Advertisement
ಸುದ್ದಿಗಳು

ವರ್ಕ್ ಫ್ರಂ ಹೋಮ್ ನಿಲ್ಲಿಸಿದ್ದಕ್ಕೆ ಮಹಿಳಾ ಟೆಕ್ಕಿಗಳಿಂದ ಸಾಮೂಹಿಕ ರಾಜೀನಾಮೆ |

Share

ಮಹಾಮಾರಿ ಕೊರೊನಾ ಹರಡಿದ ನಂತರ ದೇಶಾದ್ಯಂತ ವರ್ಕ್ ಫ್ರಂ ಹೋಮ್ ಜಾರಿಗೊಳಿಸಲಾಗಿತ್ತು. ಇದೀಗ ಕಂಪನಿಯೊಂದು ವರ್ಕ್ ಫ್ರಂ ಹೋಂ ಸಾಕು, ಆಫೀಸಿಗೆ ಬಂದು ಕೆಲಸ ಮಾಡಿ ಎಂದು ಸೂಚನೆ ನೀಡಿದೆ. ಈ ಬೆನ್ನಲ್ಲೇ ಮಹಿಳಾ ಟೆಕ್ಕಿಗಳು ನಾವು ಇದಕ್ಕೆ ಒಪ್ಪುವುದಿಲ್ಲ ಎಂದು  ಸಾಮೂಹಿಕ ರಾಜೀನಾಮೆ ನೀಡಲು ಮುಂದಾಗಿದ್ದಾರೆ.

ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (TCS) ಕಂಪನಿಯು ಆಫೀಸಿಗೆ ಬಂದು ಕೆಲಸ ಮಾಡುವಂತೆ ತನ್ನ ಉದ್ಯೋಗಿಗಳಿಗೆ ಸೂಚನೆ ನೀಡಿದೆ. ಈ ಸಂಬಂಧ ಟಿಸಿಎಸ್ ಮಾನವ ಸಂಪನ್ಮೂಲ ಮುಖ್ಯಸ್ಥ ಮಿಲಿಂದ್ ಲಕ್ಕಡ್  ಮಾತನಾಡಿ, ಕಂಪನಿಯು ಮನೆಯಿಂದಲೇ ಕೆಲಸ ಮಾಡಿದ್ದು ಸಾಕು, ಕಚೇರಿಗೆ ಬಂದು ಕಾರ್ಯ ನಿರ್ವಹಿಸಿ ಎಂದು ಹೇಳಿದ ನಂತರ ಅನೇಕ ಮಂದಿ ಉದ್ಯೋಗಿಗಳಿಂದ ರಾಜೀನಾಮೆ ಪತ್ರಗಳು ಬಂದವು.

ಸಾಮಾನ್ಯವಾಗಿ ಟಿಸಿಎಸ್ ಕಂಪನಿಯಲ್ಲಿ ಹಿಂದೆಲ್ಲ ಪುರುಷರಿಗಿಂತ ಮಹಿಳೆಯರು ರಾಜೀನಾಮೆ ನೀಡುವ ಪ್ರಮಾಣ ಕಡಿಮೆ ಇತ್ತು. ಆದರೆ ಈ ಬಾರಿ ಮಾತ್ರ ಪುರುಷರಿಗಿಂತ ಮಹಿಳೆಯರೇ ಹೆಚ್ಚು ರಾಜೀನಾಮೆ ಕೊಟ್ಟಿದ್ದಾರೆ. ರಾಜೀನಾಮೆಗೆ ಬೇರೆ ಬೇರೆ ಕಾರಣಗಳಿರಬಹುದಾದರೂ ಪ್ರಮುಖ ಕಾರಣ ಮಾತ್ರ ವರ್ಕ್ ಫ್ರಂ ಹೋಮ್ ರದ್ದತಿ ಎಂಬುದು ಹೇಳಿದ್ದಾರೆ.

ಟಿಸಿಎಸ್ ನಲ್ಲಿ 6,00,000 ಕ್ಕೂ ಹೆಚ್ಚು ಜನರು ಕೆಲಸ ಮಾಡುತ್ತಾರೆ. ಅದರಲ್ಲಿ 35% ಮಹಿಳಾ ಉದ್ಯೋಗಿಗಳಿದ್ದಾರೆ. ಉದ್ಯೋಗಿಗಳಿಗೆ ಮನೆಯಿಂದಲೇ ಕೆಲಸ ಮಾಡುವ ಅವಕಾಶವನ್ನು ಕಂಪನಿ ನಿಲ್ಲಿಸಿದ ನಂತರ ಮಹಿಳಾ ಟೆಕ್ಕಿಗಳು ಹೆಚ್ಚಾಗಿ ರಾಜೀನಾಮೆಗಳನ್ನು ನೀಡುತ್ತಿದ್ದಾರೆ ಎಂದು ಅವರು ತಿಳಿಸಿದರು.

