Advertisement
ಸುದ್ದಿಗಳು

ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರಿ ಉದ್ಯೋಗ ಕಡಿತ | ಒಂದೇ ವರ್ಷಕ್ಕೆ 60 ಸಾವಿರ ಉದ್ಯೋಗ ಕಡಿತ |

Share

ಐಟಿ ಜಗತ್ತು ಕೈ ಬೀಸಿ ಕರೆದಷ್ಟೇ ಬೇಗ ಹೊರಕ್ಕೆ ಕಳುಹಿಸುತ್ತದೆ. ಸಾವಿರಾರು ಕನಸು ಹೊತ್ತು ಕೆಲಸಕ್ಕೆ ಸೇರಿದ ಉದ್ಯೋಗಿಗಳು ಕೆಲವೇ ತಿಂಗಳಲ್ಲಿ ಮನೆಗೆ ವಾಪಾಸ್ ಹಿಂತಿರುಗುವ ಪರಿಸ್ಥಿತಿ ಎಲ್ಲೆಡೆ ಎದುರಾಗುತ್ತಿದೆ. ಎಷ್ಟೇ ಕಲಿತರು ಉದ್ಯೋಗ ಪಕ್ಕಾ ಇಲ್ಲಾ ಅನ್ನೋದು ಮತ್ತೆ ಮತ್ತೆ ಸಾಬೀತಾಗುತ್ತಿದೆ. ಜಗತ್ತಿನೆಲ್ಲೆಡೆ ಎದುರಿಸುತ್ತಿರುವ ಆರ್ಥಿಕ ಹಿಂಜರಿತ ಎಲ್ಲದರ ಮೇಲೆ ನೇರ ಪರಿಣಾಮ ಬೀರುತ್ತಿದೆ.

ಮಾಹಿತಿ ತಂತ್ರಜ್ಞಾನ ಕ್ಷೇತ್ರದ  ಕಂಪನಿಗಳಿಂದ ಗುತ್ತಿಗೆದಾರರ ಮೂಲಕ ನೇಮಕಗೊಂಡ ಹೊರಗುತ್ತಿಗೆ ಕಾರ್ಮಿಕರ ಸಂಖ್ಯೆ ಕಳೆದ ವರ್ಷಕ್ಕಿಂತ ಶೇ.7.7 ರಷ್ಟು ಕಡಿತಗೊಂಡಿದ್ದು, ಒಂದೇ ವರ್ಷದಲ್ಲಿ ಸುಮಾರು 60,000 ಮಂದಿ ಕೆಲಸ ಕಳೆದುಕೊಂಡಿದ್ದಾರೆ ಎಂದು ನೇಮಕಾತಿ ಸಂಸ್ಥೆ ತಿಳಿಸಿದೆ. ವಿಶ್ವದಾದ್ಯಂತ ಅನೇಕ ಕಂಪನಿಗಳು ವೆಚ್ಚ ಕಡಿತ ಹಾಗೂ ಇತರ ಕಾರಣಗಳನ್ನು ನೀಡಿ ತನ್ನ ಉದ್ಯೋಗಿಗಳನ್ನು ಸಾಮೂಹಿಕವಾಗಿ ವಜಾಗೊಳಿಸುತ್ತಿರುವುದು ಇತ್ತೀಚೆಗೆ ಹೆಚ್ಚಾಗಿದೆ. ಈ ನಡುವೆ ಭಾರತದಲ್ಲಿ ಐಟಿ ಕ್ಷೇತ್ರದ ಕಂಪನಿಗಳಿಂದ ಗುತ್ತಿಗೆದಾರರ ಮೂಲಕ ನೇಮಕಗೊಂಡ ಸುಮಾರು 60 ಸಾವಿರ ಹೊರಗುತ್ತಿಗೆ ಕಾರ್ಮಿಕರು ಕೆಲಸ ಕಳೆದುಕೊಂಡಿರುವುದಾಗಿ ನೇಮಕಾತಿ ಸಂಸ್ಥೆ ತಿಳಿಸಿದೆ.

ಐಟಿ ವಲಯದಲ್ಲಿ ಹೊರಗುತ್ತಿಗೆ ನೌಕರರ ನೇಮಕವು ಮಾರ್ಚ್‌ ತ್ರೈಮಾಸಿಕದಿಂದ ಶೇ.6 ರಷ್ಟು ಕಡಿತಗೊಂಡಿದೆ. ಇದರಿಂದಾಗಿ ಏಪ್ರಿಲ್‌ ವೇಳೆಗೆ ದೇಶದಲ್ಲಿ ನಿರುದ್ಯೋಗ ದರವು ಶೇ.7.8 ರಿಂದ ಶೇ.8.11ಕ್ಕೆ ಏರಿಕೆಯಾಗಿದೆ ಎಂದು ಭಾರತೀಯ ಆರ್ಥಿಕತೆಯ ಮೇಲ್ವಿಚಾರಣಾ ಕೇಂದ್ರ ತಿಳಿಸಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 17-09-2026 | ಕರ್ನಾಟಕದಲ್ಲಿ ಇಂದಿನಿಂದ ಮಳೆ ಚುರುಕು ಸಾಧ್ಯತೆ

ಸೆ.18ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಚುರುಕಾಗುವ ಸೂಚನೆ ಇದ್ದು, ಸೆ.19ರಿಂದ ಉತ್ತರ…

14 hours ago

ಬರಪೀಡಿತ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿಗೆ 12 ತಿಂಗಳ ವಿಸ್ತರಣೆ

ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…

21 hours ago

25 ಸಾವಿರ ವರ್ಷಗಳ ಹಿಂದೆಯೇ ಅಡಿಕೆ ಬಳಕೆ ? ಪುರಾತನ ಹಲ್ಲುಗಳಲ್ಲಿ ಸಿಕ್ಕಿದ ಸುಳಿವು

ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…

1 day ago

“ಹನುಮಾನ್ ಅಂಶ್‌” ಬಾಕ್ಸ್ ಆಫೀಸ್ ದಾಖಲೆ – 40ನೇ ದಿನವೂ ₹8.25 ಕೋಟಿ – ಪಠಾಣ್‌, ಛಾವಾ, ಉರಿ ದಾಖಲೆ ಮೀರಿಸಿದ ಸಿನಿಮಾ

‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್‌ನಲ್ಲಿ…

1 day ago

ಮುಂಗಾರು ಹಿಂದೆ ಸರಿಯಲು ಸಜ್ಜು – ಸೆ.17ರಿಂದ ಪಶ್ಚಿಮ ರಾಜಸ್ಥಾನದಲ್ಲಿ ಆರಂಭವಾಗುವ ಸಾಧ್ಯತೆ

ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…

2 days ago

ಹವಾಮಾನ ವರದಿ | 16-09-2026 | ಕರಾವಳಿಯಲ್ಲಿ ಸೆಖೆ, ಸಂಜೆ ಅಲ್ಲಲ್ಲಿ ಮಳೆ ನಿರೀಕ್ಷೆ

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…

2 days ago