ರಾಜ್ಯದ ಎಲ್ಲಾ ಉಪ ವಿಭಾಗಾಧಿಕಾರಿಗಳ ಜೊತೆ ಉಪ ವಿಭಾಗಾಧಿಕಾರಿಗಳ ಕೋರ್ಟ್ ಗಳಲ್ಲಿ ಬಾಕಿ ಇರುವ ಪ್ರಕರಣಗಳ ಪ್ರಗತಿ ಪರಿಶೀಲನೆಗೆ ಸಂಬಂಧಿಸಿದಂತೆ ಸಚಿವ ಕೃಷ್ಣ ಬೈರೇಗೌಡ ಅವರು ವಿಕಾಸಸೌಧ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದರು.
ತಕರಾರು ಪ್ರಕರಣಗಳನ್ನು ಇತ್ಯರ್ಥಗೊಳಿಸಿ ರೈತರಿಗೆ ಶೀಘ್ರ ನ್ಯಾಯ ಒದಗಿಸುವ ಸಲುವಾಗಿ, ರೆಗ್ಯುಲರ್ ಕೋರ್ಟ್ ಗಳ ಜೊತೆ ತುಮಕೂರು ಮಂಡ್ಯ ಮೈಸೂರು ರಾಮನಗರ ಬೆಂಗಳೂರು ಗ್ರಾಮಾಂತರ, ಕುಂದಾಪುರ ಸೇರಿ 11 ಜಿಲ್ಲೆಗಳಲ್ಲಿ 20ಕ್ಕೂ ಅಧಿಕ ವಿಶೇಷ ನ್ಯಾಯಾಲಯಗಳಿಗೆ ಚಾಲನೆ ನೀಡಲಾಗಿದೆ. ಸಭೆಯಲ್ಲಿ ಬಾಕಿ ಪ್ರಕರಣಗಳ ತ್ವರಿತ ವಿಲೇವಾರಿಗೂ ಅಧಿಕಾರಿಗಳಿಗೆ ಸಭೆಯಲ್ಲಿ ಸೂಚಿಸಿದ್ದಾರೆ. ಕಳೆದ ವರ್ಷ ಜುಲೈ ನಲ್ಲಿ ಎಸಿ ಕೋರ್ಟ್ ಗಳಲ್ಲಿ ರಾಜ್ಯಾದ್ಯಂತ RTC – NON RRT ಪ್ರಕರಣಗಳು ಸೇರಿದಂತೆ ಒಟ್ಟಾರೆ 73ಸಾವಿರದ 682 ತಕರಾರು ಪ್ರಕರಣಗಳು ಬಾಕಿ ಇದ್ದವು. ಈ ಪ್ರಕರಣಗಳ ಸಂಖ್ಯೆಯನ್ನು ಇದೀಗ 40,475ಕ್ಕೆ ಇಳಿಸಲಾಗಿದೆ. ಕಳೆದ ಒಂದು ವರ್ಷದಲ್ಲಿ 33,207 ಪ್ರಕರಣಗಳನ್ನು ಇತ್ಯರ್ಥಗೊಳಿಸಲಾಗಿದೆ.
ಆಷಾಢ ಮಾಸದಲ್ಲಿ ಶಕ್ತಿದೇವತೆ ಪೂಜೆಯ ಮಹತ್ವ ಹಾಗೂ ಏಕೆ ಅಗತ್ಯ ಇದೆ ಎನ್ನುವುದರ…
ತಿರುಮಲ ತಿರುಪತಿ ದೇವಸ್ಥಾನಗಳು (ಟಿಟಿಡಿ) ಭಕ್ತರಿಂದ ರಚನಾತ್ಮಕ ಪ್ರತಿಕ್ರಿಯೆಗಳನ್ನು ಸಂಗ್ರಹಿಸಲು ಭಕ್ತರಿಂದ ಪ್ರತಿಕ್ರಿಯೆ…
ರೈತರಿಗೆ ಇಲಾಖೆಯ ವತಿಯಿಂದ ಕೃಷಿಯ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ ದಕ್ಷಿಣ ಕನ್ನಡ…
ದ ಕ ಜಿಲ್ಲೆಯಲ್ಲಿ ನಡೆದ ಸರಣಿ ಕೊಲೆಗಳ ನಂತರ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ…
ದಕ್ಷಿಣ ಕನ್ನಡದ ಚೆಸ್ ಆಟಗಾರ ರವೀಶ್ ಕೋಟೆ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ
ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿರುವ ಭಾರತೀಯ ಗಗನಯಾತ್ರಿ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಅವರೊಂದಿಗೆ…