Advertisement
MIRROR FOCUS

ಪ್ಯಾನ್​-ಆಧಾರ್‌ ಲಿಂಕ್‌ಗೆ ಮೇ 31 ಡೆಡ್​ಲೈನ್ | ತಪ್ಪಿದರೆ ಡಬಲ್‌ ಟಿಡಿಎಸ್‌ ಕಡಿತ |

Share

ಯಾರ್ಯಾರು ತೆರಿಗೆದಾರರಿದ್ದೀರಿ(Tax payers) ತಪ್ಪದೇ ನಿಮ್ಮ ಆಧಾರ ಕಾರ್ಡ್‌(Adhar card) ಹಾಗೂ ಪ್ಯಾನ್‌  ಕಾರ್ಡ್‌ನ್ನು(Pan card) ಲಿಂಕ್‌ ಮಾಡಿಸಿ(PAN Aadhaar Link). ಇಲ್ಲವಾದಲ್ಲಿ ಡಬಲ್‌ ತೆರಿಗೆ(Tax) ಬೀಳೋದು ಪಕ್ಕಾ. ಹೆಚ್ಚಿನ ದರದಲ್ಲಿ ತೆರಿಗೆ ಕಡಿತ ತಪ್ಪಿಸಲು ಮೇ 31ರೊಳಗೆ ಸಾರ್ವಜನಿಕರು ತಪ್ಪದೇ ಪ್ಯಾನ್ ಕಾರ್ಡ್​ನೊಂದಿಗೆ ಆಧಾರ್‌ ಸಂಖ್ಯೆಯನ್ನು ಲಿಂಕ್ ಮಾಡುವಂತೆ ಆದಾಯ ತೆರಿಗೆ ಇಲಾಖೆ (IT) ತೆರಿಗೆದಾರರಿಗೆ ತಿಳಿಸಿದೆ.

ಆದಾಯ ತೆರಿಗೆ ನಿಯಮಗಳ ಪ್ರಕಾರ, ಶಾಶ್ವತ ಖಾತೆ ಸಂಖ್ಯೆ (PAN) ಅನ್ನು ಬಯೋಮೆಟ್ರಿಕ್ ಆಧಾರ್‌ನೊಂದಿಗೆ ಲಿಂಕ್ ಮಾಡದೇ ಇದ್ದರೆ, ಟಿಡಿಎಸ್ (ಮೂಲದಲ್ಲೇ ತೆರಿಗೆ ಕಡಿತ) ಅನ್ನು ಅನ್ವಯಿಸುವ ದರಕ್ಕಿಂತ ಎರಡು ಪಟ್ಟು ಕಡಿತಗೊಳಿಸಲಾಗುತ್ತದೆ. ಅಂದರೆ, ಶೇ.10ರ ಬದಲಾಗಿ ಶೇ.20ರಷ್ಟು ಟಿಡಿಎಸ್‌ ಮಾಡಲಾಗುತ್ತದೆ ಎಂದು ಹೇಳಿದೆ.

ಕಳೆದ ತಿಂಗಳು ಆದಾಯ ತೆರಿಗೆ ಇಲಾಖೆ ಈ ಕುರಿತು ಮೊದಲ ಸುತ್ತೋಲೆ ಹೊರಡಿಸಿದೆ. ತೆರಿಗೆದಾರರು ಮೇ 31ರೊಳಗೆ ತಮ್ಮ ಪ್ಯಾನ್ ಜೊತೆಗೆ ಆಧಾರ್‌ ಲಿಂಕ್ ಮಾಡಿದರೆ ಹೆಚ್ಚಿನ ಟಿಡಿಎಸ್‌ ಕಡಿತಕ್ಕೆ ಯಾವುದೇ ಕ್ರಮ ತೆಗೆದುಕೊಳ್ಳುವುದಿಲ್ಲ ಎಂದಿತ್ತು. ಇದೇ ವೇಳೆ, ಬ್ಯಾಂಕ್‌ಗಳು ಹಾಗು ಹಣಕಾಸು ವ್ಯವಹಾರ ನಡೆಸುವ ಇತರೆ ಸಂಸ್ಥೆಗಳು ಕೂಡಾ ವ್ಯವಹಾರದ ವಿವರವಾದ ಮಾಹಿತಿ ಸಲ್ಲಿಸಬೇಕು ಎಂದು ಸೂಚಿಸಿತ್ತು.

