Advertisement
ಸುದ್ದಿಗಳು

ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರಿ ಉದ್ಯೋಗ ಕಡಿತ | ಒಂದೇ ವರ್ಷಕ್ಕೆ 60 ಸಾವಿರ ಉದ್ಯೋಗ ಕಡಿತ |

Share

ಐಟಿ ಜಗತ್ತು ಕೈ ಬೀಸಿ ಕರೆದಷ್ಟೇ ಬೇಗ ಹೊರಕ್ಕೆ ಕಳುಹಿಸುತ್ತದೆ. ಸಾವಿರಾರು ಕನಸು ಹೊತ್ತು ಕೆಲಸಕ್ಕೆ ಸೇರಿದ ಉದ್ಯೋಗಿಗಳು ಕೆಲವೇ ತಿಂಗಳಲ್ಲಿ ಮನೆಗೆ ವಾಪಾಸ್ ಹಿಂತಿರುಗುವ ಪರಿಸ್ಥಿತಿ ಎಲ್ಲೆಡೆ ಎದುರಾಗುತ್ತಿದೆ. ಎಷ್ಟೇ ಕಲಿತರು ಉದ್ಯೋಗ ಪಕ್ಕಾ ಇಲ್ಲಾ ಅನ್ನೋದು ಮತ್ತೆ ಮತ್ತೆ ಸಾಬೀತಾಗುತ್ತಿದೆ. ಜಗತ್ತಿನೆಲ್ಲೆಡೆ ಎದುರಿಸುತ್ತಿರುವ ಆರ್ಥಿಕ ಹಿಂಜರಿತ ಎಲ್ಲದರ ಮೇಲೆ ನೇರ ಪರಿಣಾಮ ಬೀರುತ್ತಿದೆ.

ಮಾಹಿತಿ ತಂತ್ರಜ್ಞಾನ ಕ್ಷೇತ್ರದ  ಕಂಪನಿಗಳಿಂದ ಗುತ್ತಿಗೆದಾರರ ಮೂಲಕ ನೇಮಕಗೊಂಡ ಹೊರಗುತ್ತಿಗೆ ಕಾರ್ಮಿಕರ ಸಂಖ್ಯೆ ಕಳೆದ ವರ್ಷಕ್ಕಿಂತ ಶೇ.7.7 ರಷ್ಟು ಕಡಿತಗೊಂಡಿದ್ದು, ಒಂದೇ ವರ್ಷದಲ್ಲಿ ಸುಮಾರು 60,000 ಮಂದಿ ಕೆಲಸ ಕಳೆದುಕೊಂಡಿದ್ದಾರೆ ಎಂದು ನೇಮಕಾತಿ ಸಂಸ್ಥೆ ತಿಳಿಸಿದೆ. ವಿಶ್ವದಾದ್ಯಂತ ಅನೇಕ ಕಂಪನಿಗಳು ವೆಚ್ಚ ಕಡಿತ ಹಾಗೂ ಇತರ ಕಾರಣಗಳನ್ನು ನೀಡಿ ತನ್ನ ಉದ್ಯೋಗಿಗಳನ್ನು ಸಾಮೂಹಿಕವಾಗಿ ವಜಾಗೊಳಿಸುತ್ತಿರುವುದು ಇತ್ತೀಚೆಗೆ ಹೆಚ್ಚಾಗಿದೆ. ಈ ನಡುವೆ ಭಾರತದಲ್ಲಿ ಐಟಿ ಕ್ಷೇತ್ರದ ಕಂಪನಿಗಳಿಂದ ಗುತ್ತಿಗೆದಾರರ ಮೂಲಕ ನೇಮಕಗೊಂಡ ಸುಮಾರು 60 ಸಾವಿರ ಹೊರಗುತ್ತಿಗೆ ಕಾರ್ಮಿಕರು ಕೆಲಸ ಕಳೆದುಕೊಂಡಿರುವುದಾಗಿ ನೇಮಕಾತಿ ಸಂಸ್ಥೆ ತಿಳಿಸಿದೆ.

