ಸುದ್ದಿಗಳು

ಕೆಂಪು ಈರುಳ್ಳಿಗಿಂತ ಬಿಳಿ ಈರುಳ್ಳಿ ಆರೋಗ್ಯಕರವಂತೆ! ಹೇಗೆ ಗೊತ್ತಾ?

Share

ಈರುಳ್ಳಿಯನ್ನು ಹೆಚ್ಚಾಗಿ ತರಕಾರಿಯ ರೂಪದಲ್ಲಿ ಉಪಯೋಗಿಸುತ್ತೇವೆ.
ಬೋಂಡಾ ಬಜ್ಜಿ ಪಲ್ಲೆ ಸಾಂಬಾರು ಸಾರು ಸಾಸಿವೆ ಮುಂತಾದ ಆಹಾರ ಪದಾರ್ಥಗಳ ತಯಾರಿಕೆಯಲ್ಲಿ ಮತ್ತು ಅಡುಗೆಯ ರುಚಿಯನ್ನು ಹೆಚ್ಚಿಸಲು ಬಳಸುವ ಈರುಳ್ಳಿಯಲ್ಲಿ ಔಷಧೀಯ ಗುಣಗಳು ತುಂಬಾ ಇದೆ. ಬಿಳಿ ಈರುಳ್ಳಿ ದೇಹಕ್ಕೆ ಅತ್ಯಂತ ಪ್ರಯೋಜನಕಾರಿಯಾಗಿದೆ. ಇದು ಉರಿಯೂತ ನಿವಾರಕ ಮತ್ತು ಆ್ಯಂಟಿಬಯೋಟಿಕ್ ಗುಣಲಕ್ಷಣಗಳನ್ನು ಹೊಂದಿದೆ. ಅಲ್ಲದೆ ಆರ್ಯುವೇದ ಅತೀ ಹೆಚ್ಚು ಬೆಲೆಯನ್ನು ಹೊಂದಿದೆ 

ಕೆಂಪು ಈರುಳ್ಳಿ, ಬಿಳಿ ಈರುಳ್ಳಿ, ಸಿಹಿ ಈರುಳ್ಳಿ ತುಂಬಾ ವಿಧಗಳು ಇದ್ದರೂ ಬಿಳಿ ಈರುಳ್ಳಿಯ ಔಷಧೀಯ ಗುಣಗಳು ಹೆಚ್ಚು.  ಇದು ನಾನು ಚಿಕ್ಕವಳಿದ್ದಾಗ ನನ್ನ ಅಜ್ಜಿ ಎಂದ ಕೇಳುವ ಫೇವರೆಟ್ ಕಥೆ. ಈರುಳ್ಳಿ ಸ್ತೂಲ ಶರೀರವನ್ನು ಬೆಳ್ಳುಳ್ಳಿ ಕೃಷ ಶರೀರವನ್ನು ಉಂಟುಮಾಡುತ್ತದೆ.

