Advertisement
ಸುದ್ದಿಗಳು

ಶುದ್ಧ ಕನ್ನಡ ಪದ ಮತ್ತೆ ವಿಜೃಂಭಿಸಲಿ – ರಾಘವೇಶ್ವರ ಶ್ರೀ

Share

ಕನ್ನಡವನ್ನು ಕಲುಷಿತ ಮಾಡಿರುವ ಪರಕೀಯ ಶಬ್ದಗಳನ್ನು ಅವರಿಗೇ ಬಿಟ್ಟುಬಿಡೋಣ. ಶುದ್ಧ ಕನ್ನಡದ ಸುಂದರ ಪದಗಳೇ ಕನ್ನಡ ತಾಯಿಗೆ ಶೋಭೆ. ಮರೆತು ಹೋದ ಕನ್ನಡ ಪದಗಳನ್ನು ಮತ್ತೆ ಚಾಲ್ತಿಗೆ ತರುವ ಜತೆಗೆ ಹೊಸ ಅನ್ವೇಷಗಣೆಗಳಿಗೆ ಪದಸೃಷ್ಟಿಯ ಮೂಲಕ ಕನ್ನಡಾಂಬೆಯ ಸೇವೆ ಮಾಡೋಣ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀರಾಘವೇಶ್ವರಭಾರತೀಮಹಾಸ್ವಾಮೀಜಿ ಕರೆ ನೀಡಿದರು.

ಅಶೋಕೆಯಲ್ಲಿ ಸ್ವಭಾಷಾ ಚಾತುಮಾಸ್ಯ ವ್ರತ ಕೈಗೊಂಡಿರುವ ಶ್ರೀಗಳು 40ನೇ ದಿನವಾದ ಸೋಮವಾರ ಸಾಗರದ ಎನ್.ಎನ್.ಶ್ರೀಧರ್ ಕುಟುಂಬದಿಂದ ಸರ್ವಸೇವೆ ಸ್ವೀಕರಿಸಿ ಆಶೀರ್ವಚನ ಅನುಗ್ರಹಿಸಿದರು. ದಿನಕ್ಕೊಂದು ಆಂಗ್ಲ ಶಬ್ದ ತ್ಯಾಗ ಅಭಿಯಾನದಲ್ಲಿ ಸ್ಕ್ರೀನ್‍ಶಾಟ್ ಅಥವಾ ಅಥವಾ ಸ್ಕ್ರೀನ್‍ಗ್ರಾಫ್ ಪದ ಕೈಬಿಡುವಂತೆ ಸಲಹೆ ಮಾಡಿದರು. ಇದು ಚರವಾಣಿ ಯುಗ. ನಮ್ಮ ಜೀವನದ ಅವಿಭಾಜ್ಯ ಅಂಗವಾಗಿ ಬೆಳೆದಿರುವ ಚರವಾಣಿಗೆ ಸಂಬಂಧಿಸಿದಂತೆ ಈ ಎರಡು ಪದಗಳು ವ್ಯಾಪಕ ಬಳಕೆಯಲ್ಲಿದೆ. ಮೇಲ್ನೋಟಕ್ಕೆ ಕನ್ನಡ ಪದವೇ ಇಲ್ಲ ಎಂಬಂತೆ ಕಂಡುಬರುತ್ತದೆ. ಆದರೆ ಸುಂದರ ಶಬ್ದಗಳು ಕನ್ನಡದವಲ್ಲಿವೆ ಎಂದು ಹೇಳಿದರು.

