Advertisement
ಸುದ್ದಿಗಳು

ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರಿ ಉದ್ಯೋಗ ಕಡಿತ | ಒಂದೇ ವರ್ಷಕ್ಕೆ 60 ಸಾವಿರ ಉದ್ಯೋಗ ಕಡಿತ |

Share

ಐಟಿ ಜಗತ್ತು ಕೈ ಬೀಸಿ ಕರೆದಷ್ಟೇ ಬೇಗ ಹೊರಕ್ಕೆ ಕಳುಹಿಸುತ್ತದೆ. ಸಾವಿರಾರು ಕನಸು ಹೊತ್ತು ಕೆಲಸಕ್ಕೆ ಸೇರಿದ ಉದ್ಯೋಗಿಗಳು ಕೆಲವೇ ತಿಂಗಳಲ್ಲಿ ಮನೆಗೆ ವಾಪಾಸ್ ಹಿಂತಿರುಗುವ ಪರಿಸ್ಥಿತಿ ಎಲ್ಲೆಡೆ ಎದುರಾಗುತ್ತಿದೆ. ಎಷ್ಟೇ ಕಲಿತರು ಉದ್ಯೋಗ ಪಕ್ಕಾ ಇಲ್ಲಾ ಅನ್ನೋದು ಮತ್ತೆ ಮತ್ತೆ ಸಾಬೀತಾಗುತ್ತಿದೆ. ಜಗತ್ತಿನೆಲ್ಲೆಡೆ ಎದುರಿಸುತ್ತಿರುವ ಆರ್ಥಿಕ ಹಿಂಜರಿತ ಎಲ್ಲದರ ಮೇಲೆ ನೇರ ಪರಿಣಾಮ ಬೀರುತ್ತಿದೆ.

ಮಾಹಿತಿ ತಂತ್ರಜ್ಞಾನ ಕ್ಷೇತ್ರದ  ಕಂಪನಿಗಳಿಂದ ಗುತ್ತಿಗೆದಾರರ ಮೂಲಕ ನೇಮಕಗೊಂಡ ಹೊರಗುತ್ತಿಗೆ ಕಾರ್ಮಿಕರ ಸಂಖ್ಯೆ ಕಳೆದ ವರ್ಷಕ್ಕಿಂತ ಶೇ.7.7 ರಷ್ಟು ಕಡಿತಗೊಂಡಿದ್ದು, ಒಂದೇ ವರ್ಷದಲ್ಲಿ ಸುಮಾರು 60,000 ಮಂದಿ ಕೆಲಸ ಕಳೆದುಕೊಂಡಿದ್ದಾರೆ ಎಂದು ನೇಮಕಾತಿ ಸಂಸ್ಥೆ ತಿಳಿಸಿದೆ. ವಿಶ್ವದಾದ್ಯಂತ ಅನೇಕ ಕಂಪನಿಗಳು ವೆಚ್ಚ ಕಡಿತ ಹಾಗೂ ಇತರ ಕಾರಣಗಳನ್ನು ನೀಡಿ ತನ್ನ ಉದ್ಯೋಗಿಗಳನ್ನು ಸಾಮೂಹಿಕವಾಗಿ ವಜಾಗೊಳಿಸುತ್ತಿರುವುದು ಇತ್ತೀಚೆಗೆ ಹೆಚ್ಚಾಗಿದೆ. ಈ ನಡುವೆ ಭಾರತದಲ್ಲಿ ಐಟಿ ಕ್ಷೇತ್ರದ ಕಂಪನಿಗಳಿಂದ ಗುತ್ತಿಗೆದಾರರ ಮೂಲಕ ನೇಮಕಗೊಂಡ ಸುಮಾರು 60 ಸಾವಿರ ಹೊರಗುತ್ತಿಗೆ ಕಾರ್ಮಿಕರು ಕೆಲಸ ಕಳೆದುಕೊಂಡಿರುವುದಾಗಿ ನೇಮಕಾತಿ ಸಂಸ್ಥೆ ತಿಳಿಸಿದೆ.

