ಸುದ್ದಿಗಳು

ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರಿ ಉದ್ಯೋಗ ಕಡಿತ | ಒಂದೇ ವರ್ಷಕ್ಕೆ 60 ಸಾವಿರ ಉದ್ಯೋಗ ಕಡಿತ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಐಟಿ ಜಗತ್ತು ಕೈ ಬೀಸಿ ಕರೆದಷ್ಟೇ ಬೇಗ ಹೊರಕ್ಕೆ ಕಳುಹಿಸುತ್ತದೆ. ಸಾವಿರಾರು ಕನಸು ಹೊತ್ತು ಕೆಲಸಕ್ಕೆ ಸೇರಿದ ಉದ್ಯೋಗಿಗಳು ಕೆಲವೇ ತಿಂಗಳಲ್ಲಿ ಮನೆಗೆ ವಾಪಾಸ್ ಹಿಂತಿರುಗುವ ಪರಿಸ್ಥಿತಿ ಎಲ್ಲೆಡೆ ಎದುರಾಗುತ್ತಿದೆ. ಎಷ್ಟೇ ಕಲಿತರು ಉದ್ಯೋಗ ಪಕ್ಕಾ ಇಲ್ಲಾ ಅನ್ನೋದು ಮತ್ತೆ ಮತ್ತೆ ಸಾಬೀತಾಗುತ್ತಿದೆ. ಜಗತ್ತಿನೆಲ್ಲೆಡೆ ಎದುರಿಸುತ್ತಿರುವ ಆರ್ಥಿಕ ಹಿಂಜರಿತ ಎಲ್ಲದರ ಮೇಲೆ ನೇರ ಪರಿಣಾಮ ಬೀರುತ್ತಿದೆ.

Advertisement
Advertisement

ಮಾಹಿತಿ ತಂತ್ರಜ್ಞಾನ ಕ್ಷೇತ್ರದ  ಕಂಪನಿಗಳಿಂದ ಗುತ್ತಿಗೆದಾರರ ಮೂಲಕ ನೇಮಕಗೊಂಡ ಹೊರಗುತ್ತಿಗೆ ಕಾರ್ಮಿಕರ ಸಂಖ್ಯೆ ಕಳೆದ ವರ್ಷಕ್ಕಿಂತ ಶೇ.7.7 ರಷ್ಟು ಕಡಿತಗೊಂಡಿದ್ದು, ಒಂದೇ ವರ್ಷದಲ್ಲಿ ಸುಮಾರು 60,000 ಮಂದಿ ಕೆಲಸ ಕಳೆದುಕೊಂಡಿದ್ದಾರೆ ಎಂದು ನೇಮಕಾತಿ ಸಂಸ್ಥೆ ತಿಳಿಸಿದೆ. ವಿಶ್ವದಾದ್ಯಂತ ಅನೇಕ ಕಂಪನಿಗಳು ವೆಚ್ಚ ಕಡಿತ ಹಾಗೂ ಇತರ ಕಾರಣಗಳನ್ನು ನೀಡಿ ತನ್ನ ಉದ್ಯೋಗಿಗಳನ್ನು ಸಾಮೂಹಿಕವಾಗಿ ವಜಾಗೊಳಿಸುತ್ತಿರುವುದು ಇತ್ತೀಚೆಗೆ ಹೆಚ್ಚಾಗಿದೆ. ಈ ನಡುವೆ ಭಾರತದಲ್ಲಿ ಐಟಿ ಕ್ಷೇತ್ರದ ಕಂಪನಿಗಳಿಂದ ಗುತ್ತಿಗೆದಾರರ ಮೂಲಕ ನೇಮಕಗೊಂಡ ಸುಮಾರು 60 ಸಾವಿರ ಹೊರಗುತ್ತಿಗೆ ಕಾರ್ಮಿಕರು ಕೆಲಸ ಕಳೆದುಕೊಂಡಿರುವುದಾಗಿ ನೇಮಕಾತಿ ಸಂಸ್ಥೆ ತಿಳಿಸಿದೆ.

