Advertisement
ಸುದ್ದಿಗಳು

ವರ್ಕ್ ಫ್ರಂ ಹೋಮ್ ನಿಲ್ಲಿಸಿದ್ದಕ್ಕೆ ಮಹಿಳಾ ಟೆಕ್ಕಿಗಳಿಂದ ಸಾಮೂಹಿಕ ರಾಜೀನಾಮೆ |

Share

ಮಹಾಮಾರಿ ಕೊರೊನಾ ಹರಡಿದ ನಂತರ ದೇಶಾದ್ಯಂತ ವರ್ಕ್ ಫ್ರಂ ಹೋಮ್ ಜಾರಿಗೊಳಿಸಲಾಗಿತ್ತು. ಇದೀಗ ಕಂಪನಿಯೊಂದು ವರ್ಕ್ ಫ್ರಂ ಹೋಂ ಸಾಕು, ಆಫೀಸಿಗೆ ಬಂದು ಕೆಲಸ ಮಾಡಿ ಎಂದು ಸೂಚನೆ ನೀಡಿದೆ. ಈ ಬೆನ್ನಲ್ಲೇ ಮಹಿಳಾ ಟೆಕ್ಕಿಗಳು ನಾವು ಇದಕ್ಕೆ ಒಪ್ಪುವುದಿಲ್ಲ ಎಂದು  ಸಾಮೂಹಿಕ ರಾಜೀನಾಮೆ ನೀಡಲು ಮುಂದಾಗಿದ್ದಾರೆ.

Advertisement

ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (TCS) ಕಂಪನಿಯು ಆಫೀಸಿಗೆ ಬಂದು ಕೆಲಸ ಮಾಡುವಂತೆ ತನ್ನ ಉದ್ಯೋಗಿಗಳಿಗೆ ಸೂಚನೆ ನೀಡಿದೆ. ಈ ಸಂಬಂಧ ಟಿಸಿಎಸ್ ಮಾನವ ಸಂಪನ್ಮೂಲ ಮುಖ್ಯಸ್ಥ ಮಿಲಿಂದ್ ಲಕ್ಕಡ್  ಮಾತನಾಡಿ, ಕಂಪನಿಯು ಮನೆಯಿಂದಲೇ ಕೆಲಸ ಮಾಡಿದ್ದು ಸಾಕು, ಕಚೇರಿಗೆ ಬಂದು ಕಾರ್ಯ ನಿರ್ವಹಿಸಿ ಎಂದು ಹೇಳಿದ ನಂತರ ಅನೇಕ ಮಂದಿ ಉದ್ಯೋಗಿಗಳಿಂದ ರಾಜೀನಾಮೆ ಪತ್ರಗಳು ಬಂದವು.

ಸಾಮಾನ್ಯವಾಗಿ ಟಿಸಿಎಸ್ ಕಂಪನಿಯಲ್ಲಿ ಹಿಂದೆಲ್ಲ ಪುರುಷರಿಗಿಂತ ಮಹಿಳೆಯರು ರಾಜೀನಾಮೆ ನೀಡುವ ಪ್ರಮಾಣ ಕಡಿಮೆ ಇತ್ತು. ಆದರೆ ಈ ಬಾರಿ ಮಾತ್ರ ಪುರುಷರಿಗಿಂತ ಮಹಿಳೆಯರೇ ಹೆಚ್ಚು ರಾಜೀನಾಮೆ ಕೊಟ್ಟಿದ್ದಾರೆ. ರಾಜೀನಾಮೆಗೆ ಬೇರೆ ಬೇರೆ ಕಾರಣಗಳಿರಬಹುದಾದರೂ ಪ್ರಮುಖ ಕಾರಣ ಮಾತ್ರ ವರ್ಕ್ ಫ್ರಂ ಹೋಮ್ ರದ್ದತಿ ಎಂಬುದು ಹೇಳಿದ್ದಾರೆ.

ಟಿಸಿಎಸ್ ನಲ್ಲಿ 6,00,000 ಕ್ಕೂ ಹೆಚ್ಚು ಜನರು ಕೆಲಸ ಮಾಡುತ್ತಾರೆ. ಅದರಲ್ಲಿ 35% ಮಹಿಳಾ ಉದ್ಯೋಗಿಗಳಿದ್ದಾರೆ. ಉದ್ಯೋಗಿಗಳಿಗೆ ಮನೆಯಿಂದಲೇ ಕೆಲಸ ಮಾಡುವ ಅವಕಾಶವನ್ನು ಕಂಪನಿ ನಿಲ್ಲಿಸಿದ ನಂತರ ಮಹಿಳಾ ಟೆಕ್ಕಿಗಳು ಹೆಚ್ಚಾಗಿ ರಾಜೀನಾಮೆಗಳನ್ನು ನೀಡುತ್ತಿದ್ದಾರೆ ಎಂದು ಅವರು ತಿಳಿಸಿದರು.

