Advertisement
Opinion

ದೇವರ ಮನೆ ಮತ್ತು ಪೂಜೆಯ ವಿಷಯಗಳು | ಪೂಜೆ ಹಾಗೂ ದೇವರ ಮನೆ ಹೇಗೆ ಇರಿಸಿಕೊಳ್ಳಬೇಕು..?

Share

ಮನೆಯಲ್ಲಿನ ಪೂಜಾ ಸ್ಥಳದಲ್ಲಿ(Puja Room) ಮಾನಸಿಕ ಶಾಂತಿಯನ್ನು(Mental piece) ಕೊಡುತ್ತವೆ. ಇಂತಹ ಪೂಜಾ ಸ್ಥಳಗಳನ್ನು ಸ್ವಚ್ಚವಾಗಿ ಇಟ್ಟುಕೊಳ್ಳಬೇಕು. ಅಶುಚಿ(Unclean) ಅಥವಾ ಪೂಜಾ ವಿಧಿ ವಿಧಾನಗಳಲ್ಲಿ ತಪ್ಪು ಮಾಡಿದಲ್ಲಿ ಮನೆಯ ನೆಮ್ಮದಿ ಕೆಡುವ ಸಾಧ್ಯತೆ ಇದೆ. ಈ ಹಿನ್ನೆಲೆ ಪೂಜಾ ಸ್ಥಳಗಳು ಹಾಗೂ ನಾವು ಮಾಡುವ ಪೂಜೆ ಭಕ್ತಿ ಪೂರ್ವಕವಾಗಿರಬೇಕು. ಜೊತೆಗೆ ದೇವರ ವಿಗ್ರಹಗಳ(God Idol) ಪ್ರತಿಷ್ಠಾಪನೆ ವೇಳೆ ಕೆಲವು ನಿಯಮ ಅನುಸರಿಸುವುದು ಅವಶ್ಯ.

1, ದೇವರ ಮನೆ, ದೀಪಗಳು , ದೇವರ ಪೂಜಾ ಸಾಮಗ್ರಿಗಳು ಎಷ್ಟು ಶುದ್ಧವಾಗಿರುತ್ತದೋ ಅಷ್ಟೂ ಶುಭಫಲವಿರುತ್ತದೆ.
2, ದೇವರ ಮನೆಯಲ್ಲಿ ಒಡೆದಿರುವ, ಭಿನ್ನವಾಗಿರುವ, ವಿಗ್ರಹಗಳು, ಫೋಟೋಗಳು, ಯಂತ್ರಗಳು ಇಡಬೇಡಿ,
3, ದೇವರ ಮನೆಯಲ್ಲಿ ಗುಡಿಸೋ ಕಸವನ್ನು ಒಂದು ಬಟ್ಟೆಯಿಂದ ಗುಡಿಸಿದರೆ ತುಂಬಾ ಒಳ್ಳೆಯದು.
4, ದೇವರ ಮನೆಯನ್ನು ಅರಿಸಿನ ಹಾಕಿದ ನೀರಿನಿಂದ ಶುದ್ಧ ಮಾಡಿ, ಆ ಮನೆಯಲ್ಲಿ ದೈವಕಳೆ ವೃದ್ಧಿಸಿ, ಹಣದ ಸಮಸ್ಯೆ ನಿವಾರಣೆಯಾಗುತ್ತದೆ, ನೆಲ ಒಣಗುವವರೆಗೂ ತುಳಿಯುವ ಹಾಗಿಲ್ಲ,
5, ದೇವರ ಮನೆಯಲ್ಲಿ ತುಂಬಾ ವಿಗ್ರಹಗಳು ಬೇಡ, ವಿಗ್ರಹಗಳು ಜಾಸ್ತಿಯಾದರೆ “ನೈವೇದ್ಯ “ದ ಪ್ರಮಾಣವೂ ಜಾಸ್ತಿ ಮಾಡಬೇಕಾಗುವುದು.

