Opinion

ದೇವರ ಮನೆ ಮತ್ತು ಪೂಜೆಯ ವಿಷಯಗಳು | ಪೂಜೆ ಹಾಗೂ ದೇವರ ಮನೆ ಹೇಗೆ ಇರಿಸಿಕೊಳ್ಳಬೇಕು..?

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಮನೆಯಲ್ಲಿನ ಪೂಜಾ ಸ್ಥಳದಲ್ಲಿ(Puja Room) ಮಾನಸಿಕ ಶಾಂತಿಯನ್ನು(Mental piece) ಕೊಡುತ್ತವೆ. ಇಂತಹ ಪೂಜಾ ಸ್ಥಳಗಳನ್ನು ಸ್ವಚ್ಚವಾಗಿ ಇಟ್ಟುಕೊಳ್ಳಬೇಕು. ಅಶುಚಿ(Unclean) ಅಥವಾ ಪೂಜಾ ವಿಧಿ ವಿಧಾನಗಳಲ್ಲಿ ತಪ್ಪು ಮಾಡಿದಲ್ಲಿ ಮನೆಯ ನೆಮ್ಮದಿ ಕೆಡುವ ಸಾಧ್ಯತೆ ಇದೆ. ಈ ಹಿನ್ನೆಲೆ ಪೂಜಾ ಸ್ಥಳಗಳು ಹಾಗೂ ನಾವು ಮಾಡುವ ಪೂಜೆ ಭಕ್ತಿ ಪೂರ್ವಕವಾಗಿರಬೇಕು. ಜೊತೆಗೆ ದೇವರ ವಿಗ್ರಹಗಳ(God Idol) ಪ್ರತಿಷ್ಠಾಪನೆ ವೇಳೆ ಕೆಲವು ನಿಯಮ ಅನುಸರಿಸುವುದು ಅವಶ್ಯ.

Advertisement
Advertisement

1, ದೇವರ ಮನೆ, ದೀಪಗಳು , ದೇವರ ಪೂಜಾ ಸಾಮಗ್ರಿಗಳು ಎಷ್ಟು ಶುದ್ಧವಾಗಿರುತ್ತದೋ ಅಷ್ಟೂ ಶುಭಫಲವಿರುತ್ತದೆ.
2, ದೇವರ ಮನೆಯಲ್ಲಿ ಒಡೆದಿರುವ, ಭಿನ್ನವಾಗಿರುವ, ವಿಗ್ರಹಗಳು, ಫೋಟೋಗಳು, ಯಂತ್ರಗಳು ಇಡಬೇಡಿ,
3, ದೇವರ ಮನೆಯಲ್ಲಿ ಗುಡಿಸೋ ಕಸವನ್ನು ಒಂದು ಬಟ್ಟೆಯಿಂದ ಗುಡಿಸಿದರೆ ತುಂಬಾ ಒಳ್ಳೆಯದು.
4, ದೇವರ ಮನೆಯನ್ನು ಅರಿಸಿನ ಹಾಕಿದ ನೀರಿನಿಂದ ಶುದ್ಧ ಮಾಡಿ, ಆ ಮನೆಯಲ್ಲಿ ದೈವಕಳೆ ವೃದ್ಧಿಸಿ, ಹಣದ ಸಮಸ್ಯೆ ನಿವಾರಣೆಯಾಗುತ್ತದೆ, ನೆಲ ಒಣಗುವವರೆಗೂ ತುಳಿಯುವ ಹಾಗಿಲ್ಲ,
5, ದೇವರ ಮನೆಯಲ್ಲಿ ತುಂಬಾ ವಿಗ್ರಹಗಳು ಬೇಡ, ವಿಗ್ರಹಗಳು ಜಾಸ್ತಿಯಾದರೆ “ನೈವೇದ್ಯ “ದ ಪ್ರಮಾಣವೂ ಜಾಸ್ತಿ ಮಾಡಬೇಕಾಗುವುದು.

