Advertisement
MIRROR FOCUS

ಹಿಮಾಚಲದಲ್ಲೂ ಭಾರಿ ಮೇಘಸ್ಫೋಟ | 11 ಮಂದಿ ಬಲಿ-50 ಕ್ಕೂ ಅಧಿಕ ಮಂದಿ ನಾಪತ್ತೆ | ಉತ್ತರಾಖಂಡದಲ್ಲಿ ಭೀಕರ ಪ್ರವಾಹ | ವಯನಾಡು ಮಾದರಿಯ ಇನ್ನೊಂದು ದುರ್ಘಟನೆ |

Share

ಕೇರಳದ ವಯನಾಡಿಲ್ಲಿ ಸಂಭವಿಸಿದ ಭೀಕರ ಭೂ ಕುಸಿತ ದುರಂತದ ಬೆನ್ನಲ್ಲೇ ಹಿಮಾಚಲ ಪ್ರದೇಶದಲ್ಲೂ ಅಂತಹದ್ದೇ ದುರ್ಘಟನೆ ನಡೆದಿದೆ. ಹಿಮಾಚಲ ಪ್ರದೇಶದ ಎರಡು ಕಡೆ ಮೇಘಸ್ಫೋಟ ಸಂಭವಿಸಿದೆ. ದುರ್ಘಟನೆಯಲ್ಲಿ 11 ಮಂದಿ ಬಲಿಯಾಗಿದ್ದಾರೆ. ಸುಮಾರು 50 ಕ್ಕೂ ಅಧಿಕ ಮಂದಿ ನಾಪತ್ತೆಯಾಗಿದ್ದಾರೆ.

ಹಿಮಾಚಲ ಪ್ರದೇಶದ ಎರಡು ಕಡೆ ಮೇಘಸ್ಫೋಟ(Cloud bust) ಸಂಭವಿಸಿದೆ. ಬುಧವಾರ-ಗುರುವಾರ ಮಧ್ಯರಾತ್ರಿ 1 ಗಂಟೆಗೆ ಈ ಮೇಘಸ್ಫೋಟವು ಸಂಭವಿಸಿದೆ. ಭಾರಿ ಮಳೆಯಿಂದಾಗಿ ಅನೇಕ ಮನೆಗಳು ಮತ್ತು ರಸ್ತೆಗಳು ಕೊಚ್ಚಿಹೋಗಿವೆ. ಎರಡು ಜಲವಿದ್ಯುತ್ ಯೋಜನೆಗಳಿಗೂ ಹಾನಿಯಾಗಿದೆ.

ಕುಲುವಿನ ಭುಂತರ್ ಪ್ರದೇಶದಲ್ಲಿ ಪಾರ್ವತಿ ನದಿ ಉಕ್ಕಿ ಹರಿಯುತ್ತಿದ್ದು, ಮಲಾನಾ ಖುದ್ ಪ್ರವಾಹ ಉಂಟಾಗಿದೆ. ಇದೇ ವೇಳೆ, ಮಲಾನಾ-1 ಮತ್ತು ಮಲಾನಾ-2 ಜಲವಿದ್ಯುತ್ ಯೋಜನೆಗಳಿಗೆ ಧಕ್ಕೆಯಾಗಿದೆ ಎಂದು ವರದಿಯಾಗಿದೆ. ಮತ್ತೊಂದೆಡೆ, ಭೂಕುಸಿತದಿಂದಾಗಿ ಮನಾಲಿ-ಚಂಡೀಗಢ ರಾಷ್ಟ್ರೀಯ ಹೆದ್ದಾರಿ ಹಲವಾರು ಸ್ಥಳಗಳಲ್ಲಿ ಕುಸಿದು ಬಿದ್ದಿದೆ. ಬಿಯಾಸ್ ನದಿಯ ನೀರು ಮಂಡಿಯ ಪಾಂಡೋದಲ್ಲಿ ಕೆಲವು ಮನೆಗಳಿಗೆ ನುಗ್ಗಿದೆ. ಈ ಪ್ರದೇಶದಲ್ಲಿ ಕೆಲವರು ನಾಪತ್ತೆಯಾಗಿದ್ದು, ಮನೆಗಳು ಮತ್ತು ಅಂಗಡಿಗಳು ಕೊಚ್ಚಿಹೋಗಿರುವ ಬಗ್ಗೆ ವರದಿಯಾಗಿದೆ. ಈ ಪೀಡಿತ ಪ್ರದೇಶಗಳಲ್ಲಿನ ಎಲ್ಲ ಶಾಲಾ – ಕಾಲೇಜುಗಳಿಗೆ ರಜೆ ನೀಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಉತ್ತರಾಖಂಡದಲ್ಲಿ  ಧಾರಾಕಾರ ಮಳೆ ಮುಂದುವರಿದಿದ್ದು, ಜನಜೀವನವನ್ನೇ ಅಸ್ತವ್ಯಸ್ತಗೊಳಿಸಿದೆ. ಚಾರ್ ಧಾಮ್ ಯಾತ್ರೆಗೆ ಬರುವ ಜನರಿಗೆ ಸುರಕ್ಷಿತ ಸ್ಥಳಗಳಲ್ಲಿ ಇರುವಂತೆ ಸೂಚನೆ ನೀಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.ರಾಜ್ಯದ ವಿವಿಧ ಭಾಗಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ಅಲ್ಲಲ್ಲಿ ಭೂಕುಸಿತ ಉಂಟಾಗಿದ್ದು, ಭಾರೀ ಮೋಡ ಕವಿದಿದ್ದರಿಂದ ಹಗಲು ಹೊತ್ತಿನಲ್ಲೂ ಕತ್ತಲು ಪರಿಸ್ಥಿತಿ ಉಂಟಾಗಿದೆ, ನದಿಗಳು ಮತ್ತು ಚರಂಡಿಗಳು ತುಂಬಿ ಹರಿಯುತ್ತಿದ್ದು, ತೆಹ್ರಿ-ಘನ್ಸಾಲಿಯ ಜಖನ್ಯಾಲಿ ಬಳಿಯ ನೌತಾಡ್ ಗದ್ರೆಯಲ್ಲಿ ಮೋಘ ಸ್ಫೋಟದಿಂದಾಗಿ 2 ಜನರು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

