ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನಲ್ಲಿರುವ ಚಾರ್ಮಾಡಿ ಘಾಟ್ ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು ಹೊತ್ತಿಕೊಂಡಿದ್ದು. ನೂರಾರು ಎಕ್ರೆ ಅರಣ್ಯದಲ್ಲಿ ಬೆಂಕಿ ಹೊಗೆಯಾಡುತ್ತಿದೆ. ಅರಣ್ಯ ಇಲಾಖೆ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಚಾರ್ಮಾಡಿ ಘಾಟ್ ನ ಅಣ್ಣಪ್ಪ ಸ್ವಾಮಿ ದೇಗುಲ ಸಮೀಪದ ಅರಣ್ಯದಲ್ಲಿ ಬೆಂಕಿ ಹೊತ್ತಿಕೊಂಡಿದ್ದು ಸಾಕಷ್ಟು ಪ್ರಮಾಣದ ಅರಣ್ಯ ಭಾಗ ನಾಶವಾಗಿದೆ.…..ಮುಂದೆ ಓದಿ….
ಕಳೆದ ಒಂದು ವಾರದಲ್ಲಿ ಚಾರ್ಮಾಡಿ ಘಾಟ್ನಲ್ಲಿ ಉಂಟಾದ ಎರಡನೇ ಕಾಡ್ಗಿಚ್ಚು ಪ್ರಕರಣ ಇದಾಗಿದೆ. ಕಳೆದ ವಾರ ಕಾಳ್ಗಿಚ್ಚು ಘಾಟ್ನ ಬಿದಿರು ದಟ್ಟವಾದ ಇಳಿಜಾರು ಪ್ರದೇಶದಲ್ಲಿ ವೇಗವಾಗಿ ಬೆಂಕಿ ಹಬ್ಬಿತ್ತು. ಅಗ್ನಿಶಾಮಕ ದಳದವರು ರಸ್ತೆಬದಿಯಲ್ಲಿ ಬೆಂಕಿಯನ್ನು ನಿಯಂತ್ರಿಸುವಲ್ಲಿ ಯಶಸ್ವಿಯಾದರು, ಅವರು ಕಡಿದಾದ ಇಳಿಜಾರುಗಳನ್ನು ತಲುಪಲು ಹರಸಾಹಸಪಟ್ಟರು, ಅಲ್ಲಿ ಬೆಂಕಿ ಹರಡುತ್ತಲೇ ಇತ್ತು. ನಿನ್ನೆಯ ಕಾಡ್ಗಿಚ್ಚು ಹಾನಿಯನ್ನು ತೀವ್ರಗೊಳಿಸಿತು, ನೂರಾರು ಎಕರೆಗಳಿಗೆ ಹಾನಿಯಾಗಿದೆ.10 ಕಿಲೋಮೀಟರ್ ವರೆಗೆ ಬೆಂಕಿ ವ್ಯಾಪಿಸಿದ್ದು, ಪ್ರದೇಶದಲ್ಲಿ ಭೀತಿ ಮೂಡಿಸಿದೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಮೂಡಿಗೆರೆ ವಲಯ ಅರಣ್ಯ ಸಂರಕ್ಷಣಾಧಿಕಾರಿ ಚರಣ್ ಕುಮಾರ್, ಈ ಭಾಗದಲ್ಲಿ ನಿನ್ನೆ ರಾತ್ರಿಯಿಂದ ಹೆಚ್ಚಿನ ಬೆಂಕಿ ಕಾಣಿಸಿಕೊಂಡಿದ್ದು, ಬೆಂಕಿ ನಂದಿಸುವ ಕಾರ್ಯ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ. ಕಾಡ್ಗಿಚ್ಚಿನಿಂದ ಅರಣ್ಯ ಸಂಪತ್ತಿನ ಜೊತೆಗೆ ವನ್ಯಜೀವಿಗಳು ಸಾವನ್ನಪ್ಪಿರುವ ಸಾಧ್ಯತೆಯಿದೆ ಎಂದು ಹೇಳಿದ್ದಾರೆ.
ರಾಜ್ಯದ ಹಲವೆಡೆ ಮುಂದಿನ ಎರಡು ದಿನ ಸಂಜೆ ಹಾಗೂ ರಾತ್ರಿ ಗುಡುಗು ಸಹಿತ…
ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಸ್ತೆ, ಗುಡ್ಡ…
ಈಶಾನ್ಯ ಭಾರತದಲ್ಲಿ ಡಿಆರ್ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಮಳೆಯ…
ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…