MIRROR FOCUS

ರಾಜ್ಯದಲ್ಲಿ ಏರುಗತಿಯಲ್ಲಿ ಸಾಗುತ್ತಿದೆ ತಾಪಮಾನ | ಹಲವೆಡೆ ಗರಿಷ್ಠ ಉಷ್ಣಾಂಶ ದಾಖಲು | ಕೆಲವು ಕಡೆ ಮಳೆಯ ಸಾಧ್ಯತೆಯೂ ಇದೆ ಎಂದ ಹವಾಮಾನ ಇಲಾಖೆ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ದಿನದಿಂದ ದಿನಕ್ಕೆ ರಾಜ್ಯದ(State) ಬಿಸಿಲ ತಾಪಮಾನ (Temperature) ಏರು ಗತಿಯಲ್ಲಿ ಸಾಗುತಿದೆ. ಗರಿಷ್ಠ ಪ್ರಮಾಣಕ್ಕೆ ಉಷ್ಣಾಂಶ ಹೆಚ್ಚಾಗಿದ್ದು, ಜನರು ತತ್ತರಿಸುವಂತಾಗಿದೆ. ಉತ್ತರ ಕರ್ನಾಟಕದ (Karnataka)ಹಲವೆಡೆ ಗರಿಷ್ಠ ಉಷ್ಣಾಂಶ ದಾಖಲು ಆಗಿದೆ. ಕಲ್ಬುರ್ಗಿ 39, ರಾಯಚೂರು ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ 38 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದೆ.

Advertisement
Advertisement

ಬೆಂಗಳೂರಿನಲ್ಲಿ(Bengaluru) ಬಿಸಿಲಿನ ತಾಪಮಾನ ಜಾಸ್ತಿಯಾಗಿದ್ದು, ನಾಲ್ಕು ವರ್ಷದ ದಾಖಲೆಯನ್ನು ಮುರಿದಿದೆ. ಪೂರ್ವ ಭಾಗದ ಸಮುದ್ರದ ನೀರಿನ ಉಷ್ಣಾಂಶ 1.5ಕ್ಕಿಂತ ಹೆಚ್ಚಾಗುವ ಸಾಧ್ಯತೆ ಇದ್ದು, ಇದನ್ನು ಏಲಿನೋ(El-ino) ಎಂದು ಕರೆಯುತ್ತಾರೆ. ಇದರ ಪರಿಣಾಮವಾಗಿ ರಾಜ್ಯದಲ್ಲಿ ಮೂರು ತಿಂಗಳು ವಾಡಿಕೆಗಿಂತ 70% ಹೆಚ್ಚು ಉಷ್ಣತೆ ದಾಖಲಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ(Meteorological Department) ಹೇಳಿದೆ. ಇಡೀ ರಾಜ್ಯದಲ್ಲೇ ವಾಡಿಕೆಗಿಂತ ಹೆಚ್ಚಿನ ತಾಪಮಾನ ಮುಂದಿನ ಮೂರು ತಿಂಗಳಲ್ಲಿ ಕಾಣಬಹುದಾಗಿದೆ. ಅದೇ ರೀತಿ ಮಾರ್ಚ್ನಿಂದ ಮೇ ವೇಳೆಯಲ್ಲಿ ವಾಡಿಕೆಗಿಂತ 70% ರಷ್ಟು ಮಳೆಯಾಗುವ(Rain) ಸಾಧ್ಯತೆ ಕೂಡ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 33 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 23 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ರಾಯಚೂರಿನಲ್ಲಿ ಗರಿಷ್ಠ ತಾಪಮಾನ 38 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

ಗರಿಷ್ಠ ತಾಪಮಾನ ಸಾಧ್ಯತೆ : ಶುಕ್ರವಾರ ಉತ್ತರ ಒಳನಾಡು ಜಿಲ್ಲೆಗಳಲ್ಲಿ 36 ರಿಂದ 39 ಡಿಗ್ರಿ ಸೆಲ್ಸಿಯಸ್‌ ಉಷ್ಣಾಂಶ ದಾಖಲು ಆಗಿದೆ. ದಕ್ಷಿಣ ಒಳನಾಡು, ಕರಾವಳಿ ಜಿಲ್ಲೆಗಳಲ್ಲೂ 34 ಡಿಗ್ರಿ ಸೆಲ್ಸಿಯಸ್‌ಗೂ ಅಧಿಕ ಉಷ್ಣಾಂಶ ದಾಖಲಾಗಿದೆ. ಮಾರ್ಚ್‌ ಅಂತ್ಯದ ವೇಳೆಗೆ 40 ಡಿಗ್ರಿ ಸೆಲ್ಸಿಯಸ್‌ ಉಷ್ಣಾಂಶ ದಾಖಲಾಗುವ ಸಾಧ್ಯತೆ ಎಂದು ಹವಾಮಾನ ತಜ್ಞ ಸಿಎಸ್‌ ಪಾಟೀಲ ಅವರು ತಿಳಿಸಿದ್ದಾರೆ.

