Advertisement
ಸುದ್ದಿಗಳು

ವಿಷ್ಣುಗುಪ್ತ ವಿಶ್ವವಿದ್ಯಾಪೀಠ | ಮುಂದಿನ ವರ್ಷದಿಂದ ಪದವಿ ಶಿಕ್ಷಣ : ರಾಘವೇಶ್ವರ ಶ್ರೀ

Share

ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಆಶ್ರಯದಲ್ಲಿ ಮುಂದಿನ ಶೈಕ್ಷಣಿಕ ವರ್ಷದಿಂದ ಪದವಿ ಕೋರ್ಸ್‍ಗಳನ್ನು ಆರಂಭಿಸಲಾಗುವುದು ಎಂದು  ಹೊಸನಗರ ಶ್ರೀ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತೀಮಹಾಸ್ವಾಮೀಜಿ ಪ್ರಕಟಿಸಿದರು.

ಅವರು ಗೋಕರ್ಣದ ಅಶೋಕೆಯ ವಿವಿವಿ ಆವರಣದಲ್ಲಿ ಹಮ್ಮಿಕೊಂಡಿರುವ ಚಾತುರ್ಮಾಸ್ಯ ವ್ರತಾಚರಣೆಯ 80ನೇ ದಿನ ಮಂಗಳೂರು ಮಂಡಲದ ಕೋಳ್ಯೂರು, ಕನ್ಯಾನ, ಬಾಯಾರು ಮತ್ತು ಮುಡಿಪು ವಲಯಗಳ ಶಿಷ್ಯರಿಂದ ಶ್ರೀಗುರುಭಿಕ್ಷಾ ಸೇವೆ ಸ್ವೀಕರಿಸಿ ಶ್ರೀಗಳು ಆಶೀರ್ವಚನ ನೀಡಿದರು. ಇಂದಿನ ಶಿಕ್ಷಣ, ಅದರಲ್ಲೂ ಮುಖ್ಯವಾಗಿ ಪದವಿ ಶಿಕ್ಷಣ ಬಹಳಷ್ಟು ಕಲುಷಿತವಾಗಿದ್ದು, ಯುವ ಮನಸ್ಸುಗಳು ಕೆಡುವ ವಾತಾವರಣಕ್ಕೆ ಅವಕಾಶವೇ ಅಧಿಕ. ಈ ಹಿನ್ನೆಲೆಯಲ್ಲಿ ಅತ್ಯುತ್ತಮ ಗುಣಮಟ್ಟದ ಪದವಿ ಶಿಕ್ಷಣ ನೀಡಿ, ಜತೆಗೆ ನಮ್ಮ ಸಂಸ್ಕಾರ, ಸಂಸ್ಕೃತಿ, ಆಹಾರ- ವಿಹಾರ, ಆಚಾರ- ವಿಚಾರಗಳ ಬಗ್ಗೆಯೂ ಅರಿವು ಮೂಡಿಸುವುದು ಇದರ ಉದ್ದೇಶ ಎಂದು ಸ್ಪಷ್ಟಪಡಿಸಿದರು.

ವಿವಿವಿ ಪರಿಕಲ್ಪನೆ ಬಗ್ಗೆ ಇಡೀ ಸಮಾಜದಲ್ಲಿ ಮಾಹಿತಿಯ ಪ್ರಸರಣಕ್ಕೆ ಸ್ವರ್ಣಪಾದುಕೆಗಳ ಸಂಚಾರ ಈ ತಿಂಗಳ 27ರಂದು ಆರಂಭವಾಗಲಿದೆ. ಇಡೀ ಗೋಕರ್ಣ ಮಂಡಲದಾದ್ಯಂತ ಸ್ವರ್ಣಪಾದುಕೆಗಳ ಸಂಚಾರ ನಡೆಯಲಿದ್ದು, ಇದಕ್ಕೆ ಸಮರ್ಪಣೆಯಾಗುವ ಸಂಪೂರ್ಣ ಕಾಣಿಕೆ ವಿವಿವಿಗೆ ಮೀಸಲು. ಈ ಹಿನ್ನೆಲೆಯಲ್ಲಿ ಸ್ವರ್ಣಪಾದುಕೆ ಸಂಚಾರ ಮುಂದಿನ ದಿನಗಳಲ್ಲಿ ವಿವಿವಿಯ ಆಧಾರಸ್ತಂಭ ಎನಿಸಲಿದೆ ಎಂದು ಬಣ್ಣಿಸಿದರು.