ಒಟ್ಟಿನಲ್ಲಿ ಕೋವಿಡ್ ಕಾರಣಕ್ಕೆ ಉದ್ಯೋಗಿಗಳಿಗೆ ಪ್ರಪಂಚದಾದ್ಯಂತ ವರ್ಕ್ ಫ್ರಂ ಹೋಮ್ ಸೌಲಭ್ಯ ನೀಡಲಾಗಿತ್ತು. ಹಲವು ಸಮೀಕ್ಷೆಗ ಪ್ರಕಾರ, ಈ ಸೌಲಭ್ಯದಿಂದಾಗಿ ಕೆಲಸದ ಔಟ್‍ಪು‌ಟ್ ಹೆಚ್ಚಾಗಿದೆ. ಕಂಪನಿಗಳಿಗೂ ಕೆಲವೊಂದಿಷ್ಟು ಆಡಳಿತಾತ್ಮಕ ವೆಚ್ಚ ತಗ್ಗಿದೆ ಎನ್ನಲಾಗಿತ್ತು. ಆದರೆ ಮನೆಯಿಂದ ಕೆಲಸ ಮಾಡಿದರೆ ತಂಡಗಳನ್ನು ನಿರ್ವಹಿಸುವುದು ಕಷ್ಟ ಎಂಬುದು ಕೆಲ ಕಂಪನಿಗಳ ಮ್ಯಾನೇಜ್ಮೆಂಟ್ ವಾದವಾಗಿತ್ತು. ಆದರೆ ಹೆಚ್ಚಿನ ಉದ್ಯೋಗಿಗಳು ಈಗಲೂ ವರ್ಕ್ ಫ್ರಂ ಹೋಮ್ ಸೌಲಭ್ಯವನ್ನೇ ಇಷ್ಟಪಡುತ್ತಾ ಇದ್ದಾರಂತೆ. ಮ್ಯಾನೇಜ್ಮೆಂಟ್ ಬಲವಂತಕ್ಕೆ ಕಚೇರಿಗೆ ಬರುವ ಉದ್ಯೋಗಿಗಳ ಸಂಖ್ಯೆ ಹೆಚ್ಚಿದೆ ಎಂದು ಕೆಲ ಸಮೀಕ್ಷೆಗಳು ಹೇಳಿವೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 07.06.2026 | ಜೂನ್ 8ರಿಂದ ರಾಜ್ಯದಲ್ಲಿ ಮುಂಗಾರು ಚುರುಕು| ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ, ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ

ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆಗಳು ಜೂ. 8ರಿಂದ ಮತ್ತಷ್ಟು ಚುರುಕುಗೊಳ್ಳುವ ಲಕ್ಷಣಗಳು ಕಂಡುಬಂದಿದ್ದು, ಕರಾವಳಿ…

3 hours ago

“ಜಾಕ್‌ಫ್ರೂಟ್‌ ಹಬ್ಬ”ಕ್ಕೆ ಜನಸಾಗರ – 50 ಕ್ಕೂ ಹೆಚ್ಚು ಹಲಸಿನ ಮೌಲ್ಯವರ್ಧಿತ ಉತ್ಪನ್ನಗಳ ಪ್ರದರ್ಶನ

ಜೋಯಿಡಾದಲ್ಲಿ ನಡೆದ ಹಲಸು ಉತ್ಸವದಲ್ಲಿ 50ಕ್ಕೂ ಹೆಚ್ಚು ಮೌಲ್ಯವರ್ಧಿತ ಹಲಸಿನ ಉತ್ಪನ್ನಗಳು ಪ್ರದರ್ಶನಗೊಂಡು…

18 hours ago

ಕ್ಯಾಂಪ್ಕೋ ಬ್ರಹ್ಮ ವಾರಣಾಶಿ ಸುಬ್ರಾಯ ಭಟ್‌ ಜನ್ಮಶತಮಾನೋತ್ಸವ ವರ್ಷ – ಅಡಿಕೆ ಬೆಳೆಗಾರರ ಬದುಕು ಬದಲಿಸಿದ ಮಹಾನ್ ದಾರ್ಶನಿಕ

ಕ್ಯಾಂಪ್ಕೋ ಸಂಸ್ಥಾಪಕ ವಾರಣಾಶಿ ಸುಬ್ರಾಯ ಭಟ್‌ ಅವರ ಜನ್ಮಕ್ಕೆ 99 ವರ್ಷಗಳು ಪೂರ್ಣಗೊಂಡಿದ್ದು,…

19 hours ago

ಹವಾಮಾನ ವರದಿ | 06-06-2026 | ಮುಂಗಾರು ಬಂದರೂ ಮಳೆ ಇಲ್ಲ! – ಕರ್ನಾಟಕದಲ್ಲಿ ಮುಂದಿನ ವಾರದ ಹವಾಮಾನ ಹೇಗಿರಲಿದೆ?

ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದರೂ ಅದರ ಬಲ ಇನ್ನೂ ದುರ್ಬಲವಾಗಿದೆ. ಕರಾವಳಿಯಲ್ಲಿ ಜೂನ್ 8ರಿಂದ…

1 day ago

ಭಾರತದ ಚೆಸ್ ಇತಿಹಾಸದಲ್ಲಿ ಹೊಸ ಅಧ್ಯಾಯ – ನಾರ್ವೆ ಚೆಸ್ ಕಿರೀಟ ಗೆದ್ದ ಮೊದಲ ಭಾರತೀಯ ಪ್ರಜ್ಞಾನಂದ

ನಾರ್ವೆ ಚೆಸ್ 2026 ಟೂರ್ನಿಯನ್ನು ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಇತಿಹಾಸವನ್ನು…

1 day ago

ಜೇನುಗೂಡುಗಳ ಕೊರತೆಯಿಂದ ಪರಾಗಸ್ಪರ್ಶ ವ್ಯವಸ್ಥೆ ಮೇಲೆ ಪರಿಣಾಮ ; ಕೃಷಿ ಕ್ಷೇತ್ರದಲ್ಲಿ ಆತಂಕ – ಆಹಾರ ಬೆಳೆ ಉತ್ಪಾದನೆಗೆ ಸಂಕಷ್ಟದ ಎಚ್ಚರಿಕೆ

ಆಸ್ಟ್ರೇಲಿಯಾದಲ್ಲಿ ವರೋವಾ ಮೈಟ್ ಹಾವಳಿಯಿಂದ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿದ್ದು, ಆಹಾರ ಬೆಳೆಗಳ…

2 days ago