6, ತುಂಬಾ ಎತ್ತರದ ವಿಗ್ರಹಗಳು ಬೇಡ, ಅಕಸ್ಮಾತ್ತಾಗಿ ಇದ್ದರೆ ಪ್ರತಿದಿನ ಒಂದು ಸೇರು ಅಕ್ಕಿಯ ಅನ್ನವನ್ನಾದರೂ ನೈವೇದ್ಯ ಮಾಡಬೇಕಾಗುವುದು,
7, ದೇವರ ವಿಗ್ರಹಗಳನ್ನು ಮಂಗಳವಾರ, ಶನಿವಾರ , ಶುಕ್ರವಾರದಂದು ಶುದ್ಧಿ ಮಾಡುವುದು ಬೇಡ.
{ಅನಿವಾರ್ಯ ಪರಿಸ್ಥತಿಗಳಲ್ಲಿ, ಗ್ರಹಣ ಕಾಲದಲ್ಲಿ, ಇತ್ಯಾದಿ ಸಮಯದಲ್ಲಿ ಮಾಡಬಹುದು}
8, ಪ್ರತೀ ಅಮಾವಾಸ್ಯೆ ಮತ್ತು ಪೌರ್ಣಾಮಿಯ ಮರುದಿನ ದೇವರ ವಿಗ್ರಹಗಳನ್ನು “ಅರಿಸಿನದ ನೀರಿನಿಂದ ಶುದ್ಧ ಮಾಡಿ,
9, ದೇವರ ಪೂಜೆಗೆ “ಆಂಜನೇಯ” ಸ್ವಾಮಿ ಇರೋ ಘಂಟೆಯನ್ನೇ ಉಪಯೋಗಿಸಿ, ಆಂಜನೇಯ ದೇವರ ಪಾದವನ್ನು ಹಿಡಿದು ಘಂಟೆಬಾರಿಸಬೇಕು,
10, ದೇವರುಗಳು ಯಾವಾಗಲೂ ಆಹಾರ ಕೇಳುತ್ತಿರುತ್ತವೆ , ದೇವರ ಹತ್ತಿರ ಮಧುಪರ್ಕ ಇರಿಸಿರಿ, ರಾತ್ರಿ ಮಲಗೋಕೆ ಮುಂಚೆ ಅದನ್ನು ಮನೆಯವರೆಲ್ಲಾ ಅಥವಾ ಹಿರಿಯರಾಗಲೀ ಭಕ್ತಿಯಿಂದ ಸೇವಿಸಿ.

11, ದೇವರ ಪೂಜೆ ಮಾಡೋವಾಗ ಆಕಳಿಕೆ ,ಕೋಪ ಇವೆಲ್ಲದರಿಂದ ದೂರ ಇರಿ, ಅನಗತ್ಯ ಚಟುವಟಿಕೆಗಳು ಬೇಡ,
12, ಸಂಧ್ಯಾವಂದನೆ ಮತ್ತು ಸ್ತ್ರೀಯರ ತುಳಸೀ ಪೂಜೆ ಇಲ್ಲದಿದ್ದರೆ ಯಾವ ಪೂಜೆಯೂ ಫಲ ಕೊಡುವುದಿಲ್ಲ,
13, ದೇವರ ಪೂಜೆಯ ಸಮಯದಲ್ಲಿ ಪುರುಷರು ಮೇಲುಹೊದಿಕೆ ಅಂದರೆ ಶಲ್ಯವನ್ನು ಧರಿಸಿರಲೇಬೇಕು.
ಇಲ್ಲದಿದ್ದರೆ ಪೂಜಾ ಫಲ ರಾಕ್ಷಸರ ಪಾಲಾಗುವುದು. ಬರೀ ಮೈಯಲ್ಲಿ ಕುಳಿತು ಪೂಜೆ ಮಾಡುವುದು, ಊಟ ಮಾಡುವುದು ಒಳಿತಲ್ಲ.
14, ಹಣೆಯಲ್ಲಿ ಕುಂಕುಮ, ಗಂಧ, ಅಥವಾ ಭಸ್ಮ .ಇತ್ಯಾದಿ ಯಾವುದಾದಾರೂ ಧರಿಸದೇ ಪೂಜೆ ಮಾಡಬಾರದು. ಧರಿಸಿಯೇ ಪೂಜೆ ಮಾಡಬೇಕು, ಇಲ್ಲದಿದ್ದರೆ ಪೂಜಾಫಲ ನಶಿಸುವುದು,
15, ದೇವರ ಪೂಜೆಗೆ “ಹಸಿಯಾದ ಹಾಲನ್ನು ಮಾತ್ರ ಬಳಸಿ,

16, ದೇವರ ನೈವೇದ್ಯ ಮಾಡೋವಾಗ ವೀಳ್ಯದೆಲೆ, ಅಡಿಕೆ ತಾಂಬೂಲ ಇಲ್ಲದ ನೈವೇದ್ಯ ಫಲ ಕೊಡುವುದಿಲ್ಲ.. ನೈವೇದ್ಯ ಮಾಡೋವಾಗ “ತುಳಸೀಪತ್ರೆಯನ್ನು” ಬಳಸಬೇಕು,

Advertisement

17, ದೇವರ ಪೂಜೆಗಳು ಸಂಕಲ್ಪ ಇಲ್ಲದೇ ಮಾಡಬೇಡಿ, ಸಂಕಲ್ಪ ಇದ್ದರೆ ನಿಮ್ಮ ಪ್ರಾರ್ಥನೆಗಳು ಬೇಗ ಈಡೇರುತ್ತವೆ,

18, ದೇವರ ಮನೆಯಲ್ಲಿ ಚಿಕ್ಕದೀಪಗಳನ್ನು ಜೋಡಿಸಿ ಇಡಿ, ದೊಡ್ಡ ದೀಪಗಳಾಗಿದ್ದರೆ ಎಡಗಡೆ ಬಲಗಡೆ ಇಡಿ,

19, ಗಣಪತಿ ಪೂಜೆ, ಮನೆದೇವರ ಪೂಜೆ, ದೇವಿ ಪೂಜೆಯಿಂದ ಮಾತ್ರ ಪೂರ್ಣ ಪೂಜಾಫಲ ದೊರೆಯವುದು..