ಐಟಿ ವಲಯದಲ್ಲಿ ಹೊರಗುತ್ತಿಗೆ ನೌಕರರ ನೇಮಕವು ಮಾರ್ಚ್‌ ತ್ರೈಮಾಸಿಕದಿಂದ ಶೇ.6 ರಷ್ಟು ಕಡಿತಗೊಂಡಿದೆ. ಇದರಿಂದಾಗಿ ಏಪ್ರಿಲ್‌ ವೇಳೆಗೆ ದೇಶದಲ್ಲಿ ನಿರುದ್ಯೋಗ ದರವು ಶೇ.7.8 ರಿಂದ ಶೇ.8.11ಕ್ಕೆ ಏರಿಕೆಯಾಗಿದೆ ಎಂದು ಭಾರತೀಯ ಆರ್ಥಿಕತೆಯ ಮೇಲ್ವಿಚಾರಣಾ ಕೇಂದ್ರ ತಿಳಿಸಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಕಾಲಿಕ ಮಳೆ | ಮಾವು ಇಳುವರಿ ಕುಸಿತ | ಬೆಲೆ ಕುಸಿತ | ರೈತರಿಗೆ ನಿರಾಸೆ |

ಮಾವು ಉತ್ಪಾದನೆಯಲ್ಲಿ ರಾಜ್ಯದಲ್ಲೇ ಎರಡನೇ ಸ್ಥಾನ ಪಡೆದಿರುವ ರಾಮನಗರ ಜಿಲ್ಲೆಯಲ್ಲಿ ಈ ಬಾರಿ…

6 hours ago

ಶಾಲೆ ಆರಂಭ | ಯೋಜಿತ ಮತ್ತು ಪರಿಣಾಮಕಾರಿ ಆರಂಭದ ಅಗತ್ಯ

ಶಾಲೆಯ  ಯೋಜಿತ ಮತ್ತು ಪರಿಣಾಮಕಾರಿ ಆರಂಭಕ್ಕೆ  ವಿದ್ಯಾರ್ಥಿ – ಪೋಷಕ – ಶಿಕ್ಷಕ …

6 hours ago

ಛದ್ಮ ವೇಷದಲ್ಲಿ ನಮ್ಮ ಪ್ರಜಾಪ್ರಭುತ್ವ

ಬಡವರಿಗೆ, ಹಳ್ಳಿಗರಿಗೆ, ದಲಿತರಿಗೆ, ನಿರಕ್ಷಕ ಕುಕ್ಷಿಗಳಿಗೆ, ನಿರುದ್ಯೋಗಿಗಳಿಗೆ ಸಮಾನತೆಯೆಂಬುದು ಮತದಾನದ ಸಂದರ್ಭದಲ್ಲಿ ಮಾತ್ರವೇ…

6 hours ago

ಸಂಜೆ ದೀಪ ಹಚ್ಚುವಾಗ ಪಾಲಿಸಬೇಕಾದ ಕೆಲವು ನಿಯಮಗಳು

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳಲ್ಲಿ ಸಂಪರ್ಕಿಸಿ 9535156490

7 hours ago

ಆಂಧ್ರಪ್ರದೇಶಕ್ಕೆ ನಾಲ್ಕು ಕುಮ್ಕಿ ಆನೆಗಳನ್ನು ಹಸ್ತಾಂತರಿಸಿದ ರಾಜ್ಯಸರ್ಕಾರ

ಮಾನವ ಆನೆ ಸಂಘರ್ಷ ತಡೆಗಟ್ಟಲು ಅಕ್ಕ ಪಕ್ಕದ ರಾಜ್ಯಗಳ ಸಹಕಾರ ಅಗತ್ಯ ಎಂದು…

15 hours ago

ರೈತರಿಗೆ ಉತ್ತಮ ಗುಣಮಟ್ಟದ ಬಿತ್ತನೆ ಬೀಜ ಮತ್ತು ರಸಗೊಬ್ಬರಗಳನ್ನು ಸಮರ್ಪಕವಾಗಿ ಪೂರೈಸಲು ಕ್ರಮ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ರೈತರಿಗೆ ಉತ್ತಮ ಗುಣಮಟ್ಟದ ಬಿತ್ತನೆ ಬೀಜ ಮತ್ತು ರಸಗೊಬ್ಬರಗಳನ್ನು…

15 hours ago