ಚಾರ್ಮಾಡಿ ಘಾಟ್ ಅರಣ್ಯ ಪ್ರದೇಶದಲ್ಲಿ ಭಾರೀ ಕಾಡ್ಗಿಚ್ಚು | ನೂರಾರು ಎಕರೆ ಅರಣ್ಯ ನಾಶ | ಬೆಂಕಿ ನಂದಿಸಲು ಅರಣ್ಯ ಇಲಾಖೆ ಪ್ರಯತ್ನ |

January 26, 2025
7:35 AM
ಕಳೆದ ಒಂದು ವಾರದಲ್ಲಿ ಚಾರ್ಮಾಡಿ ಘಾಟ್‌ನಲ್ಲಿ ಉಂಟಾದ ಎರಡನೇ  ಕಾಡ್ಗಿಚ್ಚು ಪ್ರಕರಣ ಇದಾಗಿದೆ. ಅರಣ್ಯ ಇಲಾಖೆ ಸಿಬ್ಬಂದಿ, ಅಗ್ನಿಶಾಮಕ ದಳ ಸಿಬಂದಿಗಳು ಬೆಂಕಿ  ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ. (Photo Credit : SF)

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನಲ್ಲಿರುವ  ಚಾರ್ಮಾಡಿ ಘಾಟ್ ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು ಹೊತ್ತಿಕೊಂಡಿದ್ದು. ನೂರಾರು ಎಕ್ರೆ ಅರಣ್ಯದಲ್ಲಿ ಬೆಂಕಿ ಹೊಗೆಯಾಡುತ್ತಿದೆ. ಅರಣ್ಯ ಇಲಾಖೆ ಸಿಬ್ಬಂದಿ ಬೆಂಕಿ  ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಚಾರ್ಮಾಡಿ ಘಾಟ್ ನ ಅಣ್ಣಪ್ಪ ಸ್ವಾಮಿ ದೇಗುಲ ಸಮೀಪದ ಅರಣ್ಯದಲ್ಲಿ ಬೆಂಕಿ ಹೊತ್ತಿಕೊಂಡಿದ್ದು ಸಾಕಷ್ಟು ಪ್ರಮಾಣದ ಅರಣ್ಯ ಭಾಗ  ನಾಶವಾಗಿದೆ.…..ಮುಂದೆ ಓದಿ….

ಕಳೆದ ಒಂದು ವಾರದಲ್ಲಿ ಚಾರ್ಮಾಡಿ ಘಾಟ್‌ನಲ್ಲಿ ಉಂಟಾದ ಎರಡನೇ  ಕಾಡ್ಗಿಚ್ಚು ಪ್ರಕರಣ ಇದಾಗಿದೆ. ಕಳೆದ ವಾರ ಕಾಳ್ಗಿಚ್ಚು ಘಾಟ್‌ನ ಬಿದಿರು ದಟ್ಟವಾದ ಇಳಿಜಾರು ಪ್ರದೇಶದಲ್ಲಿ ವೇಗವಾಗಿ ಬೆಂಕಿ ಹಬ್ಬಿತ್ತು. ಅಗ್ನಿಶಾಮಕ ದಳದವರು ರಸ್ತೆಬದಿಯಲ್ಲಿ ಬೆಂಕಿಯನ್ನು ನಿಯಂತ್ರಿಸುವಲ್ಲಿ ಯಶಸ್ವಿಯಾದರು, ಅವರು ಕಡಿದಾದ ಇಳಿಜಾರುಗಳನ್ನು ತಲುಪಲು ಹರಸಾಹಸಪಟ್ಟರು, ಅಲ್ಲಿ ಬೆಂಕಿ ಹರಡುತ್ತಲೇ ಇತ್ತು. ನಿನ್ನೆಯ ಕಾಡ್ಗಿಚ್ಚು ಹಾನಿಯನ್ನು ತೀವ್ರಗೊಳಿಸಿತು, ನೂರಾರು ಎಕರೆಗಳಿಗೆ ಹಾನಿಯಾಗಿದೆ.10 ಕಿಲೋಮೀಟರ್ ವರೆಗೆ ಬೆಂಕಿ ವ್ಯಾಪಿಸಿದ್ದು, ಪ್ರದೇಶದಲ್ಲಿ ಭೀತಿ ಮೂಡಿಸಿದೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಮೂಡಿಗೆರೆ ವಲಯ ಅರಣ್ಯ ಸಂರಕ್ಷಣಾಧಿಕಾರಿ ಚರಣ್ ಕುಮಾರ್, ಈ ಭಾಗದಲ್ಲಿ ನಿನ್ನೆ ರಾತ್ರಿಯಿಂದ ಹೆಚ್ಚಿನ ಬೆಂಕಿ ಕಾಣಿಸಿಕೊಂಡಿದ್ದು,  ಬೆಂಕಿ ನಂದಿಸುವ ಕಾರ್ಯ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ. ಕಾಡ್ಗಿಚ್ಚಿನಿಂದ ಅರಣ್ಯ ಸಂಪತ್ತಿನ ಜೊತೆಗೆ ವನ್ಯಜೀವಿಗಳು ಸಾವನ್ನಪ್ಪಿರುವ ಸಾಧ್ಯತೆಯಿದೆ ಎಂದು ಹೇಳಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 04-08-2026 | ರಾಜ್ಯದಲ್ಲಿ ಆಗಸ್ಟ್‌ 12 ರವರೆಗೆ ಮಳೆ ಸಾಧ್ಯತೆ – ಮುಂಗಾರು ದುರ್ಬಲವಾಗುವ ಲಕ್ಷಣ
August 4, 2026
2:07 PM
by: ಸಾಯಿಶೇಖರ್ ಕರಿಕಳ
ಗ್ರಾಮೀಣ ಭಾರತದ ಆದಾಯಕ್ಕೆ ಹಿನ್ನಡೆ – ಕಳೆದ ವರ್ಷ ಅರ್ಧದಷ್ಟು ಕುಟುಂಬಗಳ ಆದಾಯದಲ್ಲಿ ಏರಿಕೆಯಾಗಿಲ್ಲ
August 4, 2026
7:45 AM
by: ದ ರೂರಲ್ ಮಿರರ್.ಕಾಂ
ಮುಂದುವರಿದ ಮಳೆ ಅಬ್ಬರ : ಆಗಸ್ಟ್‌ 4ರಂದು ದ ಕ -ಉಡುಪಿ-ಕಾಸರಗೋಡು ಜಿಲ್ಲೆಯ ಕೆಲವು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ
August 3, 2026
10:48 PM
by: ದ ರೂರಲ್ ಮಿರರ್.ಕಾಂ
ಯಡಕುಮೇರಿ ಹಳಿ ದುರಸ್ತಿ ಪೂರ್ಣ : ಮಂಗಳೂರು–ಬೆಂಗಳೂರು ರೈಲು ರೈಲು ಸಂಚಾರ ಪುನರಾರಂಭ
August 3, 2026
10:24 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror