ಐಟಿ ಜಗತ್ತು ಕೈ ಬೀಸಿ ಕರೆದಷ್ಟೇ ಬೇಗ ಹೊರಕ್ಕೆ ಕಳುಹಿಸುತ್ತದೆ. ಸಾವಿರಾರು ಕನಸು ಹೊತ್ತು ಕೆಲಸಕ್ಕೆ ಸೇರಿದ ಉದ್ಯೋಗಿಗಳು ಕೆಲವೇ ತಿಂಗಳಲ್ಲಿ ಮನೆಗೆ ವಾಪಾಸ್ ಹಿಂತಿರುಗುವ ಪರಿಸ್ಥಿತಿ ಎಲ್ಲೆಡೆ ಎದುರಾಗುತ್ತಿದೆ. ಎಷ್ಟೇ ಕಲಿತರು ಉದ್ಯೋಗ ಪಕ್ಕಾ ಇಲ್ಲಾ ಅನ್ನೋದು ಮತ್ತೆ ಮತ್ತೆ ಸಾಬೀತಾಗುತ್ತಿದೆ. ಜಗತ್ತಿನೆಲ್ಲೆಡೆ ಎದುರಿಸುತ್ತಿರುವ ಆರ್ಥಿಕ ಹಿಂಜರಿತ ಎಲ್ಲದರ ಮೇಲೆ ನೇರ ಪರಿಣಾಮ ಬೀರುತ್ತಿದೆ.
ಮಾಹಿತಿ ತಂತ್ರಜ್ಞಾನ ಕ್ಷೇತ್ರದ ಕಂಪನಿಗಳಿಂದ ಗುತ್ತಿಗೆದಾರರ ಮೂಲಕ ನೇಮಕಗೊಂಡ ಹೊರಗುತ್ತಿಗೆ ಕಾರ್ಮಿಕರ ಸಂಖ್ಯೆ ಕಳೆದ ವರ್ಷಕ್ಕಿಂತ ಶೇ.7.7 ರಷ್ಟು ಕಡಿತಗೊಂಡಿದ್ದು, ಒಂದೇ ವರ್ಷದಲ್ಲಿ ಸುಮಾರು 60,000 ಮಂದಿ ಕೆಲಸ ಕಳೆದುಕೊಂಡಿದ್ದಾರೆ ಎಂದು ನೇಮಕಾತಿ ಸಂಸ್ಥೆ ತಿಳಿಸಿದೆ. ವಿಶ್ವದಾದ್ಯಂತ ಅನೇಕ ಕಂಪನಿಗಳು ವೆಚ್ಚ ಕಡಿತ ಹಾಗೂ ಇತರ ಕಾರಣಗಳನ್ನು ನೀಡಿ ತನ್ನ ಉದ್ಯೋಗಿಗಳನ್ನು ಸಾಮೂಹಿಕವಾಗಿ ವಜಾಗೊಳಿಸುತ್ತಿರುವುದು ಇತ್ತೀಚೆಗೆ ಹೆಚ್ಚಾಗಿದೆ. ಈ ನಡುವೆ ಭಾರತದಲ್ಲಿ ಐಟಿ ಕ್ಷೇತ್ರದ ಕಂಪನಿಗಳಿಂದ ಗುತ್ತಿಗೆದಾರರ ಮೂಲಕ ನೇಮಕಗೊಂಡ ಸುಮಾರು 60 ಸಾವಿರ ಹೊರಗುತ್ತಿಗೆ ಕಾರ್ಮಿಕರು ಕೆಲಸ ಕಳೆದುಕೊಂಡಿರುವುದಾಗಿ ನೇಮಕಾತಿ ಸಂಸ್ಥೆ ತಿಳಿಸಿದೆ.
ಐಟಿ ವಲಯದಲ್ಲಿ ಹೊರಗುತ್ತಿಗೆ ನೌಕರರ ನೇಮಕವು ಮಾರ್ಚ್ ತ್ರೈಮಾಸಿಕದಿಂದ ಶೇ.6 ರಷ್ಟು ಕಡಿತಗೊಂಡಿದೆ. ಇದರಿಂದಾಗಿ ಏಪ್ರಿಲ್ ವೇಳೆಗೆ ದೇಶದಲ್ಲಿ ನಿರುದ್ಯೋಗ ದರವು ಶೇ.7.8 ರಿಂದ ಶೇ.8.11ಕ್ಕೆ ಏರಿಕೆಯಾಗಿದೆ ಎಂದು ಭಾರತೀಯ ಆರ್ಥಿಕತೆಯ ಮೇಲ್ವಿಚಾರಣಾ ಕೇಂದ್ರ ತಿಳಿಸಿದೆ.
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…