Advertisement
ಸಂಪಾದಕೀಯ ಆಯ್ಕೆ

ಕ್ರಿಮಿನಲ್‌ ಕಾನೂನಿನಲ್ಲಿ ಭಾರಿ ಬದಲಾವಣೆ | ಅಪ್ರಾಪ್ತೆಯರ ಅತ್ಯಾಚಾರಕ್ಕೆ ಗಲ್ಲುಶಿಕ್ಷೆ, ಗ್ಯಾಂಗ್‌ ರೇಪ್‌ಗೆ 20 ವರ್ಷ ಜೈಲು | ಲೋಕಸಭೆಯಲ್ಲಿ ಮಸೂದೆ ಮಂಡಿಸಿದ ಅಮಿತ್‌ ಶಾ |

Share

ಕೊನೆಗೂ ಸರ್ಕಾರ ಎಚ್ಚೆತ್ತಂತಿದೆ. ಅದೆಷ್ಟು ಹೆಣ್ಣು ಮಕ್ಕಳ ಬದುಕು ಪ್ರಪಂಚ ನೋಡುವ ಮುನ್ನವೇ ಕಮರಿ ಹೋಗಿದೆ. ಜೀವನದ ಆಸೆಗಳನ್ನು ಕಟ್ಟಿಕೊಂಡಿದ್ದ ಅದೆಷ್ಟೋ ಹೆಣ್ಣು ಮಕ್ಕಳ ಕನಸು ಕಾಮುಕರ ಕೈಗೆ ಸಿಲುಕಿ ಮಣ್ಣುಪಾಲಾಗಿದೆ. ಇವರಿಗೆಲ್ಲ ತಕ್ಕ ಶಾಸ್ತಿಯಾಗಬೇಕಾದರೆ ಕಾನೂನು ಬದಲಾಗಬೇಕು ಎನ್ನುವ ಕೂಗು ಹಲವು ವರ್ಷಗಳಿಂದ ಕೇಳಿ ಬರುತ್ತಿತ್ತು. ಅದಕ್ಕೆ ಇಂದು ದಿನ ಕೂಡಿ ಬಂದಿದೆ. ಕ್ರಿಮಿನಲ್ ಕಾನೂನುಗಳನ್ನು ಪರಿಷ್ಕರಿಸುವ ಮೂರು ಮಸೂದೆಗಳನ್ನು ಕೇಂದ್ರ ಗೃಹಸಚಿವ ಅಮಿತ್‌ ಶಾ ಅವರು ಲೋಕಸಭೆಯಲ್ಲಿ  ಮಂಡಿಸಿದ್ದಾರೆ.

ದೇಶದ ಕ್ರಿಮಿನಲ್ ಕಾನೂನುಗಳನ್ನು ಕೂಲಂಕಷವಾಗಿ ಪರಿಶೀಲಿಸುವ ಹೊಸ ಮಸೂದೆಯನ್ನು ಅಮಿತ್ ಶಾ ಅವರು ಸಂಸತ್ತಿನಲ್ಲಿ ಮಂಡಿಸಿದರು. ಹೊಸ ಮಸೂದೆಗಳೊಂದಿಗೆ ಸರ್ಕಾರವು ನ್ಯಾಯವನ್ನು ಖಾತ್ರಿಪಡಿಸುವ ಗುರಿಯನ್ನು ಹೊಂದಿದೆಯೇ ಹೊರತು, ಶಿಕ್ಷೆಯನ್ನಲ್ಲ ಎಂದು ಮಸೂದೆ ಮಂಡನೆ ವೇಳೆ ಅಮಿತ್‌ ಶಾ ತಿಳಿಸಿದ್ದಾರೆ. ಅಪ್ರಾಪ್ತ ವಯಸ್ಸಿನ ಹೆಣ್ಣುಮಕ್ಕಳ ಮೇಲಿನ ಅತ್ಯಾಚಾರ ಹಾಗೂ ಗುಂಪು ಹಿಂಸಾಚಾರಕ್ಕೆ ಮರಣದಂಡನೆ #DeathPenalty ಶಿಕ್ಷೆ ವಿಧಿಸುವುದನ್ನು ಮಸೂದೆಯಲ್ಲಿ ಪ್ರಸ್ತಾಪಿಸಲಾಗಿದೆ. ಅಲ್ಲದೇ ಸಾಮೂಹಿಕ ಅತ್ಯಾಚಾರ #Gangrape ಪ್ರಕರಣಗಳಲ್ಲಿ ಅಪರಾಧಿಗಳಿಗೆ 20 ವರ್ಷ ಜೈಲು ಶಿಕ್ಷೆ ವಿಧಿಸಲಾಗುವುದು ಎಂದು ತಿಳಿಸಲಾಗಿದೆ. ಭಾರತೀಯ ದಂಡ ಸಂಹಿತೆ, ಕ್ರಿಮಿನಲ್ ಪ್ರಕ್ರಿಯಾ ಸಂಹಿತೆ ಮತ್ತು ಭಾರತೀಯ ಸಾಕ್ಷಿ ಕಾಯಿದೆಯನ್ನು ಬದಲಿಸುವ ಮಸೂದೆಯನ್ನು ಅಮಿತ್‌ ಶಾ ಮಂಡಿಸಿದ್ದಾರೆ.

