ಹಿಮಾಚಲದಲ್ಲೂ ಭಾರಿ ಮೇಘಸ್ಫೋಟ | 11 ಮಂದಿ ಬಲಿ-50 ಕ್ಕೂ ಅಧಿಕ ಮಂದಿ ನಾಪತ್ತೆ | ಉತ್ತರಾಖಂಡದಲ್ಲಿ ಭೀಕರ ಪ್ರವಾಹ | ವಯನಾಡು ಮಾದರಿಯ ಇನ್ನೊಂದು ದುರ್ಘಟನೆ |

August 1, 2024
2:58 PM
ಹಿಮಾಚಲ ಪ್ರದೇಶದ ಎರಡು ಕಡೆ ಮೇಘಸ್ಫೋಟ ಸಂಭವಿಸಿದೆ. ದುರ್ಘಟನೆಯಲ್ಲಿ 11 ಮಂದಿ ಬಲಿಯಾಗಿದ್ದಾರೆ. ಸುಮಾರು 50 ಕ್ಕೂ ಅಧಿಕ ಮಂದಿ ನಾಪತ್ತೆಯಾಗಿದ್ದಾರೆ.

ಕೇರಳದ ವಯನಾಡಿಲ್ಲಿ ಸಂಭವಿಸಿದ ಭೀಕರ ಭೂ ಕುಸಿತ ದುರಂತದ ಬೆನ್ನಲ್ಲೇ ಹಿಮಾಚಲ ಪ್ರದೇಶದಲ್ಲೂ ಅಂತಹದ್ದೇ ದುರ್ಘಟನೆ ನಡೆದಿದೆ. ಹಿಮಾಚಲ ಪ್ರದೇಶದ ಎರಡು ಕಡೆ ಮೇಘಸ್ಫೋಟ ಸಂಭವಿಸಿದೆ. ದುರ್ಘಟನೆಯಲ್ಲಿ 11 ಮಂದಿ ಬಲಿಯಾಗಿದ್ದಾರೆ. ಸುಮಾರು 50 ಕ್ಕೂ ಅಧಿಕ ಮಂದಿ ನಾಪತ್ತೆಯಾಗಿದ್ದಾರೆ.

Advertisement
Advertisement

ಹಿಮಾಚಲ ಪ್ರದೇಶದ ಎರಡು ಕಡೆ ಮೇಘಸ್ಫೋಟ(Cloud bust) ಸಂಭವಿಸಿದೆ. ಬುಧವಾರ-ಗುರುವಾರ ಮಧ್ಯರಾತ್ರಿ 1 ಗಂಟೆಗೆ ಈ ಮೇಘಸ್ಫೋಟವು ಸಂಭವಿಸಿದೆ. ಭಾರಿ ಮಳೆಯಿಂದಾಗಿ ಅನೇಕ ಮನೆಗಳು ಮತ್ತು ರಸ್ತೆಗಳು ಕೊಚ್ಚಿಹೋಗಿವೆ. ಎರಡು ಜಲವಿದ್ಯುತ್ ಯೋಜನೆಗಳಿಗೂ ಹಾನಿಯಾಗಿದೆ.

