾತನಾಡಿ, ಕಂಪನಿಯು ಮನೆಯಿಂದಲೇ ಕೆಲಸ ಮಾಡಿದ್ದು ಸಾಕು, ಕಚೇರಿಗೆ ಬಂದು ಕಾರ್ಯ ನಿರ್ವಹಿಸಿ ಎಂದು ಹೇಳಿದ ನಂತರ ಅನೇಕ ಮಂದಿ ಉದ್ಯೋಗಿಗಳಿಂದ ರಾಜೀನಾಮೆ ಪತ್ರಗಳು ಬಂದವು.

ಸಾಮಾನ್ಯವಾಗಿ ಟಿಸಿಎಸ್ ಕಂಪನಿಯಲ್ಲಿ ಹಿಂದೆಲ್ಲ ಪುರುಷರಿಗಿಂತ ಮಹಿಳೆಯರು ರಾಜೀನಾಮೆ ನೀಡುವ ಪ್ರಮಾಣ ಕಡಿಮೆ ಇತ್ತು. ಆದರೆ ಈ ಬಾರಿ ಮಾತ್ರ ಪುರುಷರಿಗಿಂತ ಮಹಿಳೆಯರೇ ಹೆಚ್ಚು ರಾಜೀನಾಮೆ ಕೊಟ್ಟಿದ್ದಾರೆ. ರಾಜೀನಾಮೆಗೆ ಬೇರೆ ಬೇರೆ ಕಾರಣಗಳಿರಬಹುದಾದರೂ ಪ್ರಮುಖ ಕಾರಣ ಮಾತ್ರ ವರ್ಕ್ ಫ್ರಂ ಹೋಮ್ ರದ್ದತಿ ಎಂಬುದು ಹೇಳಿದ್ದಾರೆ.

ಟಿಸಿಎಸ್ ನಲ್ಲಿ 6,00,000 ಕ್ಕೂ ಹೆಚ್ಚು ಜನರು ಕೆಲಸ ಮಾಡುತ್ತಾರೆ. ಅದರಲ್ಲಿ 35% ಮಹಿಳಾ ಉದ್ಯೋಗಿಗಳಿದ್ದಾರೆ. ಉದ್ಯೋಗಿಗಳಿಗೆ ಮನೆಯಿಂದಲೇ ಕೆಲಸ ಮಾಡುವ ಅವಕಾಶವನ್ನು ಕಂಪನಿ ನಿಲ್ಲಿಸಿದ ನಂತರ ಮಹಿಳಾ ಟೆಕ್ಕಿಗಳು ಹೆಚ್ಚಾಗಿ ರಾಜೀನಾಮೆಗಳನ್ನು ನೀಡುತ್ತಿದ್ದಾರೆ ಎಂದು ಅವರು ತಿಳಿಸಿದರು.

ಒಟ್ಟಿನಲ್ಲಿ ಕೋವಿಡ್ ಕಾರಣಕ್ಕೆ ಉದ್ಯೋಗಿಗಳಿಗೆ ಪ್ರಪಂಚದಾದ್ಯಂತ ವರ್ಕ್ ಫ್ರಂ ಹೋಮ್ ಸೌಲಭ್ಯ ನೀಡಲಾಗಿತ್ತು. ಹಲವು ಸಮೀಕ್ಷೆಗ ಪ್ರಕಾರ, ಈ ಸೌಲಭ್ಯದಿಂದಾಗಿ ಕೆಲಸದ ಔಟ್‍ಪು‌ಟ್ ಹೆಚ್ಚಾಗಿದೆ. ಕಂಪನಿಗಳಿಗೂ ಕೆಲವೊಂದಿಷ್ಟು ಆಡಳಿತಾತ್ಮಕ ವೆಚ್ಚ ತಗ್ಗಿದೆ ಎನ್ನಲಾಗಿತ್ತು. ಆದರೆ ಮನೆಯಿಂದ ಕೆಲಸ ಮಾಡಿದರೆ ತಂಡಗಳನ್ನು ನಿರ್ವಹಿಸುವುದು ಕಷ್ಟ ಎಂಬುದು ಕೆಲ ಕಂಪನಿಗಳ ಮ್ಯಾನೇಜ್ಮೆಂಟ್ ವಾದವಾಗಿತ್ತು. ಆದರೆ ಹೆಚ್ಚಿನ ಉದ್ಯೋಗಿಗಳು ಈಗಲೂ ವರ್ಕ್ ಫ್ರಂ ಹೋಮ್ ಸೌಲಭ್ಯವನ್ನೇ ಇಷ್ಟಪಡುತ್ತಾ ಇದ್ದಾರಂತೆ. ಮ್ಯಾನೇಜ್ಮೆಂಟ್ ಬಲವಂತಕ್ಕೆ ಕಚೇರಿಗೆ ಬರುವ ಉದ್ಯೋಗಿಗಳ ಸಂಖ್ಯೆ ಹೆಚ್ಚಿದೆ ಎಂದು ಕೆಲ ಸಮೀಕ್ಷೆಗಳು ಹೇಳಿವೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 10-06-2025 | ಜೂ.11 ರಿಂದ ರಾಜ್ಯದ ವಿವಿದೆಡೆ ಉತ್ತಮ ಮಳೆಯ ಮುನ್ಸೂಚನೆ