The temperature has risen to the maximum in the state. Maximum temperature has been recorded in many parts of North Karnataka. Kalburgi 39, Raichur and Koppal districts recorded 38 degrees Celsius.

Advertisement

– ಅಂತರ್ಜಾಲ ಮಾಹಿತಿ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡಿಕೆ ಬೆಳೆ ಸಮಸ್ಯೆ ನಮ್ಮಲ್ಲಿ ಮಾತ್ರವಲ್ಲ.. ಭೂತಾನ್‌ನಲ್ಲೂ ಇದೆ..! ಕಳೆದ 3 ವರ್ಷಗಳಿಂದ ಅಲ್ಲಿ ಏನಾಗುತ್ತಿದೆ..?

ಅಡಿಕೆ ಬೆಳೆಯಲ್ಲಿನ ವಿವಿಧ ಸಮಸ್ಯೆ ಭಾರತದಲ್ಲಿ ಮಾತ್ರವಲ್ಲ, ವಿವಿಧ ದೇಶಗಳಲ್ಲೂ ಈಗ ಕಾಣಿಸಿಕೊಳ್ಳಲು…

50 minutes ago

ಜೂನ್ 22 ರಂದು 6 ಗ್ರಹಗಳ ಮಹಾಗೋಚಾರ | 12 ರಾಶಿಗಳ ಮೇಲೆ ಹೇಗಿರಲಿದೆ ಪ್ರಭಾವ..?

ಜೂನ್ 22, 2025 ರಂದು  6 ಗ್ರಹಗಳ ಮಹಾಗೋಚಾರ, ಸೂರ್ಯ, ಚಂದ್ರ, ಬುಧ,…

2 hours ago

ಹೊಸರುಚಿ | ಹಲಸಿನ ಕಾಯಿ ಐಸ್ ಕ್ರೀಮ್

ಐಸ್ ಕ್ರೀಮ್ ಅಂದರೆ ಯಾರಿಗೆ ಇಷ್ಟವಿಲ್ಲ ಹೇಳಿ. ಎಲ್ಲರಿಗೂ ಬೇಕು. ಹಲಸಿನ ಹಣ್ಣಿನ…

2 hours ago

ಸಸ್ಯ ಪರಿಚಯ | ಕರ್ಲೆಂಕಿ

ಅಚ್ಚ ಹಸುರಿನ ಉರುಟುರುಟಾದ ರೂಪಾಯಿ ನಾಣ್ಯದಷ್ಟು ಗಾತ್ರದ ಎಲೆಗಳ ದಂಟುಗಳನ್ನು ಹೊಂದಿರುವ ಗಿಡ…

10 hours ago

ಹವಾಮಾನ ಮಾಹಿತಿ | ಈಗ ಎಲ್ಲೆಲ್ಲಾ ಭರ್ಜರಿ ಮಳೆ..? ಎಲ್ಲಿ ಕುಸಿತ..?

ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಭರ್ಜರಿಯಾಗಿ ಸುರಿದ ಮಳೆ ಈಗ ಸ್ವಲ್ಪ ವಿರಾಮ…

11 hours ago

ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಮಳೆ | ರಾಜ್ಯದ ನದಿಗಳಿಗೆ 79 ಸಾವಿರದ 44 ಕ್ಯೂಸೆಕ್ ನೀರು

ಮಹಾರಾಷ್ಟ್ರದಲ್ಲಿ  ಸುರಿಯುತ್ತಿರುವ ಮಳೆಯಿಂದಾಗಿ ರಾಜ್ಯದ ನದಿ ಪಾತ್ರಗಳಿಗೆ 79 ಸಾವಿರದ 44 ಕ್ಯೂಸೆಕ್…

12 hours ago