ಸೋನ್‌ಪ್ರಯಾಗ ಮತ್ತು ಗೌರಿಕುಂಡ್ ನಡುವೆ ಸಿಕ್ಕಿಬಿದ್ದ ಸುಮಾರು 571 ಕೇದಾರನಾಥ ಯಾತ್ರಾರ್ಥಿಗಳನ್ನು ಮೇಘಸ್ಫೋಟದ ನಂತರ ರಕ್ಷಿಸಲಾಗಿದೆ. ಸೋನ್‌ಪ್ರಯಾಗದಿಂದ ಸುಮಾರು 2 ಕಿಮೀ ದೂರದಲ್ಲಿ ಭೂಕುಸಿತದಿಂದಾಗಿ ಸುಮಾರು 1,500 ಯಾತ್ರಾರ್ಥಿಗಳು ಸಿಕ್ಕಿಬಿದ್ದಿದ್ದಾರೆ. ಗೌರಿಕುಂಡ್ ಮತ್ತು ಕೇದಾರನಾಥ ನಡುವೆ ಸಿಲುಕಿರುವವರನ್ನು ಸ್ಥಳಾಂತರಿಸಲು ಚಾಪರ್‌ಗಳನ್ನು ಬಳಸಲಾಗಿದೆ.

Source: ಅಂತರ್ಜಾಲ ಮಾಹಿತಿ

Following the tragic landslide disaster in Wayanad, Kerala, Himachal Pradesh also experienced a similar incident. A cloudburst occurred on two sides of the state, resulting in the loss of 11 lives and leaving over 50 people missing.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬೇವಿನ ಬೀಜದಿಂದ ಆದಾಯದ ಅವಕಾಶ ! ಚಿಕ್ಕಮಗಳೂರಿನ ಯುವ ರೈತನ ಸಕ್ಸಸ್ ಸ್ಟೋರಿ

ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…

2 days ago

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು : ಭಾರತದ ಕೃಷಿಗೆ ಎದುರಾಗುತ್ತಿರುವ ಸವಾಲು

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…

2 days ago

ಯಾದಗಿರಿಯಲ್ಲಿ ಬಿಸಿಗಾಳಿ ಎಚ್ಚರಿಕೆ – ‘ಯೆಲ್ಲೋ ಅಲರ್ಟ್’ ಘೋಷಣೆ, ಮುನ್ನೆಚ್ಚರಿಕೆ ಪಾಲಿಸಿ..!

ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…

2 days ago

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ದಾಖಲೆ: ಕಲಬುರಗಿ ಯುವ ರೈತನಿಗೆ ರಾಜ್ಯದ ಮೆಚ್ಚುಗೆ!

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…

3 days ago

2026 ಮುಂಗಾರು ಮುನ್ಸೂಚನೆ – ಕೇರಳಕ್ಕೆ ನಿರೀಕ್ಷೆಗಿಂತ ಮುನ್ನವೇ ಆಗಮನ? – ಮಳೆ ಕಡಿಮೆಯಾಗುವ ಸಾಧ್ಯತೆ- ಕೃಷಿಗೆ ದೊಡ್ಡ ಸವಾಲು

2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…

3 days ago

ಈರುಳ್ಳಿಯಲ್ಲಿ ಇಳುವರಿ ಹೆಚ್ಚಿಸುವ ರಹಸ್ಯ..! ಜೇನುನೊಣಗಳ ಪರಾಗಸ್ಪರ್ಶದಿಂದ ಡಬಲ್ ಲಾಭ

ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…

3 days ago