6, ತುಂಬಾ ಎತ್ತರದ ವಿಗ್ರಹಗಳು ಬೇಡ, ಅಕಸ್ಮಾತ್ತಾಗಿ ಇದ್ದರೆ ಪ್ರತಿದಿನ ಒಂದು ಸೇರು ಅಕ್ಕಿಯ ಅನ್ನವನ್ನಾದರೂ ನೈವೇದ್ಯ ಮಾಡಬೇಕಾಗುವುದು,
7, ದೇವರ ವಿಗ್ರಹಗಳನ್ನು ಮಂಗಳವಾರ, ಶನಿವಾರ , ಶುಕ್ರವಾರದಂದು ಶುದ್ಧಿ ಮಾಡುವುದು ಬೇಡ.
{ಅನಿವಾರ್ಯ ಪರಿಸ್ಥತಿಗಳಲ್ಲಿ, ಗ್ರಹಣ ಕಾಲದಲ್ಲಿ, ಇತ್ಯಾದಿ ಸಮಯದಲ್ಲಿ ಮಾಡಬಹುದು}
8, ಪ್ರತೀ ಅಮಾವಾಸ್ಯೆ ಮತ್ತು ಪೌರ್ಣಾಮಿಯ ಮರುದಿನ ದೇವರ ವಿಗ್ರಹಗಳನ್ನು “ಅರಿಸಿನದ ನೀರಿನಿಂದ ಶುದ್ಧ ಮಾಡಿ,
9, ದೇವರ ಪೂಜೆಗೆ “ಆಂಜನೇಯ” ಸ್ವಾಮಿ ಇರೋ ಘಂಟೆಯನ್ನೇ ಉಪಯೋಗಿಸಿ, ಆಂಜನೇಯ ದೇವರ ಪಾದವನ್ನು ಹಿಡಿದು ಘಂಟೆಬಾರಿಸಬೇಕು,
10, ದೇವರುಗಳು ಯಾವಾಗಲೂ ಆಹಾರ ಕೇಳುತ್ತಿರುತ್ತವೆ , ದೇವರ ಹತ್ತಿರ ಮಧುಪರ್ಕ ಇರಿಸಿರಿ, ರಾತ್ರಿ ಮಲಗೋಕೆ ಮುಂಚೆ ಅದನ್ನು ಮನೆಯವರೆಲ್ಲಾ ಅಥವಾ ಹಿರಿಯರಾಗಲೀ ಭಕ್ತಿಯಿಂದ ಸೇವಿಸಿ.

11, ದೇವರ ಪೂಜೆ ಮಾಡೋವಾಗ ಆಕಳಿಕೆ ,ಕೋಪ ಇವೆಲ್ಲದರಿಂದ ದೂರ ಇರಿ, ಅನಗತ್ಯ ಚಟುವಟಿಕೆಗಳು ಬೇಡ,
12, ಸಂಧ್ಯಾವಂದನೆ ಮತ್ತು ಸ್ತ್ರೀಯರ ತುಳಸೀ ಪೂಜೆ ಇಲ್ಲದಿದ್ದರೆ ಯಾವ ಪೂಜೆಯೂ ಫಲ ಕೊಡುವುದಿಲ್ಲ,
13, ದೇವರ ಪೂಜೆಯ ಸಮಯದಲ್ಲಿ ಪುರುಷರು ಮೇಲುಹೊದಿಕೆ ಅಂದರೆ ಶಲ್ಯವನ್ನು ಧರಿಸಿರಲೇಬೇಕು.
ಇಲ್ಲದಿದ್ದರೆ ಪೂಜಾ ಫಲ ರಾಕ್ಷಸರ ಪಾಲಾಗುವುದು. ಬರೀ ಮೈಯಲ್ಲಿ ಕುಳಿತು ಪೂಜೆ ಮಾಡುವುದು, ಊಟ ಮಾಡುವುದು ಒಳಿತಲ್ಲ.
14, ಹಣೆಯಲ್ಲಿ ಕುಂಕುಮ, ಗಂಧ, ಅಥವಾ ಭಸ್ಮ .ಇತ್ಯಾದಿ ಯಾವುದಾದಾರೂ ಧರಿಸದೇ ಪೂಜೆ ಮಾಡಬಾರದು. ಧರಿಸಿಯೇ ಪೂಜೆ ಮಾಡಬೇಕು, ಇಲ್ಲದಿದ್ದರೆ ಪೂಜಾಫಲ ನಶಿಸುವುದು,
15, ದೇವರ ಪೂಜೆಗೆ “ಹಸಿಯಾದ ಹಾಲನ್ನು ಮಾತ್ರ ಬಳಸಿ,