  • ಅಂತರ್ಜಾಲ ಮಾಹಿತಿ
ಪ್ರತಿಕ್ರಿಯಿಸಲು....
ಈ ಕೆಳಗಿನ ಲಿಂಕ್‌ ಮೂಲಕ ನಿಮ್ಮ ಅಭಿಪ್ರಾಯ ವ್ಯಕ್ತಪಡಿಸಬಹುದು…

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕೃಷಿ ಉತ್ಪನ್ನಕ್ಕೆ ಮೌಲ್ಯವರ್ಧನೆ – ಒಡಿಶಾದಲ್ಲಿ ₹43,437 ಕೋಟಿ ಹೂಡಿಕೆ ಪ್ರಸ್ತಾವನೆ

ಆಹಾರ ಸಂಸ್ಕರಣಾ ವಲಯದಲ್ಲಿ ಒಡಿಶಾ ₹43,437 ಕೋಟಿ ಮೌಲ್ಯದ ಹೂಡಿಕೆ ಪ್ರಸ್ತಾವನೆಗಳನ್ನು ಆಕರ್ಷಿಸಿದ್ದು,…

5 hours ago

ಕರ್ನಾಟಕದ 69.60 ಲಕ್ಷ ಹೆಕ್ಟೇರ್ ಭೂಮಿ ಹಾನಿ – ಕೃಷಿ ಉತ್ಪಾದಕತೆಗೆ ದೊಡ್ಡ ಸವಾಲು

ಕರ್ನಾಟಕದಲ್ಲಿ 69.60 ಲಕ್ಷ ಹೆಕ್ಟೇರ್ ಭೂಮಿ ಭೂಸವಕಳಿ ವ್ಯಾಪ್ತಿಯಲ್ಲಿದೆ ಎಂದು ಕೇಂದ್ರ ಸರ್ಕಾರದ…

6 hours ago

ಮಂಗಳೂರಿನಲ್ಲಿ ರಾಷ್ಟ್ರೀಯ ಕಿರಿಯರ ಚೆಸ್ ಚಾಂಪಿಯನ್‌ಶಿಪ್‌ಗೆ ತೆರೆ – ಮಣಿ ಸರ್ಬರ್‌ತೋ ಚಾಂಪಿಯನ್

ಮಂಗಳೂರಿನಲ್ಲಿ ನಡೆದ ರಾಷ್ಟ್ರೀಯ 11 ವರ್ಷದೊಳಗಿನ ಮುಕ್ತ ಹಾಗೂ ಬಾಲಕಿಯರ ಚೆಸ್ ಚಾಂಪಿಯನ್‌ಶಿಪ್–2026ಕ್ಕೆ…

15 hours ago

ಮ್ಯಾನ್ಮಾರ್‌ನಿಂದ ರೈಲಿನಲ್ಲಿ ಸಾಗಿಸುತ್ತಿದ್ದ 10 ಟನ್ ಅಡಿಕೆ ವಶ

ಮ್ಯಾನ್ಮಾರ್‌ನಿಂದ ಕಳ್ಳಸಾಗಣೆ ಮಾಡಲಾಗಿದ್ದ ಸುಮಾರು 10 ಟನ್ ವಿದೇಶಿ ಅಡಿಕೆಯನ್ನು ಅಸ್ಸಾಂನ ರಂಗಿಯಾ…

16 hours ago

ಹವಾಮಾನ ವರದಿ | 08-08-2026 | ಕರಾವಳಿಯಲ್ಲಿ ಮಳೆ ಇಳಿಕೆ – ರಾಜ್ಯದಲ್ಲಿ ಹೇಗೆ..?

ಆಗಸ್ಟ್‌ 8ರಿಂದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯ ಪ್ರಮಾಣ ಇಳಿಕೆಯಾಗುವ ಸಾಧ್ಯತೆ ಇದ್ದು,…

24 hours ago

ಸಿರಿಧಾನ್ಯಗಳಿಗೆ ಬೇಡಿಕೆ ಹೆಚ್ಚಿದೆ… ಆದರೆ ರೈತರಿಗೆ ಲಾಭ ಹೆಚ್ಚಿದೆಯೇ?

ಸಿರಿಧಾನ್ಯಗಳ ಬೇಡಿಕೆ ಹೆಚ್ಚಿದರೂ, ರೈತರಿಗೆ ಅದರ ಸಂಪೂರ್ಣ ಆರ್ಥಿಕ ಲಾಭ ಇನ್ನೂ ತಲುಪಿಲ್ಲ…

1 day ago