ಈರುಳ್ಳಿ ಕೇವಲ ಅಡುಗೆಗೆ ಮಾತ್ರವಲ್ಲದೆ ದರ ಉಪಯೋಗದಿಂದ ಆರೋಗ್ಯಕ್ಕೂ ಬಹಳ ಉಪಯೋಗವಿದೆ.
1) ಬಿಳಿ ಈರುಳ್ಳಿಯ ರಸವನ್ನು ಬಿಸಿ ಮಾಡಿ ಕಿವಿಗೆ ಬಿಡುವುದರಿಂದ ಕರ್ಣ ಶೂಲೆ ಗುಣವಾಗುತ್ತದೆ.
2) ಕಿವಿಯನ್ನು ಸ್ವಚ್ಛಗೊಳಿಸಿ ಈರುಳ್ಳಿಯ ರಸವನ್ನು ಬಿಡುವುದರಿಂದ ಕಿವಿ ಸೋರುವುದು ನಿಲ್ಲುತ್ತದೆ. ತುಂಬಾ ದಿನ ಮಾಡಬೇಕಾಗುತ್ತದೆ.
3) ಶೀತಕಾಲದಲ್ಲಿ ಅರ್ಧ ಚಮಚ ದಿಂದ ಒಂದು ಚಮಚ ಈರುಳ್ಳಿಯ ರಸವನ್ನು ಜೇನುತುಪ್ಪದೊಂದಿಗೆ ಸೇವಿಸುವುದರಿಂದ ದೇಹ ಪುಷ್ಟಿ ಆಗುತ್ತದೆ.
4) ಪ್ರತಿದಿನ ಅರ್ಧ ಕಪ್ ಈರುಳ್ಳಿ ರಸಕ್ಕೆ ಕಲ್ಲು ಸಕ್ಕರೆ ಸೇರಿಸಿ ಸೇವಿಸುವುದರಿಂದ ಸಣ್ಣ ಪ್ರಮಾಣದ ಮೂತ್ರದ ಕಲ್ಲು ನಿವಾರಣೆ ಆಗುತ್ತದೆ.
5) ಊರಿನಲ್ಲಿ ಕಾಲರ ಬಂದಾಗ ಈರುಳ್ಳಿ ರಸವನ್ನು ಪ್ರತಿದಿನ ಸೇವಿಸುತ್ತಾ ಬಂದರೆ ಊರಿನ ಕಾಲರ ಮನೆಗೆ ಬರುವುದಿಲ್ಲ.
6) ಈರುಳ್ಳಿಯ ಪೀಸ್ ಗಳನ್ನು ಮನೆಯಲ್ಲಿ ಅಲ್ಲಲ್ಲಿ ಇಡುವುದರಿಂದ ಸಾಂಕ್ರಾಮಿಕ ರೋಗಗಳು ಬರುವುದಿಲ್ಲ.
7) ಈರುಳ್ಳಿಯನ್ನು ಸುಟ್ಟು ಬೆಲ್ಲ ಹಾಕಿ ಸೇವಿಸುವುದರಿಂದ ಕೆಮ್ಮು ಗುಣವಾಗುತ್ತದೆ.
8) ಈರುಳ್ಳಿ ರಸಕ್ಕೆ ಬೆಲ್ಲ ಸೇರಿಸಿ ಸೇವಿಸುವುದರಿಂದ ಬೇಗನೆ ಮುಟ್ಟು ಬರುತ್ತದೆ.
9) ಈರುಳ್ಳಿ ಹೆಚ್ಚುವಾಗ ಬರುವ ಗಾಟನ್ನು ಕಣ್ಣಿಗೆ ತೆಗೆದುಕೊಳ್ಳುವುದರಿಂದ ಕಣ್ಣು ಸ್ವಚ್ಚವಾಗುತ್ತದೆ.
10) ಈರುಳ್ಳಿಯ ರಸವನ್ನು ಕೂದಲಿನ ಬುಡದಲ್ಲಿ ಹಚ್ಚುವುದರಿಂದ ಕೂದಲಿನ ಉದುರುವ ಹೊಟ್ಟಿನ ಮತ್ತು ಹೇನಿನ ಸಮಸ್ಯೆ ಪರಿಹಾರವಾಗುತ್ತದೆ.
11) ಈರುಳ್ಳಿಯ ರಸ ತೆಗೆದು ಎಣ್ಣೆಯಲ್ಲಿ ಕುದಿಸಿ ಕೂದಲಿಗೆ ಹಚ್ಚುವುದರಿಂದ ಕೂದಲು ಸೊಂಪಾಗಿ ಬೆಳೆಯುತ್ತದೆ.
12) ಪ್ರತಿನಿತ್ಯ ಈರುಳ್ಳಿ ಹೆಚ್ಚು ಉಪಯೋಗಿಸುವುದರಿಂದ ಶರೀರದ ತೂಕ ಹೆಚ್ಚುತ್ತದೆ.
13) ಈರುಳ್ಳಿಯ ಸೊಪ್ಪನ್ನು ಪೇಸ್ಟ್ ಮಾಡಿ ಸುಟ್ಟ ಗಾಯಕ್ಕೆ ಹಚ್ಚುವುದರಿಂದ ಗಾಯ ಗುಣವಾಗುತ್ತದೆ. ಬೊಬ್ಬೆಗಳು ಬರುವುದಿಲ್ಲ.
14) ನಾನು ತಯಾರಿಸುವ ತೊನ್ನಿನ ಔಷಧಿ ಯಲ್ಲಿ ಇದರ ಬೀಜದ ಅಗತ್ಯ ಇರುತ್ತದೆ.
*ವಿಶೇಷ ಸೂಚನೆ*
15) ಈರುಳ್ಳಿಯ ಹೆಚ್ಚು ಸೇವನೆಯಿಂದ ಬುದ್ಧಿ ಸಾಮರ್ಥ್ಯ ಕಡಿಮೆಯಾಗುತ್ತದೆ.
16) ತಾಮಸಿಕ ಗುಣವನ್ನು ಹೆಚ್ಚಿಸುತ್ತದೆ. ಲೈಂಗಿಕ ಆಸಕ್ತಿಯನ್ನು ಹೆಚ್ಚಿಸುತ್ತದೆ.
17) ಇದರ ಘಾಟು ವಾಸನೆ ಬೇರೆಯವರೊಂದಿಗೆ ಮಾತನಾಡುವಾಗ ಅನುಕೂಲಕರವಾಗಿರುವುದಿಲ್ಲ.
🥢 ಸುಮನಾ ಮಳಲಗದ್ದೆ 9980182883.