ಜೂನ್ 12ರಿಂದ ರಾಜ್ಯದ ಬಹುತೇಕ ಭಾಗಗಳಲ್ಲಿ ಉತ್ತಮ ಹಾಗೂ ಕೆಲವು ಭಾಗಗಳಲ್ಲಿ ಭಾರಿ…

3 hours ago

ಮುಂದಿನ 4-5 ದಿನಗಳಲ್ಲಿ ದೇಶದ ವಾಯುವ್ಯ ಭಾಗಗಳಲ್ಲಿ ತೀವ್ರ ತಾಪಮಾನ | ದಕ್ಷಿಣದಲ್ಲಿ ಉತ್ತಮ ಮಳೆ |

ಜೂನ್‌ 12 ರಿಂದ 15 ರವರೆಗೆ ಕರ್ನಾಟಕದಲ್ಲಿ  ಮತ್ತು ಜೂನ್ 13 ರಿಂದ…

9 hours ago

ಈರುಳ್ಳಿ ಮತ್ತು ಕೆಂಪುಮೆಣಸಿನಕಾಯಿ ಬೆಳೆಗಳಿಗೆ ವಿಮಾ ಸೌಲಭ್ಯ ಅಧಿಸೂಚನೆ

ಗದಗ ಜಿಲ್ಲೆಯಲ್ಲಿ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭಿಮಾ ಯೋಜನೆಯಡಿ ತೋಟಗಾರಿಕೆ ಬೆಳೆಗಳಾದ…

9 hours ago

11 ವರ್ಷಗಳಲ್ಲಿ ಭಾರತದ ಕಡು ಬಡವರ ಸಂಖ್ಯೆ ತಗ್ಗಿದೆ – ಸಚಿವ ಪ್ರಹ್ಲಾದ್ ಜೋಶಿ

ಕಳೆದ 11 ವರ್ಷಗಳಲ್ಲಿ ಭಾರತದ ಕಡು ಬಡವರ ಸಂಖ್ಯೆ ಶೇಕಡ 21.1 ರಿಂದ…

9 hours ago

25 ಗ್ರೀನ್‌ಫೀಲ್ಡ್ ಎಕ್ಸ್‌ಪ್ರೆಸ್ ಹೆದ್ದಾರಿಗಳ ನಿರ್ಮಾಣ -ಸಚಿವ ನಿತಿನ್‌ ಗಡ್ಕರಿ

ಬಂದರು ಸಂಪರ್ಕಕ್ಕಾಗಿ ಮತ್ತು ಧಾರ್ಮಿಕ ಪ್ರವಾಸೋದ್ಯಮಕ್ಕಾಗಿ 3 ಸಾವಿರ ಕಿಲೋ ಮೀಟರ್‌ಗಿಂತ  ಹೆಚ್ಚಿನ…

9 hours ago

ಧನ, ಧಾನ್ಯ, ಸಂಪತ್ತಿಗಾಗಿ ಇಂತಹ ಕೆಲಸಗಳನ್ನು ಮಾಡಿ…

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

10 hours ago