ಕುಲುವಿನ ಭುಂತರ್ ಪ್ರದೇಶದಲ್ಲಿ ಪಾರ್ವತಿ ನದಿ ಉಕ್ಕಿ ಹರಿಯುತ್ತಿದ್ದು, ಮಲಾನಾ ಖುದ್ ಪ್ರವಾಹ ಉಂಟಾಗಿದೆ. ಇದೇ ವೇಳೆ, ಮಲಾನಾ-1 ಮತ್ತು ಮಲಾನಾ-2 ಜಲವಿದ್ಯುತ್ ಯೋಜನೆಗಳಿಗೆ ಧಕ್ಕೆಯಾಗಿದೆ ಎಂದು ವರದಿಯಾಗಿದೆ. ಮತ್ತೊಂದೆಡೆ, ಭೂಕುಸಿತದಿಂದಾಗಿ ಮನಾಲಿ-ಚಂಡೀಗಢ ರಾಷ್ಟ್ರೀಯ ಹೆದ್ದಾರಿ ಹಲವಾರು ಸ್ಥಳಗಳಲ್ಲಿ ಕುಸಿದು ಬಿದ್ದಿದೆ. ಬಿಯಾಸ್ ನದಿಯ ನೀರು ಮಂಡಿಯ ಪಾಂಡೋದಲ್ಲಿ ಕೆಲವು ಮನೆಗಳಿಗೆ ನುಗ್ಗಿದೆ. ಈ ಪ್ರದೇಶದಲ್ಲಿ ಕೆಲವರು ನಾಪತ್ತೆಯಾಗಿದ್ದು, ಮನೆಗಳು ಮತ್ತು ಅಂಗಡಿಗಳು ಕೊಚ್ಚಿಹೋಗಿರುವ ಬಗ್ಗೆ ವರದಿಯಾಗಿದೆ. ಈ ಪೀಡಿತ ಪ್ರದೇಶಗಳಲ್ಲಿನ ಎಲ್ಲ ಶಾಲಾ – ಕಾಲೇಜುಗಳಿಗೆ ರಜೆ ನೀಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಉತ್ತರಾಖಂಡದಲ್ಲಿ  ಧಾರಾಕಾರ ಮಳೆ ಮುಂದುವರಿದಿದ್ದು, ಜನಜೀವನವನ್ನೇ ಅಸ್ತವ್ಯಸ್ತಗೊಳಿಸಿದೆ. ಚಾರ್ ಧಾಮ್ ಯಾತ್ರೆಗೆ ಬರುವ ಜನರಿಗೆ ಸುರಕ್ಷಿತ ಸ್ಥಳಗಳಲ್ಲಿ ಇರುವಂತೆ ಸೂಚನೆ ನೀಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.ರಾಜ್ಯದ ವಿವಿಧ ಭಾಗಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ಅಲ್ಲಲ್ಲಿ ಭೂಕುಸಿತ ಉಂಟಾಗಿದ್ದು, ಭಾರೀ ಮೋಡ ಕವಿದಿದ್ದರಿಂದ ಹಗಲು ಹೊತ್ತಿನಲ್ಲೂ ಕತ್ತಲು ಪರಿಸ್ಥಿತಿ ಉಂಟಾಗಿದೆ, ನದಿಗಳು ಮತ್ತು ಚರಂಡಿಗಳು ತುಂಬಿ ಹರಿಯುತ್ತಿದ್ದು, ತೆಹ್ರಿ-ಘನ್ಸಾಲಿಯ ಜಖನ್ಯಾಲಿ ಬಳಿಯ ನೌತಾಡ್ ಗದ್ರೆಯಲ್ಲಿ ಮೋಘ ಸ್ಫೋಟದಿಂದಾಗಿ 2 ಜನರು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

ಸೋನ್‌ಪ್ರಯಾಗ ಮತ್ತು ಗೌರಿಕುಂಡ್ ನಡುವೆ ಸಿಕ್ಕಿಬಿದ್ದ ಸುಮಾರು 571 ಕೇದಾರನಾಥ ಯಾತ್ರಾರ್ಥಿಗಳನ್ನು ಮೇಘಸ್ಫೋಟದ ನಂತರ ರಕ್ಷಿಸಲಾಗಿದೆ. ಸೋನ್‌ಪ್ರಯಾಗದಿಂದ ಸುಮಾರು 2 ಕಿಮೀ ದೂರದಲ್ಲಿ ಭೂಕುಸಿತದಿಂದಾಗಿ ಸುಮಾರು 1,500 ಯಾತ್ರಾರ್ಥಿಗಳು ಸಿಕ್ಕಿಬಿದ್ದಿದ್ದಾರೆ. ಗೌರಿಕುಂಡ್ ಮತ್ತು ಕೇದಾರನಾಥ ನಡುವೆ ಸಿಲುಕಿರುವವರನ್ನು ಸ್ಥಳಾಂತರಿಸಲು ಚಾಪರ್‌ಗಳನ್ನು ಬಳಸಲಾಗಿದೆ.

Advertisement

Source: ಅಂತರ್ಜಾಲ ಮಾಹಿತಿ

Following the tragic landslide disaster in Wayanad, Kerala, Himachal Pradesh also experienced a similar incident. A cloudburst occurred on two sides of the state, resulting in the loss of 11 lives and leaving over 50 people missing.

Advertisement

Advertisement

Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹಾಳೆತಟ್ಟೆಯ ಬಳಿಕ ಈಗ ಮಾವಿನಹಣ್ಣು | ಭಾರತದ 15 ಮಾವಿನ ಹಣ್ಣು ಶಿಪ್‌ಮೆಂಟ್‌ಗಳನ್ನು ತಿರಸ್ಕರಿಸಿದ ಅಮೇರಿಕಾ |
May 21, 2025
7:45 AM
by: The Rural Mirror ಸುದ್ದಿಜಾಲ
ದೀಪ ಹಚ್ಚುವಾಗ ಈ ತಪ್ಪುಗಳನ್ನು ಎಂದಿಗೂ ಮಾಡಬೇಡಿ
May 21, 2025
7:09 AM
by: ದ ರೂರಲ್ ಮಿರರ್.ಕಾಂ
ಮಳೆ ಸುದ್ದಿ ಏನು ? | ನಾಳೆಯೂ ರೆಡ್‌ ಎಲರ್ಟ್‌ ಎಲ್ಲಿ..?
May 20, 2025
9:44 PM
by: The Rural Mirror ಸುದ್ದಿಜಾಲ
ಸಿಂಧು ಜಲ ಒಪ್ಪಂದ ಅಮಾನತು – ದೇಶದ ಹಲವು ರಾಜ್ಯಗಳ ರೈತರಿಗೆ ಅನುಕೂಲ
May 20, 2025
7:53 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror