ನಮ್ಮ ದೇಶ ಸ್ವತಂತ್ರವಾಗಿ ನಾವು ಅಮೃತ ಮಹೋತ್ಸವ ಆಚರಿಸುತ್ತಿದ್ದೇವೆ. ಆದರೆ ಒಂದಷ್ಟು ಮುಖ್ಯ ಸಮಸ್ಯೆಗಳು ಇಂದಿಗೂ ನೀಗಿಲ್ಲ. ಮೂಲಭೂತ ಸೌಕರ್ಯಗಳು ಇನ್ನೂ ಹಳ್ಳಿಗಳ ಕಡೆಗೆ ತಲುಪಿಲ್ಲ. ನಮ್ಮ ವ್ಯವಸ್ಥೆಯಲ್ಲಿ ಮುಖ್ಯವಾದ ಶಿಕ್ಷಣವನ್ನು ನಮ್ಮ ಸರ್ಕಾರಗಳು ಇಂದಿಗೂ ಮಕ್ಕಳಿಗೆ ಸರಿಯಾದ ಸೌಲಭ್ಯ ಒದಗಿಸಿ ನೀಡುತ್ತಿಲ್ಲ. ನಮ್ಮ ಪ್ರತಿನಿಧಿಗಳಂತೂ ಸ್ವಹಿತದ ಮೂಲಭೂತ ಸೌಕರ್ಯಗಳನ್ನು ನೋಡಿಕೊಳ್ಳೋದೆ ಆಯ್ತು. ಬಡ ಮಕ್ಕಳು ಕಲಿಯುವ ಸರ್ಕಾರಿ ಶಾಲೆಗಳನ್ನು ಕಣ್ಣೆತ್ತಿಯೂ ನೋಡಲ್ಲ…!
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಅಜ್ಜಾವರ ಗ್ರಾಮದ ದೊಡ್ಡೇರಿಯ ಸರಕಾರಿ ಪ್ರಾಥಮಿಕ ಶಾಲೆ ನಾಲ್ಕು ದಶಕಗಳಷ್ಟು ಹಳೆಯದಾಗಿದ್ದು, ದುಸ್ಥಿತಿಯಿಂದ ಕೂಡಿದೆ. ಇದರಿಂದ ಒಂದರಿಂದ ಐದನೇ ತರಗತಿವರೆಗಿನ ಮಕ್ಕಳು ಬಿಸಿಯೂಟ ತಯಾರಿಸುವ ಅಡುಗೆ ಮನೆಯಲ್ಲಿ ಕುಳಿತು ಪಾಠ ಕೇಳುತ್ತಿದ್ದಾರೆ.
ಕಳೆದ ಮಾರ್ಚ್ನಲ್ಲಿ ನಮ್ಮ ಶಾಲೆಯ ದುರಸ್ತಿಗೆ ಸರ್ಕಾರ ಹಣ ಮಂಜೂರು ಮಾಡಿತ್ತು. ಆದರೆ ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಾಮಗಾರಿ ಕೈಗೆತ್ತಿಕೊಳ್ಳಲಾಗಲಿಲ್ಲ. ನಿಗದಿತ ಸಮಯಕ್ಕೆ ಕಾಮಗಾರಿ ಪೂರ್ಣಗೊಳ್ಳದ ಕಾರಣ ಹಣ ವಾಪಸ್ ಹೋಗಿದೆ. ಕಳೆದ ವರ್ಷ ತರಗತಿಯೊಂದರ ಗೋಡೆಗಳು ಹಾನಿಗೊಳಗಾಗಿದ್ದವು. ಅದಕ್ಕೂ ಮುನ್ನ ಇನ್ನೊಂದು ತರಗತಿ ಕೊಠಡಿ ಬಳಕೆಗೆ ಯೋಗ್ಯವಲ್ಲ ಎಂದು ಇಲಾಖೆ ಘೋಷಿಸಿ ಮುಚ್ಚಿತ್ತು ಎಂದು ಶಾಲಾಭಿವೃದ್ಧಿ ಮತ್ತು ಮೇಲ್ವಿಚಾರಣಾ ಸಮಿತಿ ಅಧ್ಯಕ್ಷ ಡಿ.ಕೆ ದಯಾನಂದ ಹೇಳಿದರು.