16, ದೇವರ ನೈವೇದ್ಯ ಮಾಡೋವಾಗ ವೀಳ್ಯದೆಲೆ, ಅಡಿಕೆ ತಾಂಬೂಲ ಇಲ್ಲದ ನೈವೇದ್ಯ ಫಲ ಕೊಡುವುದಿಲ್ಲ.. ನೈವೇದ್ಯ ಮಾಡೋವಾಗ “ತುಳಸೀಪತ್ರೆಯನ್ನು” ಬಳಸಬೇಕು,

Advertisement

17, ದೇವರ ಪೂಜೆಗಳು ಸಂಕಲ್ಪ ಇಲ್ಲದೇ ಮಾಡಬೇಡಿ, ಸಂಕಲ್ಪ ಇದ್ದರೆ ನಿಮ್ಮ ಪ್ರಾರ್ಥನೆಗಳು ಬೇಗ ಈಡೇರುತ್ತವೆ,

18, ದೇವರ ಮನೆಯಲ್ಲಿ ಚಿಕ್ಕದೀಪಗಳನ್ನು ಜೋಡಿಸಿ ಇಡಿ, ದೊಡ್ಡ ದೀಪಗಳಾಗಿದ್ದರೆ ಎಡಗಡೆ ಬಲಗಡೆ ಇಡಿ,

19, ಗಣಪತಿ ಪೂಜೆ, ಮನೆದೇವರ ಪೂಜೆ, ದೇವಿ ಪೂಜೆಯಿಂದ ಮಾತ್ರ ಪೂರ್ಣ ಪೂಜಾಫಲ ದೊರೆಯವುದು..

ದೇವಿಯು ಎಲ್ಲಾ ದೇವರುಗಳ ತಾಯಿಯಾದ್ದರಿಂದ ಅಮ್ಮನವರನ್ನು ಪೂಜಿಸಿದರೇ ಮನೆಗೆ, ನಮಗೆ ರಕ್ಷಣೆ.. ಮನೆದೇವರ ಪೂಜೆ ಇಲ್ಲದಿದ್ದರೆ ಯಾವ ದೇವರಗಳೂ ನಿಮ್ಮ ಮನೆಯನ್ನು ರಕ್ಷಿಸುವುದಿಲ್ಲ, ಎಂಥಾ ಕಷ್ಟಬಂದರೂ ನಮ್ಮ ಮನೆಯನ್ನು ನಮ್ಮನ್ನು ರಕ್ಷಿಸುವುದು “ಮನೆದೇವರೇ,”

20, ಮನೆಯ ಹೊಸ್ತಿಲನ್ನು ಪೊರಕೆಯಿಂದ ಗುಡಿಸಬೇಡಿ, ಹೊಸ್ತಿಲಲ್ಲಿ “ಮಹಾಲಕ್ಷ್ಮೀ” ಸಾನಿಧ್ಯ ಇರುತ್ತದೆ,

Advertisement

21, “ಶ್ರೀ ಚಕ್ರ” , ಬಲಮುರಿ ಶಂಖ, ಬಲಮುರಿ ಗಣೇಶ, ಸಾಲಿಗ್ರಾಮಗಳು, ಎರಡೂ ಪಾದ ಕಾಣಿಸೋ ಮಹಾಲಕ್ಷ್ಮೀ ಇತ್ಯಾದಿ ಈ ದೇವರುಗಳೆಲ್ಲಾ “ಅಷ್ಟೈಶ್ವರ್ಯಗಳನ್ನು ಪ್ರಧಾನಿಸೋ ದೇವರುಗಳು, ಈ ದೇವರುಗಳ ಪೂಜೆ ತುಂಬಾ ವಿಶೇಷವಾಗಿರುತ್ತದೆ,

ಬರಹ :
ವಿವೇಕಾನಂದ ಆಚಾರ್ಯ
,   (Army Rtd) Gubbi. ಪ್ರಾಚೀನಶಾಸ್ತ್ರಾಸಕ್ತ
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡಿಕೆ ತೋಟಗಳಿಗೆ ಸವಾಲಾಗಿರುವ ಎಲೆಚುಕ್ಕಿ ರೋಗ – ವಿಜ್ಞಾನ ಏನು ಹೇಳುತ್ತದೆ?