ದೇವಿಯು ಎಲ್ಲಾ ದೇವರುಗಳ ತಾಯಿಯಾದ್ದರಿಂದ ಅಮ್ಮನವರನ್ನು ಪೂಜಿಸಿದರೇ ಮನೆಗೆ, ನಮಗೆ ರಕ್ಷಣೆ.. ಮನೆದೇವರ ಪೂಜೆ ಇಲ್ಲದಿದ್ದರೆ ಯಾವ ದೇವರಗಳೂ ನಿಮ್ಮ ಮನೆಯನ್ನು ರಕ್ಷಿಸುವುದಿಲ್ಲ, ಎಂಥಾ ಕಷ್ಟಬಂದರೂ ನಮ್ಮ ಮನೆಯನ್ನು ನಮ್ಮನ್ನು ರಕ್ಷಿಸುವುದು “ಮನೆದೇವರೇ,”

20, ಮನೆಯ ಹೊಸ್ತಿಲನ್ನು ಪೊರಕೆಯಿಂದ ಗುಡಿಸಬೇಡಿ, ಹೊಸ್ತಿಲಲ್ಲಿ “ಮಹಾಲಕ್ಷ್ಮೀ” ಸಾನಿಧ್ಯ ಇರುತ್ತದೆ,

Advertisement

21, “ಶ್ರೀ ಚಕ್ರ” , ಬಲಮುರಿ ಶಂಖ, ಬಲಮುರಿ ಗಣೇಶ, ಸಾಲಿಗ್ರಾಮಗಳು, ಎರಡೂ ಪಾದ ಕಾಣಿಸೋ ಮಹಾಲಕ್ಷ್ಮೀ ಇತ್ಯಾದಿ ಈ ದೇವರುಗಳೆಲ್ಲಾ “ಅಷ್ಟೈಶ್ವರ್ಯಗಳನ್ನು ಪ್ರಧಾನಿಸೋ ದೇವರುಗಳು, ಈ ದೇವರುಗಳ ಪೂಜೆ ತುಂಬಾ ವಿಶೇಷವಾಗಿರುತ್ತದೆ,

ಬರಹ :
ವಿವೇಕಾನಂದ ಆಚಾರ್ಯ
,   (Army Rtd) Gubbi. ಪ್ರಾಚೀನಶಾಸ್ತ್ರಾಸಕ್ತ
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹೊಸರುಚಿ | ನೆಕ್ಕರೆ ಮಾವಿನ ಕಾಯಿ ಪಲ್ಯ

ನೆಕ್ಕರೆ ಮಾವಿನ ಕಾಯಿ ಪಲ್ಯ ಮಾಡುವ ವಿಧಾನ..

54 minutes ago

ಜೂನ್ ಮೂರನೇ ವಾರ ಗುರು ಆದಿತ್ಯ ರಾಜಯೋಗ, ಈ 5 ರಾಶಿಗೆ ಅದೃಷ್ಟವೋ ಅದೃಷ್ಟ.!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತಾರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

2 hours ago

ಮುಂದುವರಿದ ಮಳೆಯಬ್ಬರ | 4 ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಣೆ |

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.  ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ…

10 hours ago

ಹವಾಮಾನ ವರದಿ | 15.06.2025 | ಜೂನ್.18ರಿಂದ ಮಳೆ ಪ್ರಮಾಣ ಕಡಿಮೆ ನಿರೀಕ್ಷೆ| ವಾಯುಭಾರ ಕುಸಿತ -ಮುಂಗಾರು ದುರ್ಬಲ ಸಾಧ್ಯತೆ

16.06.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…

20 hours ago

ವಿದೇಶದಿಂದ ಹಳ್ಳಿಗೆ ಬಂದು ಕೃಷಿ ಸಾಧನೆ ಮಾಡಿದ ಯುವಕ

ಕೃಷಿಯನ್ನು ನಂಬಿ ಕೆಲಸ ಮಾಡಿದರೆ ಯಶಸ್ಸು ಕಾಣಬಹುದು ಎಂಬುದನ್ನು ರೈತ  ಯೋಗೇಶ್ ತೋರಿಸಿಕೊಟ್ಟಿದ್ದಾರೆ.…

22 hours ago

ಬದುಕು ಪುರಾಣ | ‘ಅವನೇನು.. ಹರಿಶ್ಚಂದ್ರನೋ!’

ನುಡಿದಂತೆ ನಡೆದಾತ ‘ರಾಜಾ ಹರಿಶ್ಚಂದ್ರ’. ಸತ್ಯಕ್ಕಾಗಿ ಸರ್ವಸ್ವವನ್ನೂ ತ್ಯಾಗ ಮಾಡಿದ ತ್ಯಾಗಿ. ಅನೃತವನ್ನಾಡದೆ…

1 day ago