ಒಟ್ಟಿನಲ್ಲಿ ಕೋವಿಡ್ ಕಾರಣಕ್ಕೆ ಉದ್ಯೋಗಿಗಳಿಗೆ ಪ್ರಪಂಚದಾದ್ಯಂತ ವರ್ಕ್ ಫ್ರಂ ಹೋಮ್ ಸೌಲಭ್ಯ ನೀಡಲಾಗಿತ್ತು. ಹಲವು ಸಮೀಕ್ಷೆಗ ಪ್ರಕಾರ, ಈ ಸೌಲಭ್ಯದಿಂದಾಗಿ ಕೆಲಸದ ಔಟ್‍ಪು‌ಟ್ ಹೆಚ್ಚಾಗಿದೆ. ಕಂಪನಿಗಳಿಗೂ ಕೆಲವೊಂದಿಷ್ಟು ಆಡಳಿತಾತ್ಮಕ ವೆಚ್ಚ ತಗ್ಗಿದೆ ಎನ್ನಲಾಗಿತ್ತು. ಆದರೆ ಮನೆಯಿಂದ ಕೆಲಸ ಮಾಡಿದರೆ ತಂಡಗಳನ್ನು ನಿರ್ವಹಿಸುವುದು ಕಷ್ಟ ಎಂಬುದು ಕೆಲ ಕಂಪನಿಗಳ ಮ್ಯಾನೇಜ್ಮೆಂಟ್ ವಾದವಾಗಿತ್ತು. ಆದರೆ ಹೆಚ್ಚಿನ ಉದ್ಯೋಗಿಗಳು ಈಗಲೂ ವರ್ಕ್ ಫ್ರಂ ಹೋಮ್ ಸೌಲಭ್ಯವನ್ನೇ ಇಷ್ಟಪಡುತ್ತಾ ಇದ್ದಾರಂತೆ. ಮ್ಯಾನೇಜ್ಮೆಂಟ್ ಬಲವಂತಕ್ಕೆ ಕಚೇರಿಗೆ ಬರುವ ಉದ್ಯೋಗಿಗಳ ಸಂಖ್ಯೆ ಹೆಚ್ಚಿದೆ ಎಂದು ಕೆಲ ಸಮೀಕ್ಷೆಗಳು ಹೇಳಿವೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 22-04-2026 | ಎ.25ರಿಂದ ಮತ್ತೆ ಮಳೆ – ಯಾವ ಭಾಗಕ್ಕೆ ಏನು ಮುನ್ಸೂಚನೆ?

ರಾಜ್ಯದಲ್ಲಿ ಮುಂದಿನ ಎರಡು ದಿನ ಮಳೆಯ ಪ್ರಮಾಣ ಕಡಿಮೆ ಇರಲಿದ್ದು, ಏಪ್ರಿಲ್ 25ರಿಂದ…

7 hours ago

ಹವಾಮಾನ ವರದಿ | 21-04-2026 | ಕರಾವಳಿ-ಮಲೆನಾಡಿನಲ್ಲಿ ಮಳೆ ಜೋರಾಗಲಿದೆ, ಉತ್ತರ ಒಳನಾಡಿಗೂ ಗುಡುಗು ಮಳೆ..!

ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…

1 day ago

ವಿದ್ಯುತ್ ದರ ಶಾಕ್..! ಸಣ್ಣ ಕೈಗಾರಿಕೆಗಳಿಗೆ ಭಾರೀ ಹೊರೆ – ಉಮಾ ರೆಡ್ಡಿ ಎಚ್ಚರಿಕೆ

ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…

2 days ago

ಮುಳಬಾಗಿಲಿನಲ್ಲಿ ಹೋಟೆಲ್ ಮೇಲೆ ದಾಳಿ : 30 ಲೀಟರ್ ಹಳೆಯ ತುಪ್ಪ ಜಪ್ತಿ, ದಂಡ

ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…

2 days ago

ರೈತರಿಗೆ ಗುಡ್ ನ್ಯೂಸ್..! ತೊಗರಿ ಖರೀದಿ ಅವಧಿ ಮೇ 15ರವರೆಗೆ ವಿಸ್ತರಣೆ

ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…

2 days ago

ವಿಜಯಪುರದಲ್ಲಿ ತಾಪಮಾನ ಹೆಚ್ಚಳ : ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ AC ವಾರ್ಡ್ ಸಿದ್ಧ

ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…

2 days ago