ವಿವಾದಾತ್ಮಕ ದೇಶದ್ರೋಹ ಕಾನೂನನ್ನು ಸಂಪೂರ್ಣವಾಗಿ ರದ್ದುಗೊಳಿಸುವ ನಿಬಂಧನೆಯನ್ನು ಮಸೂದೆ ಹೊಂದಿದೆ. ಮಸೂದೆಯು IPCಯನ್ನು ಬದಲಿಸುವ ಗುರಿಯನ್ನು ಹೊಂದಿದೆ ಎಂದು ಅಮಿತ್‌ ಶಾ ಸಂಸತ್‌ನಲ್ಲಿ ಹೇಳಿದ್ದಾರೆ. ಅಪರಾಧದ ತೀವ್ರತೆಗೆ ಅನುಗುಣವಾಗಿ ಗುಂಪು ಹತ್ಯೆ ಪ್ರಕರಣಗಳಲ್ಲಿ ಮರಣದಂಡನೆ, ಚುನಾವಣಾ ಸಂದರ್ಭದಲ್ಲಿ ಮತದಾರರಿಗೆ ಲಂಚ ನೀಡಿದರೆ ಒಂದು ವರ್ಷ ಜೈಲು ಶಿಕ್ಷೆ, ಸಾಮೂಹಿಕ ಅತ್ಯಾಚಾರಕ್ಕಾಗಿ 20 ವರ್ಷಗಳ ಜೈಲು ಶಿಕ್ಷೆಯಿಂದ ಜೀವಾವಧಿ ಶಿಕ್ಷೆ, ಅಪ್ರಾಪ್ತೆಯರ ಅತ್ಯಾಚಾರಕ್ಕೆ ಮರಣದಂಡನೆ ಅಂಶಗಳನ್ನು ಮಸೂದೆ ಒಳಗೊಂಡಿದೆ. 1860 ರ ಭಾರತೀಯ ದಂಡ ಸಂಹಿತೆಯನ್ನು ಭಾರತೀಯ ನ್ಯಾಯ ಸಂಹಿತಾದಿಂದ ಬದಲಾಯಿಸಲಾಗುವುದು. ಮೊದಲು 511 ವಿಭಾಗಗಳಿದ್ದವು, ಆದರೆ ಈಗ ಅದು 356 ವಿಭಾಗಗಳನ್ನು ಹೊಂದಿರುತ್ತದೆ. 175 ಪರಿಚ್ಛೇದಗಳನ್ನು ತಿದ್ದುಪಡಿ ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

Source : Digital Media

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ

ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್‌ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…

28 minutes ago

E20 ಎಫೆಕ್ಟ್‌ – ಪಶು ಆಹಾರದ ಬೆಲೆ ಏರಿಕೆ, ಹೈನುಗಾರರ ಲೆಕ್ಕಾಚಾರವೇ ಬದಲು..!

E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…

10 hours ago

ಬರದ ನಡುವೆ ರೈತರ ಜಮೀನಿಗೆ ಸಿಎಂ ಭೇಟಿ – ಬೆಳೆ ಹಾನಿ ಪರಿಶೀಲನೆ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…

17 hours ago

ಹವಾಮಾನ ವರದಿ | 01-09-2026 | ಯಾವ ಜಿಲ್ಲೆಗಳಲ್ಲಿ ಇನ್ನೂ ಮಳೆಯ ಸಾಧ್ಯತೆ…?

ಕರ್ನಾಟಕದಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 4ರಿಂದ ಕರಾವಳಿ ಮತ್ತು…

17 hours ago

ಬೆಂಗಳೂರಿನಲ್ಲಿ ಭಾರತದ ಅತಿದೊಡ್ಡ ಕಾಫಿ ಉತ್ಸವ- ತೋಟದಿಂದ ಕಪ್‌ವರೆಗೆ ಭಾರತದ ಕಾಫಿಯ ಹೊಸ ಪಯಣ

ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…

1 day ago

‘ಅರ್ಥ’ ಮತ್ತು ‘ಅಪಾರ್ಥ’ದ ನಡುವೆ ಇರುವ ‘ಪಾ’ ಯಾವುದು?

ಅಪಾರ್ಥವಾಗುವುದು ಮಾನವ ಸಹಜ; ಆದರೆ ಅಪಾರ್ಥವಾಯಿತೆಂಬ ಅರಿವು ಬಂದ ನಂತರ ಮತ್ತೆ ‘ಅರ್ಥ’ದೆಡೆಗೆ…

1 day ago