ಸ್ಕ್ರೀನ್‍ಶಾಟ್ ಬದಲು ತೆರೆ ಸೆರೆ ಎಂಬ ಸರಳ- ಸುಂದರ ಪದ ತೆರೆಯ ಚಿತ್ರವನ್ನು ಸೆರೆಹಿಡಿಯುವ ಅರ್ಥವನ್ನು ಚೆನ್ನಾಗಿ ಬಿಂಬಿಸುತ್ತದೆ. ಈ ಹೃಸ್ವ ಶಬ್ದದಲ್ಲಿ, ಪ್ರಾಸವಿದೆ. ಉಚ್ಚರಣೆಗೂ ಸುಲಭ. ಈ ಸುಂದರ ಪದ ಬಳಕೆಯನ್ನೇ ಚಾಲ್ತಿಗೆ ತರೋಣ ಎಂದು ಕರೆ ನೀಡಿದರು. ತೆರೆಯಚ್ಚು, ತೆರೆ ಚಿತ್ರ, ಪರದೆ ಚಿತ್ರ, ತೆರೆ ಹಿಡಿತ ಮುಂತಾದ ಪದ್ಯಗಳನ್ನೂ ಬಳಸಬಹುದು. ಶುದ್ಧ ಕನ್ನಡ ಭಾಷೆಯ ಈ ಪದವನ್ನು ಬಳಸೋಣ. ಕನ್ನಡಾಂಬೆಯೂ ಇದರಿಂದ ಸಂತೋಷಪಡುತ್ತಾಳೆ. ಪರಕೀಯವಾದದ್ದು ಅವರ ಬಳಿಯೇ ಇರಲಿ. ಕನ್ನಡದ ಸುಂದರ ಪದಗಳು ವಿಜೃಂಭಿಸಲಿ ಎಂದು ಆಶಿಸಿದರು.

ಗೋವಾದ ಶ್ರೀ ಶಿವದತ್ತನಾಥ ಮಹಾರಾಜ್ ಅವರು ಅಪಾರ ಶಿಷ್ಯಸಮೂಹದೊಂದಿಗೆ ಅಶೋಕೆಗೆ ಆಗಮಿಸಿ, ವ್ರತನಿರತರಾದ ಶ್ರೀಗಳ ದರ್ಶನ ಆಶೀರ್ವಾದ ಪಡೆದರು. ಚಾತುರ್ಮಾಸ್ಯದ ಅಂಗವಾಗಿ ನಡೆಯತ್ತಿರುವ ಚತುಃಸಂಹಿತಾ ಯಾಗದಲ್ಲೂ ಶ್ರೀ ಶಿವದತ್ತನಾಥರು ಪಾಲ್ಗೊಂಡು, ಪುರಾತನ ಮಲ್ಲಿಕಾರ್ಜುನ ದೇವಾಲಯಕ್ಕೆ ಭೇಟಿ ನೀಡಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿ ಮತ್ತು ನ್ಯೂಸ್ ಎಲರ್ಟ್ ಗಾಗಿ  ನಮ್ಮ WhatsApp Channel   ಗೆ ಇಲ್ಲಿ ಕ್ಲಿಕ್‌ ಮಾಡಿ ಸೇರಿಕೊಳ್ಳಿ