ಅಡಿಕೆ ಎಲೆಚುಕ್ಕಿ ರೋಗ ವ್ಯಾಪಕವಾಗಿದೆ. ಮಲೆನಾಡು ತಪ್ಪಲು ಭಾಗಗಳಲ್ಲಿ ಅಡಿಕೆ ಎಲೆಚುಕ್ಕಿ ರೋಗ…

12 hours ago

ಕಿಸಾನ್ ಪಾಠಶಾಲೆ ಮೂಲಕ 20 ಲಕ್ಷ ರೈತರಿಗೆ ಆಧುನಿಕ ಕೃಷಿ ತರಬೇತಿ

ಉತ್ತರ ಪ್ರದೇಶ ಸರ್ಕಾರವು ಕಿಸಾನ್ ಪಾಠಶಾಲೆ ಕಾರ್ಯಕ್ರಮದ ಮೂಲಕ 2025–26 ಹಂಗಾಮಿನಲ್ಲಿ 20.15…

21 hours ago

ಕೀಟನಾಶಕ ಕಾಯ್ದೆಯಲ್ಲಿ ಮಹತ್ವದ ಬದಲಾವಣೆ | ಕೇಂದ್ರ ಸರ್ಕಾರದಿಂದ ಹೊಸ ಕರಡು ಮಸೂದೆ

ಕರಡು ಪೆಸ್ಟಿಸೈಡ್ಸ್ ಮ್ಯಾನೇಜ್ಮೆಂಟ್ ಬಿಲ್–2025 ಕುರಿತು ಸಾರ್ವಜನಿಕ ಅಭಿಪ್ರಾಯಕ್ಕೆ ಕೇಂದ್ರ ಆಹ್ವಾನ ಮಾಡಿದೆ.…

21 hours ago

ಕುರಿ ಸಾಕಾಣಿಕ ಘಟಕ ಸ್ಥಾಪನೆಗೆ ಸಹಾಯಧನ

ಕುರಿಸಾಕಾಣಿಕೆ ಅದೇಷ್ಟೋ ಯುವಕರು ತಮ್ಮ ಸ್ವಂತ ಉದ್ಯಮವಾಗಿ ಆಯ್ಕೆ ಮಾಡಿಕೊಂಡಿದ್ದಾರೆ. ಇದರಿಂದ ಹೆಚ್ಚು…

22 hours ago

ವೃತ್ತಿಯಲ್ಲಿ ಇಂಗ್ಲಿಷ್ ಪ್ರೊಫೆಸರ್- ಕೃಷಿಕನಾಗಿಯೂ ಯಶಸ್ಸು…!

ಯಾವುದೇ ವೃತ್ತಿಯಲ್ಲಿದ್ದರೂ ಕೃಷಿಯನ್ನು ಬಿಡಬಾರದು ಎಂಬ ಹಠದಿಂದ ಜೀವನದಲ್ಲಿ ಯಶಸ್ಸು ಕಂಡವರಲ್ಲಿ ಅಮರಾವತಿ…

22 hours ago

ಯಶಸ್ವಿನಿ ಕಾರ್ಡ್ ಅರ್ಜಿ ಪ್ರಾರಂಭ

ಆರ್ಥಿಕವಾಗಿ ದುರ್ಬಲ ಹೊಂದಿರುವ ಕುಟುಂಬದ ಸದಸ್ಯರಿಗೆ ಆರೋಗ್ಯದಲ್ಲಿ ಏರುಪೇರು ಉಂಟಾದದ ದೊಡ್ಡ ಮಟ್ಟದ…

22 hours ago