ಇದರಿಂದ ತರಗತಿಗಳಿಗೆ ಬೇರೆ ಸ್ಥಳ ಲಭ್ಯವಿಲ್ಲದ ಕಾರಣ ವಿದ್ಯಾರ್ಥಿಗಳನ್ನು ಅಡುಗೆ ಮನೆಯಲ್ಲಿ ಕೂರಿಸಿ ಪಾಠ ಮಾಡಲಾಗುತ್ತಿದೆ. ಸಂಪೂರ್ಣ ಹಾನಿಗೊಳಗಾದ ತರಗತಿಯನ್ನು ಸರಿಪಡಿಸಿ, ನೀರು ಸೋರಿಕೆಯಾಗದಂತೆ ತಾಡಪಲ್ ಹಾಕಿದ್ದೇವೆ. ಹೀಗಾಗಿ ಅಡುಗೆ ಇಲ್ಲೇ ತಯಾರಿಸಲಾಗುತ್ತಿದೆ. ನಂತರ ಒಂದರಿಂದ ಐದನೇ ತರಗತಿವರೆಗಿನ ಸುಮಾರು 12 ಮಕ್ಕಳನ್ನು ಅಡುಗೆ ಮನೆಯಲ್ಲಿ ಕೂರಿಸಿ ಪಾಠ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ.
ಮಳೆಗಾಲದಲ್ಲಿ ತಂಪಾದ ನೆಲದ ಮೇಲೆ ಕುಳಿತು ಪಾಠ ಕೇಳುವುದರಿಂದ ಮಕ್ಕಳು ಅನಾರೋಗ್ಯಕ್ಕೆ ತುತ್ತಾಗುತ್ತಿದ್ದಾರೆ. ಖಾಯಂ ಶಿಕ್ಷಕರು ಮಾತ್ರ ಕಷ್ಟಗಳ ನಡುವೆಯೂ ಮಕ್ಕಳಿಗೆ ಕಲಿಸಲು ತಮ್ಮ ಕೈಲಾದಷ್ಟು ಪ್ರಯತ್ನಿಸುತ್ತಾರೆ ಎಂದರು.
ದಯಾನಂದ ಅವರು ಶಾಲೆಯ ದುರವಸ್ಥೆಯನ್ನು ನೋಡಿ ಹತ್ತಿರದಲ್ಲಿರುವ ಮತ್ತೊಂದು ಶಾಲೆಯಲ್ಲಿ ಕುಳಿತು ವಿದ್ಯಾರ್ಥಿಗಳು ಪಾಠ ಕೇಳುವಂತೆ ವ್ಯವಸ್ಥೆ ಮಾಡಿದ್ದಾರೆ. ಸರ್ಕಾರಿ ಶಾಲೆ ದುರಸ್ತಿಯಾಗುವವರೆಗು ವಿದ್ಯಾರ್ಥಿಗಳಿಗೆ ತಮ್ಮ ಕ್ಯಾಂಪಸ್ನಲ್ಲಿ ಪಾಠ ಮಾಡಲು ಅವಕಾಶ ಮಾಡಿಕೊಟ್ಟಿದ್ದಾರೆ. ಆದರೆ ಇದಕ್ಕೆ ಎಸ್ಡಿಎಂಸಿ ಸದಸ್ಯರು ವಿರೋಧ ವ್ಯಕ್ತಪಡಿಸಿದ್ದಾರೆ.
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…
ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…
ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…
2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…
ನಾಗಾಲ್ಯಾಂಡ್ನಲ್ಲಿ ರಬ್ಬರ್ ಕೃಷಿ ಸುಮಾರು 29,794 ಹೆಕ್ಟೇರ್ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್ನಲ್ಲಿ ಸೂಕ್ತ…
ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…