ರಾಜ್ಯದ ಎಲ್ಲಾ ಉಪ ವಿಭಾಗಾಧಿಕಾರಿಗಳ ಜೊತೆ ಉಪ ವಿಭಾಗಾಧಿಕಾರಿಗಳ ಕೋರ್ಟ್ ಗಳಲ್ಲಿ ಬಾಕಿ ಇರುವ ಪ್ರಕರಣಗಳ ಪ್ರಗತಿ ಪರಿಶೀಲನೆಗೆ ಸಂಬಂಧಿಸಿದಂತೆ ಸಚಿವ ಕೃಷ್ಣ ಬೈರೇಗೌಡ ಅವರು ವಿಕಾಸಸೌಧ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದರು.
ತಕರಾರು ಪ್ರಕರಣಗಳನ್ನು ಇತ್ಯರ್ಥಗೊಳಿಸಿ ರೈತರಿಗೆ ಶೀಘ್ರ ನ್ಯಾಯ ಒದಗಿಸುವ ಸಲುವಾಗಿ, ರೆಗ್ಯುಲರ್ ಕೋರ್ಟ್ ಗಳ ಜೊತೆ ತುಮಕೂರು ಮಂಡ್ಯ ಮೈಸೂರು ರಾಮನಗರ ಬೆಂಗಳೂರು ಗ್ರಾಮಾಂತರ, ಕುಂದಾಪುರ ಸೇರಿ 11 ಜಿಲ್ಲೆಗಳಲ್ಲಿ 20ಕ್ಕೂ ಅಧಿಕ ವಿಶೇಷ ನ್ಯಾಯಾಲಯಗಳಿಗೆ ಚಾಲನೆ ನೀಡಲಾಗಿದೆ. ಸಭೆಯಲ್ಲಿ ಬಾಕಿ ಪ್ರಕರಣಗಳ ತ್ವರಿತ ವಿಲೇವಾರಿಗೂ ಅಧಿಕಾರಿಗಳಿಗೆ ಸಭೆಯಲ್ಲಿ ಸೂಚಿಸಿದ್ದಾರೆ. ಕಳೆದ ವರ್ಷ ಜುಲೈ ನಲ್ಲಿ ಎಸಿ ಕೋರ್ಟ್ ಗಳಲ್ಲಿ ರಾಜ್ಯಾದ್ಯಂತ RTC – NON RRT ಪ್ರಕರಣಗಳು ಸೇರಿದಂತೆ ಒಟ್ಟಾರೆ 73ಸಾವಿರದ 682 ತಕರಾರು ಪ್ರಕರಣಗಳು ಬಾಕಿ ಇದ್ದವು. ಈ ಪ್ರಕರಣಗಳ ಸಂಖ್ಯೆಯನ್ನು ಇದೀಗ 40,475ಕ್ಕೆ ಇಳಿಸಲಾಗಿದೆ. ಕಳೆದ ಒಂದು ವರ್ಷದಲ್ಲಿ 33,207 ಪ್ರಕರಣಗಳನ್ನು ಇತ್ಯರ್ಥಗೊಳಿಸಲಾಗಿದೆ.
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…