ವಿಷ್ಣುಗುಪ್ತ ವಿಶ್ವವಿದ್ಯಾಪೀಠ ಆವರಣದಲ್ಲಿ ಅಪರೂಪದ ಹಾಗೂ ಅಮೂಲ್ಯ ಗ್ರಂಥಗಳನ್ನೊಳಗೊಂಡ ಅಪೂರ್ವ ಗ್ರಂಥಾಲಯ ನಿರ್ಮಾಣವಾಗಲಿದ್ದು, ಮಂಗಳೂರು ಹೋಬಳಿಯ ಶಿಷ್ಯಭಕ್ತರ ಸೇವೆಯಾಗಿ ಇದು ಸಮರ್ಪಣೆಯಾಗಲಿದೆ ಮಾಣಿ ಮಠದಲ್ಲಿ ಈ ಬಾರಿ ನಡೆಯುವ ನವರಾತ್ರಿ ಉತ್ಸವದಲ್ಲಿ ಸಮರ್ಪಣೆಯಾಗುವ ಎಲ್ಲ ಕಾಣಿಕೆ ವಿವಿವಿ ಗ್ರಂಥಾಲಯಕ್ಕೆ ವಿನಿಯೋಗವಾಗಲಿದೆ. ನವರಾತ್ರಿ ಸರಸ್ವತಿಯ ಪೂಜೆ. ಈ ಸಂದರ್ಭದ ಉತ್ಸವ ಕಾಣಿಕೆಯನ್ನು ವಿದ್ಯಾದೇವತೆಯಾದ ಸರಸ್ವತಿಗೆ ಗ್ರಂಥಾಲಯ ನಿರ್ಮಾಣ ರೂಪದಲ್ಲಿ ವಿನಿಯೋಗಿಸಲಾಗುತ್ತದೆ ಎಂದು ವಿವರಿಸಿದರು.

ಶಿಕ್ಷಣವೇ ನಿಜವಾದ ಶಕ್ತಿ. ಮಗುವಿಗೆ ಬಾಲ್ಯದಿಂದಲೇ ಸಂಸ್ಕಾರಯುತ ಶಿಕ್ಷಣ ನೀಡಬೇಕು ಎಂಬ ಮಹದುದ್ದೇಶದಿಂದ ವಿವಿವಿ ತಲೆ ಎತ್ತಿದೆ. ಮುಂದಿನ ಭವ್ಯ ಭವಿಷ್ಯದ ಉದ್ದೇಶದಿಂದ ಸಮಾಜದ ಪ್ರತಿಯೊಂದು ಮಗು ನಮ್ಮ ಗುರುಕುಲ ವ್ಯವಸ್ಥೆಯಲ್ಲೇ ಶಿಕ್ಷಣ ಪಡೆಯುವಂತಾಗಬೇಕು ಎಂದು ಆಶಿಸಿದರು.

ಬದುಕಿಗೆ ಶಿಸ್ತು ಮತ್ತು ಸಂವಿಧಾನ ಬೇಕು. ನಮ್ಮ ಪಾರಂಪರಿಕ ಶಿಕ್ಷಣ ಇವೆರಡನ್ನೂ ನೀಡುತ್ತದೆ. ಸಂಸ್ಕಾರರಹಿತ ಶಿಕ್ಷಣ ಅಪಾಯಕಾರಿ. ನಮ್ಮತನವನ್ನು ನಾವು ಉಳಿಸಿಕೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ನಮ್ಮ ಆತ್ಮಾಭಿಮಾನಕ್ಕೇ ಧಕ್ಕೆ ಉಂಟಾಗಬಹುದು ಎಂದು ಎಚ್ಚರಿಸಿದರು.

ಸಮಾಜ ಸಂಘಟನೆ ಬಲಗೊಳ್ಳಬೇಕು. ಸಮಷ್ಟಿ ಇದ್ದಾಗ ಉತ್ತಮ ಸೇವೆಗೆ ಪ್ರೇರಣೆ ಸಿಗುತ್ತದೆ. ಸಂಘಟನೆಯಿಂದ ನಮ್ಮ ಬದುಕು ಕೂಡಾ ವ್ಯವಸ್ಥಿತವಾಗುತ್ತದೆ. ನಾವು ಮಾಡಿದ ಸೇವೆಗೆ ಪುಣ್ಯ ಹಾಗೂ ನೆಮ್ಮದಿಯ ಪ್ರತಿಫಲ ದೊರಕುತ್ತದೆ. ಆದ್ದರಿಂದ ನಿಸ್ವಾರ್ಥ ಸೇವೆಯ ಮೂಲಕ ಸಮಾಜವನ್ನು ಗೆಲ್ಲಬೇಕು ಎಂದು ಸಲಹೆ ಮಾಡಿದರು.