ಚಾತುರ್ಮಾಸ್ಯದಲ್ಲಿ ಋಗ್ವೇದ ಪಾರಾಯಣ ಕೈಗೊಂಡ ವೇದಮೂರ್ತಿ ನಾಗನರಸಿಂಹ ಭಟ್ ಅವರನ್ನು ಶ್ರೀಗಳು ಸನ್ಮಾನಿಸಿದರು. ಚಾತುರ್ಮಾಸ್ಯ ತಂಡದ ಶ್ರೀಕಾಂತ್ ಪಂಡಿತ್, ಅರವಿಂದ ಧರ್ಬೆ, ವಿವಿವಿ ಆಡಳಿತಾಧಿಕಾರಿ ಡಾ.ಟಿ.ಜೆ.ಪ್ರಸನ್ನ ಕುಮಾರ್, ಹಿರಿಯ ಲೋಕಸಂಪರ್ಕಾಧಿಕಾರಿ ಜಿ.ಕೆ.ಹೆಗಡೆ, ಶ್ರೀಮಠದ ಶಾಸ್ತ್ರಿಗಳಾದ ಸುಬ್ರಾಯ ಅಗ್ನಿಹೋತ್ರಿ, ಶ್ರೀಕಾರ್ಯದರ್ಶಿ ಮಧು ಜಿ.ಕೆ. ಮತ್ತಿತರು ಉಪಸ್ಥಿತರಿದ್ದರು. ಗುಡಿಗಾರ ಸಮಾಜದಿಂದ ಸ್ವರ್ಣಪಾದುಕಾ ಸೇವೆ ನೆರವೇರಿತು. ಸರ್ವಸಮಾಜ ಸಂಯೋಜಕ ಕೆ.ಎನ್.ಹೆಗಡೆ, ಸಮಾಜದ ಗಣ್ಯರಾದ ವಾಸುದೇವ ಶೆಟ್ಟರು, ದೇವಿದಾಸ ಶೆಟ್ಟರು, ನಂದೂ ಶೆಟ್ಟರು ಪಾಲ್ಗೊಂಡಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕೇರಳದಲ್ಲಿ ಭಾರಿ ಮಳೆ ಆರ್ಭಟ : ಮಲಪ್ಪುರಂನಲ್ಲಿ ಸರಣಿ ಭೂಕುಸಿತ , ಸಂಚಾರ ಸಂಪೂರ್ಣ ಸ್ಥಗಿತ

ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…

2 hours ago

ಆಕೆ ಏಕೆ ತನ್ನ ನೋವನ್ನು ಯಾರಿಗೂ ಹೇಳುವುದಿಲ್ಲ..?

ಕುಟುಂಬದ ನೆಮ್ಮದಿಗಾಗಿ ತನ್ನ ನೋವನ್ನೂ ಮರೆಮಾಚುವ ಅಮ್ಮಂದಿರ ಮೌನ ತ್ಯಾಗವನ್ನು 'ತಿರುವು' ಅಂಕಣ…

4 hours ago

ಹಿಂದೂ ಮಹಾಸಾಗರದ ಹವಾಮಾನದಲ್ಲಿ ಹಠಾತ್ ಬದಲಾವಣೆ – ಮತ್ತೆ ಮಹಾಮಳೆಗೆ ಕಾರಣವಾಗುತ್ತಿದೆಯೇ?

ಹಿಂದೂ ಮಹಾಸಾಗರದ ಹವಾಮಾನ ಬದಲಾವಣೆ ಹಾಗೂ ಸಕಾರಾತ್ಮಕ IOD ಪರಿಣಾಮದಿಂದ ಕರ್ನಾಟಕದಲ್ಲಿ ಮುಂಗಾರು…

7 hours ago

ರಾಜ್ಯದಲ್ಲಿ ಭಾರೀ ಮಳೆ ಆರ್ಭಟ – ಕೆಲವು ಜಿಲ್ಲೆಗಳಲ್ಲಿ ಇಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ರಾಜ್ಯದ ಹಲವೆಡೆ ಭಾರೀ ಮಳೆಯ ಹಿನ್ನೆಲೆಯಲ್ಲಿ ಕೆಲವು ಜಿಲ್ಲೆಗಳಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.…

12 hours ago

ಆಹಾರ-ನಿದ್ರೆ ಪರಸ್ಪರ ಪೂರಕ; ಉತ್ತಮ ನಿದ್ರೆಗೆ ಹಸಿವು ಅಗತ್ಯ: ರಾಘವೇಶ್ವರ ಶ್ರೀ

ಉತ್ತಮ ಆರೋಗ್ಯಕ್ಕೆ ಸರಿಯಾದ ಆಹಾರ ಮತ್ತು ನಿದ್ರೆ ಎರಡೂ ಅವಿಭಾಜ್ಯ ಎಂದು ಶ್ರೀ…

21 hours ago