Advertisement
ಸುದ್ದಿಗಳು

ವರ್ಕ್ ಫ್ರಂ ಹೋಮ್ ನಿಲ್ಲಿಸಿದ್ದಕ್ಕೆ ಮಹಿಳಾ ಟೆಕ್ಕಿಗಳಿಂದ ಸಾಮೂಹಿಕ ರಾಜೀನಾಮೆ |

Share

ಮಹಾಮಾರಿ ಕೊರೊನಾ ಹರಡಿದ ನಂತರ ದೇಶಾದ್ಯಂತ ವರ್ಕ್ ಫ್ರಂ ಹೋಮ್ ಜಾರಿಗೊಳಿಸಲಾಗಿತ್ತು. ಇದೀಗ ಕಂಪನಿಯೊಂದು ವರ್ಕ್ ಫ್ರಂ ಹೋಂ ಸಾಕು, ಆಫೀಸಿಗೆ ಬಂದು ಕೆಲಸ ಮಾಡಿ ಎಂದು ಸೂಚನೆ ನೀಡಿದೆ. ಈ ಬೆನ್ನಲ್ಲೇ ಮಹಿಳಾ ಟೆಕ್ಕಿಗಳು ನಾವು ಇದಕ್ಕೆ ಒಪ್ಪುವುದಿಲ್ಲ ಎಂದು  ಸಾಮೂಹಿಕ ರಾಜೀನಾಮೆ ನೀಡಲು ಮುಂದಾಗಿದ್ದಾರೆ.

ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (TCS) ಕಂಪನಿಯು ಆಫೀಸಿಗೆ ಬಂದು ಕೆಲಸ ಮಾಡುವಂತೆ ತನ್ನ ಉದ್ಯೋಗಿಗಳಿಗೆ ಸೂಚನೆ ನೀಡಿದೆ. ಈ ಸಂಬಂಧ ಟಿಸಿಎಸ್ ಮಾನವ ಸಂಪನ್ಮೂಲ ಮುಖ್ಯಸ್ಥ ಮಿಲಿಂದ್ ಲಕ್ಕಡ್  ಮಾತನಾಡಿ, ಕಂಪನಿಯು ಮನೆಯಿಂದಲೇ ಕೆಲಸ ಮಾಡಿದ್ದು ಸಾಕು, ಕಚೇರಿಗೆ ಬಂದು ಕಾರ್ಯ ನಿರ್ವಹಿಸಿ ಎಂದು ಹೇಳಿದ ನಂತರ ಅನೇಕ ಮಂದಿ ಉದ್ಯೋಗಿಗಳಿಂದ ರಾಜೀನಾಮೆ ಪತ್ರಗಳು ಬಂದವು.

Advertisement

ಸಾಮಾನ್ಯವಾಗಿ ಟಿಸಿಎಸ್ ಕಂಪನಿಯಲ್ಲಿ ಹಿಂದೆಲ್ಲ ಪುರುಷರಿಗಿಂತ ಮಹಿಳೆಯರು ರಾಜೀನಾಮೆ ನೀಡುವ ಪ್ರಮಾಣ ಕಡಿಮೆ ಇತ್ತು. ಆದರೆ ಈ ಬಾರಿ ಮಾತ್ರ ಪುರುಷರಿಗಿಂತ ಮಹಿಳೆಯರೇ ಹೆಚ್ಚು ರಾಜೀನಾಮೆ ಕೊಟ್ಟಿದ್ದಾರೆ. ರಾಜೀನಾಮೆಗೆ ಬೇರೆ ಬೇರೆ ಕಾರಣಗಳಿರಬಹುದಾದರೂ ಪ್ರಮುಖ ಕಾರಣ ಮಾತ್ರ ವರ್ಕ್ ಫ್ರಂ ಹೋಮ್ ರದ್ದತಿ ಎಂಬುದು ಹೇಳಿದ್ದಾರೆ.

ಟಿಸಿಎಸ್ ನಲ್ಲಿ 6,00,000 ಕ್ಕೂ ಹೆಚ್ಚು ಜನರು ಕೆಲಸ ಮಾಡುತ್ತಾರೆ. ಅದರಲ್ಲಿ 35% ಮಹಿಳಾ ಉದ್ಯೋಗಿಗಳಿದ್ದಾರೆ. ಉದ್ಯೋಗಿಗಳಿಗೆ ಮನೆಯಿಂದಲೇ ಕೆಲಸ ಮಾಡುವ ಅವಕಾಶವನ್ನು ಕಂಪನಿ ನಿಲ್ಲಿಸಿದ ನಂತರ ಮಹಿಳಾ ಟೆಕ್ಕಿಗಳು ಹೆಚ್ಚಾಗಿ ರಾಜೀನಾಮೆಗಳನ್ನು ನೀಡುತ್ತಿದ್ದಾರೆ ಎಂದು ಅವರು ತಿಳಿಸಿದರು.