ಹವ್ಯಕ ಮಹಾಮಂಡಲದ ಗೌರವ ಕಾರ್ಯದರ್ಶಿ ನಾಗರಾಜ ಭಟ್ ಪೆದಮಲೆ, ಪ್ರಧಾನ ಕಾರ್ಯದರ್ಶಿ ಉದಯಶಂಕರ ಭಟ್ ಮಿತ್ತೂರು, ವಿದ್ಯಾರ್ಥಿ ಪ್ರಧಾನ ಈಶ್ವರ ಪ್ರಸಾದ್ ಕನ್ಯಾನ, ಶಿಷ್ಯಮಾಧ್ಯಮ ಪ್ರಧಾನ ಗಣೇಶ್ ಜೋಶಿ ಸಂಕೊಳ್ಳಿ, ಮಂಗಳೂರು ಮಂಡಲ ಅಧ್ಯಕ್ಷ ಉದಯಶಂಕರ ನೀರ್ಪಾಜೆ, ಕಾರ್ಯದರ್ಶಿ ಸರವು ರಮೇಶ್ ಭಟ್, ಮಾತೃಪ್ರಧಾನರಾದ ಮಲ್ಲಿಕಾ ಜಿ.ಭಟ್, ಮುಷ್ಟಿಭಿಕ್ಷೆ ಪ್ರದಾನ ಈಶ್ವರ ಭಟ್ ವಾರಣಾಸಿ, ವಿದ್ಯಾರ್ಥಿ ಪ್ರಧಾನರಾದ ಭಾರ್ಗವಿ ಕುಂದಾಪುರ ವೇದಿಕೆಯಲ್ಲಿದ್ದರು. ಚಾತುರ್ಮಾಸ್ಯ ಸಮಿತಿ ಅಧ್ಯಕ್ಷ ಯುಎಸ್‍ಜಿ ಭಟ್, ವಿವಿವಿ ಲೋಕಸಂಪರ್ಕಾಧಿಕಾರಿ ಜಿ.ಕೆ.ಹೆಗಡೆ ಮತ್ತಿತರರು ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 08-07-2026 | ರಾಜ್ಯದಲ್ಲಿ ಮುಂಗಾರು ಪರಿಸ್ಥಿತಿ ಹೇಗಿದೆ…? ಕರಾವಳಿಯಲ್ಲಿ ಮಳೆ ಕಡಿಮೆಯಾಗುತ್ತಿದೆಯೇ?

ಆಗಸ್ಟ್‌ 8ರಿಂದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯ ಪ್ರಮಾಣ ಇಳಿಕೆಯಾಗುವ ಲಕ್ಷಣಗಳಿವೆ. ಆಗಸ್ಟ್‌…

7 hours ago

ಮ್ಯಾನ್ಮಾರ್‌ನಿಂದ ಭಾರತಕ್ಕೆ ಅಕ್ರಮ ಅಡಿಕೆ ಜಾಲ | ಮೂರು ಹಂತದ ಕಳ್ಳಸಾಗಣೆ ಜಾಲವನ್ನು ಬಯಲಿಗೆಳೆದ ಇಡಿ

ಮ್ಯಾನ್ಮಾರ್‌ನಿಂದ ಭಾರತಕ್ಕೆ ಅಕ್ರಮವಾಗಿ ಅಡಿಕೆ ಸಾಗಿಸುತ್ತಿದ್ದ ಮೂರು ಹಂತದ ಜಾಲವನ್ನು ಇಡಿ ತನಿಖೆಯಲ್ಲಿ…

11 hours ago

‘ಅನ್ನಂ ಬ್ರಹ್ಮ’ ಭಾವದಿಂದ ಆಹಾರ ಸೇವಿಸಿದರೆ ಮುಕ್ತಿಯ ಸಾಧನ – ರಾಘವೇಶ್ವರ ಶ್ರೀ

ಗೋಕರ್ಣದಲ್ಲಿ ನಡೆದ 'ಅನ್ನಂ ಬ್ರಹ್ಮ' ಪ್ರವಚನದಲ್ಲಿ ರಾಘವೇಶ್ವರ ಭಾರತೀ ಶ್ರೀಗಳು ಭೋಜನವೇ ಅದ್ವೈತ…

19 hours ago

ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆ ತಾತ್ಕಾಲಿಕ ಮುಂದೂಡಿಕೆ | ಪ್ರತಿಭಟನಾನಿರತ ವಿದ್ಯಾರ್ಥಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಭರವಸೆ

ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಪ್ರತಿಭಟನಾನಿರತ ಕೃಷಿ ವಿದ್ಯಾರ್ಥಿಗಳಿಗೆ ಸರ್ಕಾರ…

21 hours ago

ಬರ್ಮಾ ಅಡಿಕೆ ಕಳ್ಳಸಾಗಣೆ ವಿರುದ್ಧ ಇಡಿ ಬಿಗಿ ಕ್ರಮ – ಇಬ್ಬರು ಉದ್ಯಮಿಗಳ ಮನೆಗಳ ಮೇಲೆ ದಾಳಿ

ಬರ್ಮಾ ಅಡಿಕೆ ಕಳ್ಳಸಾಗಣೆ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಇಡಿ ಸಿಲ್ಚಾರ್‌ನ…

22 hours ago