ಐಟಿ ವಲಯದಲ್ಲಿ ಹೊರಗುತ್ತಿಗೆ ನೌಕರರ ನೇಮಕವು ಮಾರ್ಚ್‌ ತ್ರೈಮಾಸಿಕದಿಂದ ಶೇ.6 ರಷ್ಟು ಕಡಿತಗೊಂಡಿದೆ. ಇದರಿಂದಾಗಿ ಏಪ್ರಿಲ್‌ ವೇಳೆಗೆ ದೇಶದಲ್ಲಿ ನಿರುದ್ಯೋಗ ದರವು ಶೇ.7.8 ರಿಂದ ಶೇ.8.11ಕ್ಕೆ ಏರಿಕೆಯಾಗಿದೆ ಎಂದು ಭಾರತೀಯ ಆರ್ಥಿಕತೆಯ ಮೇಲ್ವಿಚಾರಣಾ ಕೇಂದ್ರ ತಿಳಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕೀಟನಾಶಕವೇ ರೈತರ ಜೀವಕ್ಕೆ ಕಂಟಕ…? ರಾಜಸ್ಥಾನದಲ್ಲಿ 2 ವರ್ಷದಲ್ಲಿ 535 ರೈತರ ಸಾವು – ಬೆಚ್ಚಿಬೀಳಿಸಿದ ವರದಿ..!

ರಾಜಸ್ಥಾನದಲ್ಲಿ ಕಳೆದ ಎರಡು ವರ್ಷಗಳಲ್ಲಿ ಕೀಟನಾಶಕ ಬಳಕೆಯಿಂದ 535 ರೈತರು ಮೃತಪಟ್ಟಿರುವುದು ಬಹಿರಂಗವಾಗಿದೆ.…

60 minutes ago

ಕೊಟ್ಟಿಯೂರು ದೇವಸ್ಥಾನದಲ್ಲಿ ‘ಬಾವಳಿಕೆಟ್ಟು’ ವಿವಾದ – ಮುಸ್ಲಿಂ ಕುಟುಂಬದ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಆರೋಪ, ನಿಜಾಂಶವೇನು?

ಕೊಟ್ಟಿಯೂರು ದೇವಸ್ಥಾನದಲ್ಲಿ ‘ಬಾವಳಿಕೆಟ್ಟು’ ಆಚರಣೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಹೊಸ ವಿವಾದ ಹುಟ್ಟಿಕೊಂಡಿದೆ.…

3 hours ago

ಹವಾಮಾನ ವರದಿ | 07.06.2026 | ಜೂನ್ 8ರಿಂದ ರಾಜ್ಯದಲ್ಲಿ ಮುಂಗಾರು ಚುರುಕು| ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ, ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ

ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆಗಳು ಜೂ. 8ರಿಂದ ಮತ್ತಷ್ಟು ಚುರುಕುಗೊಳ್ಳುವ ಲಕ್ಷಣಗಳು ಕಂಡುಬಂದಿದ್ದು, ಕರಾವಳಿ…

8 hours ago

“ಜಾಕ್‌ಫ್ರೂಟ್‌ ಹಬ್ಬ”ಕ್ಕೆ ಜನಸಾಗರ – 50 ಕ್ಕೂ ಹೆಚ್ಚು ಹಲಸಿನ ಮೌಲ್ಯವರ್ಧಿತ ಉತ್ಪನ್ನಗಳ ಪ್ರದರ್ಶನ

ಜೋಯಿಡಾದಲ್ಲಿ ನಡೆದ ಹಲಸು ಉತ್ಸವದಲ್ಲಿ 50ಕ್ಕೂ ಹೆಚ್ಚು ಮೌಲ್ಯವರ್ಧಿತ ಹಲಸಿನ ಉತ್ಪನ್ನಗಳು ಪ್ರದರ್ಶನಗೊಂಡು…

23 hours ago

ಕ್ಯಾಂಪ್ಕೋ ಬ್ರಹ್ಮ ವಾರಣಾಶಿ ಸುಬ್ರಾಯ ಭಟ್‌ ಜನ್ಮಶತಮಾನೋತ್ಸವ ವರ್ಷ – ಅಡಿಕೆ ಬೆಳೆಗಾರರ ಬದುಕು ಬದಲಿಸಿದ ಮಹಾನ್ ದಾರ್ಶನಿಕ

ಕ್ಯಾಂಪ್ಕೋ ಸಂಸ್ಥಾಪಕ ವಾರಣಾಶಿ ಸುಬ್ರಾಯ ಭಟ್‌ ಅವರ ಜನ್ಮಕ್ಕೆ 99 ವರ್ಷಗಳು ಪೂರ್ಣಗೊಂಡಿದ್ದು,…

24 hours ago

ಹವಾಮಾನ ವರದಿ | 06-06-2026 | ಮುಂಗಾರು ಬಂದರೂ ಮಳೆ ಇಲ್ಲ! – ಕರ್ನಾಟಕದಲ್ಲಿ ಮುಂದಿನ ವಾರದ ಹವಾಮಾನ ಹೇಗಿರಲಿದೆ?

ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದರೂ ಅದರ ಬಲ ಇನ್ನೂ ದುರ್ಬಲವಾಗಿದೆ. ಕರಾವಳಿಯಲ್ಲಿ ಜೂನ್ 8ರಿಂದ…

1 day ago