Advertisement

ಒಟ್ಟಿನಲ್ಲಿ ಕೋವಿಡ್ ಕಾರಣಕ್ಕೆ ಉದ್ಯೋಗಿಗಳಿಗೆ ಪ್ರಪಂಚದಾದ್ಯಂತ ವರ್ಕ್ ಫ್ರಂ ಹೋಮ್ ಸೌಲಭ್ಯ ನೀಡಲಾಗಿತ್ತು. ಹಲವು ಸಮೀಕ್ಷೆಗ ಪ್ರಕಾರ, ಈ ಸೌಲಭ್ಯದಿಂದಾಗಿ ಕೆಲಸದ ಔಟ್‍ಪು‌ಟ್ ಹೆಚ್ಚಾಗಿದೆ. ಕಂಪನಿಗಳಿಗೂ ಕೆಲವೊಂದಿಷ್ಟು ಆಡಳಿತಾತ್ಮಕ ವೆಚ್ಚ ತಗ್ಗಿದೆ ಎನ್ನಲಾಗಿತ್ತು. ಆದರೆ ಮನೆಯಿಂದ ಕೆಲಸ ಮಾಡಿದರೆ ತಂಡಗಳನ್ನು ನಿರ್ವಹಿಸುವುದು ಕಷ್ಟ ಎಂಬುದು ಕೆಲ ಕಂಪನಿಗಳ ಮ್ಯಾನೇಜ್ಮೆಂಟ್ ವಾದವಾಗಿತ್ತು. ಆದರೆ ಹೆಚ್ಚಿನ ಉದ್ಯೋಗಿಗಳು ಈಗಲೂ ವರ್ಕ್ ಫ್ರಂ ಹೋಮ್ ಸೌಲಭ್ಯವನ್ನೇ ಇಷ್ಟಪಡುತ್ತಾ ಇದ್ದಾರಂತೆ. ಮ್ಯಾನೇಜ್ಮೆಂಟ್ ಬಲವಂತಕ್ಕೆ ಕಚೇರಿಗೆ ಬರುವ ಉದ್ಯೋಗಿಗಳ ಸಂಖ್ಯೆ ಹೆಚ್ಚಿದೆ ಎಂದು ಕೆಲ ಸಮೀಕ್ಷೆಗಳು ಹೇಳಿವೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹಲಸಿನ ಹಾಲಿನಿಂದ ವಸಡು ರೋಗಕ್ಕೆ ಚಿಕಿತ್ಸೆ…? ಬ್ರೆಜಿಲ್‌ ವಿಜ್ಞಾನಿಗಳ ಹೊಸ ಸಂಶೋಧನೆ ಆಶಾಭರವಸೆ ಮೂಡಿಸಿದೆ

ಹಲಸಿನ ಹಾಲು, ದಾಳಿಂಬೆ ಸಿಪ್ಪೆಯ ಸಾರ ಮತ್ತು ಸಿಮ್ವಾಸ್ಟಾಟಿನ್‌ ಬಳಸಿ ವಿಜ್ಞಾನಿಗಳು ವಸಡು…

1 day ago

ಅಡಿಕೆಗೆ ಬ್ಯಾನ್ ಅಲ್ಲ… ಕಲಬೆರಕೆ ಅಡಿಕೆಗೆ ಬ್ಯಾನ್ ಆಗಬೇಕು..! – ಮಲೆನಾಡಿನ ಅಡಿಕೆಗೆ ಪ್ರತ್ಯೇಕ ಮಾರುಕಟ್ಟೆ ಅಗತ್ಯ

ಅಡಿಕೆ ನಿಷೇಧಿಸುವ ಬದಲು ಕಲಬೆರಕೆ ಅಡಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ…

1 day ago

ಬೆಲೆ ಕುಸಿದಾಗ ನಷ್ಟ ಬೇಡ – ರಂಬುಟಾನ್‌ ಫ್ರೀಜ್‌ ಮಾಡಿ, ನಂತರ ಮಾರಾಟ ಮಾಡಿ..! ಕೃಷಿಕನ ಹೊಸ ಪ್ರಯೋಗ

ರಂಬುಟಾನ್‌ ಬೆಲೆ ಕುಸಿದಾಗ ಹಣ್ಣನ್ನು ಫ್ರೀಜ್‌ ಮಾಡಿ ನಂತರ ಮಾರಾಟ ಮಾಡಿದರೆ ಉತ್ತಮ…

1 day ago

ಚೆಸ್‌ ಬೋರ್ಡ್‌ನ ಆಚೆಗೂ ಗೆಲುವು – ಕಾಪುವಿನಲ್ಲಿ ಚೆಸ್ ಹಬ್ಬ, ವಿದ್ಯಾರ್ಥಿಗಳ ಕನಸುಗಳಿಗೆ ವೇದಿಕೆ | ಗ್ರಾಮೀಣ ಕರ್ನಾಟಕದಲ್ಲಿಯೂ ಬೆಳೆಯುತ್ತಿರುವ ಹೊಸ ಕ್ರೀಡಾ ಸಂಸ್ಕೃತಿ

ಕಾಪುವಿನಲ್ಲಿ ನಡೆಯುತ್ತಿರುವ ಕರ್ನಾಟಕ ಸ್ಟೇಟ್ ಸ್ಕೂಲ್ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…

2 days ago

ಕಾಪುವಿನಲ್ಲಿ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ಗೆ ಚಾಲನೆ – 400ಕ್ಕೂ ಅಧಿಕ ಪ್ರತಿಭೆಗಳು ಭಾಗಿ, 24 ಮಂದಿಗೆ ರಾಷ್ಟ್ರಮಟ್ಟದ ಅವಕಾಶ

ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…

2 days ago

34 ಟನ್ ಅಡಿಕೆ ವಂಚನೆ – ಅಸ್ಸಾಂ ವ್ಯಾಪಾರಿಗಳಿಗೆ ಹರಿಯಾಣದಲ್ಲಿ ವಂಚನೆ..!

ಅಸ್ಸಾಂನ ಇಬ್ಬರು ಅಡಿಕೆ ವ್ಯಾಪಾರಿಗಳಿಗೆ ಸೇರಿದ ₹1.12 ಕೋಟಿ ಮೌಲ್ಯದ 34 ಟನ್…

2 days ago