ಐಟಿ ವಲಯದಲ್ಲಿ ಹೊರಗುತ್ತಿಗೆ ನೌಕರರ ನೇಮಕವು ಮಾರ್ಚ್‌ ತ್ರೈಮಾಸಿಕದಿಂದ ಶೇ.6 ರಷ್ಟು ಕಡಿತಗೊಂಡಿದೆ. ಇದರಿಂದಾಗಿ ಏಪ್ರಿಲ್‌ ವೇಳೆಗೆ ದೇಶದಲ್ಲಿ ನಿರುದ್ಯೋಗ ದರವು ಶೇ.7.8 ರಿಂದ ಶೇ.8.11ಕ್ಕೆ ಏರಿಕೆಯಾಗಿದೆ ಎಂದು ಭಾರತೀಯ ಆರ್ಥಿಕತೆಯ ಮೇಲ್ವಿಚಾರಣಾ ಕೇಂದ್ರ ತಿಳಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಭಿವೃದ್ಧಿ ಹೆಸರಿನಲ್ಲಿ ಮರಗಳನ್ನು ಕಡಿಯುವುದಿಲ್ಲ

ಮೈಸೂರು ಜಿಲ್ಲೆಯ ಮೇಲ್ಸೇತುವೆ ಕಾಮಗಾರಿಗಳ ವೇಳೆ ಯಾವುದೇ ಮರಗಳನ್ನು ಕಡಿಯುವುದಿಲ್ಲ ಎಂದು ಸಂಸದ…

3 hours ago

ರಾಜ್ಯದ ಹಲವೆಡೆ ಮಳೆ; ಕುಕನೂರಿನಲ್ಲಿ 7 ಸೆಂ.ಮೀ ಮಳೆ

ರಾಜ್ಯದ ಒಳನಾಡಿನ ಕೆಲವೆಡೆ ಮಳೆಯಾಗಿದ್ದು, ಕುಕನೂರಿನಲ್ಲಿ 7 ಸೆಂ.ಮೀ ಮಳೆಯಾಗಿದೆ. ಕಲಬುರಗಿಯಲ್ಲಿ 41…

3 hours ago

ಹವಾಮಾನ ವರದಿ | 07-05-2026 | ಕರ್ನಾಟಕದಲ್ಲಿ ಪೂರ್ವ ಮುಂಗಾರು ಚುರುಕು : ಕರಾವಳಿ-ಮಲೆನಾಡಿನಲ್ಲಿ ಮುಂದಿನ 10 ದಿನ ಮಳೆ ಸಾಧ್ಯತೆ,

08.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದ ಹಲವು…

21 hours ago

ಕೆಲವು ರಾಜ್ಯಗಳಲ್ಲಿ ಸುಡುವ ಬಿಸಿಲು, ಇನ್ನೂ ಕೆಲವು ಕಡೆ ಮಳೆ – ದೇಶಾದ್ಯಂತ ಹವಾಮಾನ ವೈಪರೀತ್ಯ

ದೇಶದ ಹಲವೆಡೆ ಬಿಸಿಗಾಳಿ ತೀವ್ರವಾಗಿದ್ದು, ಕೆಲ ರಾಜ್ಯಗಳಲ್ಲಿ ಮಳೆ ಹಾಗೂ ಮೋಡ ಕವಿದ…

1 day ago

ಪರಿಸರ ಸಂರಕ್ಷಣೆಯಿಂದ ಮಾತ್ರ ಸುಸ್ಥಿರ ಆರೋಗ್ಯ ಸಾಧ್ಯ

ಪರಿಸರ ಮಾಲಿನ್ಯ ಮತ್ತು ಹಸಿರು ಹೊದಿಕೆ ನಾಶದಿಂದ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿವೆ. ಪ್ರಕೃತಿ…

1 day ago

ಸ್ಥಳೀಯ ಸಂಸ್ಥೆ ಚುನಾವಣೆ ಶೀಘ್ರ – ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಜ್ಯದಲ್ಲಿ ಬಾಕಿ ಇರುವ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಶೀಘ್ರದಲ್ಲೇ ನಡೆಸಲು ಸರ್ಕಾರ ಸಿದ್ಧವಿದೆ…

1 day ago