Advertisement
MIRROR FOCUS

ವೈಜ್ಞಾನಿಕವಾಗಿ ಕಸ ವಿಲೇವಾರಿಗೆ ಕ್ರಮ ವಹಿಸಲು ಅಧಿಕಾರಿಗಳಿಗೆ ಉಪಲೋಕಾಯುಕ್ತರು ಸೂಚನೆ

Share

ಉಪ ಲೋಕಾಯುಕ್ತರಾದ ಕೆ.ಎನ್.ಫಣೀಂದ್ರ ಅವರು ಅಗಿಲೆಯಲ್ಲಿರುವ ಕಸ ವಿಲೇವಾರಿ ಘಟಕಕ್ಕೆ ಭೇಟಿ ನೀಡಿ ವೀಕ್ಷಣೆ ಮಾಡಿ ಹಸಿಕಸ ಮತ್ತು ಒಣ ಕಸವನ್ನು ಪ್ರತ್ಯೇಕವಾಗಿ ವಿಂಗಡಣೆ ಮಾಡಿ ಶೇಖರಣೆ ಮಾಡುವುದರ ಜೊತೆಗೆ ವೈಜ್ಞಾನಿಕವಾಗಿ ಕಸ ವಿಲೇವಾರಿಗೆ ಕ್ರಮವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಹಸಿ ಕಸವನ್ನು ಶೇಖರಣೆ ಮಾಡುವ ಸ್ಥಳದಿಂದ ಕೊಳಕು ನೀರು ಹರಿದು ಹೋಗಲು ಚರಂಡಿ ಮಾಡಬೇಕು ಅದಕ್ಕೆ ಮುಚ್ಚಿರಬೇಕು ಚರಂಡಿ ಸ್ವಚ್ಛತೆಗಾಗಿ ಒಂದೆರಡು ಕಡೆ ಮುಚ್ಚಳ ತೆಗೆದು ಸ್ವಚ್ಛತೆ ಮಾಡುವಂತೆ ನಿರ್ಮಾಣ ಮಾಡಬೇಕು ಎಂದು ತಿಳಿಸಿದರಲ್ಲದೆ, ಕೊಳಕು ನೀರು ಹರಿದು ಒಂದು ಕಡೆ ಶೇಖರಣೆ ಆಗುವಂತೆ ಒಂದು ದೊಡ್ಡ ಹೊಂಡ ನಿರ್ಮಾಣ ಮಾಡಬೇಕು ಈ ಕೊಳಚೆ ನೀರು ಸಂಸ್ಕರಣೆ ಮಾಡಿ ಕೃಷಿ ಚಟುವಟಿಕೆಗೆ ಬಳಕೆ ಆಗುವಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದ್ದಾರೆ.  ಈ ಘಟಕದಲ್ಲಿ ಉತ್ಪಾದನೆ ಆಗುವ ಗೊಬ್ಬರವನ್ನು ಸ್ಥಳೀಯ ರೈತರು ಬಳಕೆ ಮಾಡಿಕೊಳ್ಳಲು ಅನುಕೂಲವಾಗುವಂತೆ ರೈತರು ಸಂಪರ್ಕ ಮಾಡುವ ಸ್ಥಳಗಳಲ್ಲಿ ದರ ಮತ್ತು ಗೊಬ್ಬರದ ದಾಸ್ತಾನು ಬಗ್ಗೆ ಫಲಕಗಳಲ್ಲಿ ಅಳವಡಿಸುವಂತೆ ಸೂಚಿಸಿದರು. ಕಸವನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡದಿರುವುದರಿಂದ ಸುತ್ತಮುತ್ತಲಿನ ಸಾರ್ವಜನಿಕರಿಗೆ ತೊಂದರೆ ಉಂಟಾಗುತ್ತದೆ ಈ ನಿಟ್ಟಿನಲ್ಲಿ ಅಧಿಕಾರಿಗಳು ಎಚ್ಚೆತ್ತುಕೊಂಡು ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ಪರಿಸರ ಇಲಾಖೆ ಅಧಿಕಾರಿಗಳು ಸರ್ವೆ ಮಾಡಿ ವರದಿ ನೀಡುವಂತೆ ಸೂಚಿಸಿದ ಉಪ ಲೋಕಾಯುಕ್ತರು ನಗರ ಸಭೆ ಆರೋಗ್ಯ ಅಧಿಕಾರಿಗಳು ಸ್ಥಳೀಯರಿಂದ ಮಾಹಿತಿ ಪಡೆಯಲು ನಿರ್ದೇಶನ ನೀಡಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮಕ್ಕಳ ಆಟದ ಹಿಂದೆ ಅಡಗಿರುವ ಅಪಾಯ ಗೊತ್ತಾ? ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಇರಲಿ ಎಚ್ಚರಿಕೆ

ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…

14 hours ago

ಹವಾಮಾನ ವರದಿ | 03-04-2026 | ಕರ್ನಾಟಕದಲ್ಲಿ ಗುಡುಗು-ಮಳೆಯ ಸರಣಿ | ಎ.5 ರಿಂದ ವಿರಾಮ, 10 ರಿಂದ ಮಳೆ ವಾಪಸ್..!

ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…

19 hours ago

ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕಾ ತರಬೇತಿ – ಅರ್ಜಿ ಆಹ್ವಾನ

ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ…

19 hours ago

ಅಡಿಕೆ ಮಾರುಕಟ್ಟೆ ಜಿಗಿತ | ಮಂಗಳೂರು ಹೊಸ ಚಾಲಿ ₹500 ದಾಟಿತು – ಏಪ್ರಿಲ್‌ನಲ್ಲಿ ಮತ್ತಷ್ಟು ಏರಿಕೆ ಸೂಚನೆ!

ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…

23 hours ago

ರಸ್ತೆ ಬದಿ ಕಸ ಎಸೆದ್ರೆ ಜಾಗ್ರತೆ..! ದಂಡ ಕೊಡ್ಲಿಲ್ಲ ಅಂದ್ರೆ FIR ಫಿಕ್ಸ್..!

ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…

1 day ago