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕೊಡಗು ಜಿಲ್ಲೆಯ ಕೆಲವೆಡೆ ಲಘು ಭೂಕಂಪನ | ಆತಂಕಪಡುವ ಅಗತ್ಯವಿಲ್ಲ | ರಾಜ್ಯ ನೈಸರ್ಗಿಕ ವಿಕೋಪ ನಿಗಾ ಕೇಂದ್ರ ಸ್ಪಷ್ಟನೆ

ಕೊಡಗು ಜಿಲ್ಲೆಯ ಕೆಲವೆಡೆ ಲಘು ಭೂಕಂಪನವಾಗಿದ್ದು ರಿಕ್ಟರ್ ಮಾಪಕದಲ್ಲಿ ಇದರ ತೀವ್ರತೆ 1.6…

3 hours ago

ದಕ್ಷಿಣ ಕನ್ನಡ ಜಿಲ್ಲೆಯ ವಿವಿದೆಡೆ ಗುಡುಗು ಸಹಿತ ಗಾಳಿ-ಮಳೆ | ಎರಡನೇ ಬಾರಿ ಸುರಿದ ಧಾರಾಕಾರ ಮಳೆ |

ದಕ್ಷಿಣ ಕನ್ನಡ ಜಿಲ್ಲೆಯ ಬಹುತೇಕ ತಾಲೂಕುಗಳ ಹಲವು ಕಡೆ ಸಂಜೆ ಉತ್ತಮ ಮಳೆಯಾಗಿದೆ.…

4 hours ago

ಸರ್ಕಾರಿ ವೈದ್ಯರು ಆಸ್ಪತ್ರೆಗಳಲ್ಲಿ ಬೆಳಗ್ಗೆ 9 ಗಂಟೆಯಿಂದ 4 ಗಂಟೆಯವರೆಗೆ ಇರಬೇಕು- ಸಚಿವ ಶರಣಪ್ರಕಾಶ್ ಪಾಟೀಲ್

ಸರ್ಕಾರಿ ಆಸ್ಪತ್ರೆಗಳಲ್ಲಿ ಇನ್ನು ಮುಂದೆ ಕರ್ತವ್ಯ ನಿರ್ವಹಿಸುವ ವೈದ್ಯರು ಬೆಳಗ್ಗೆ 9 ಗಂಟೆಯಿಂದ…

18 hours ago

ಕೃಷಿ ಉತ್ಪನ್ನಗಳ ದೇಸಿ ತಳಿಗಳು ಪೋಷಕಾಂಶಗಳಲ್ಲಿ ಸಮೃದ್ಧ

ವೈಜ್ಞಾನಿಕವಾಗಿ ಅಭಿವೃದ್ಧಿಪಡಿಸಲಾದ ಕೃಷಿ ಉತ್ಪನ್ನಗಳ ದೇಸಿ ತಳಿಗಳು ಪೋಷಕಾಂಶಗಳಲ್ಲಿ ಸಮೃದ್ಧವಾಗಿವೆ ಎಂದು ಗದಗ…

18 hours ago

ಕೆಂಪು ಮೆಣಸಿನಕಾಯಿ ಬೆಳೆಗಾರರಿಗೆ ಸಂಕಷ್ಟ | ಬೆಂಬಲ ಬೆಲೆ ಯೋಜನೆ ರಾಜ್ಯಕ್ಕೂ ವಿಸ್ತರಿಸುವಂತೆ ಮುಖ್ಯಮಂತ್ರಿ ಪತ್ರ | ಕೇಂದ್ರದ ಗಮನ ಸೆಳೆದ ಸಚಿವರು |

ಕೆಂಪು ಮೆಣಸಿನಕಾಯಿಗೆ ಮಾರುಕಟ್ಟೆ ಮಧ್ಯಸ್ಥಿಕೆ ಯೋಜನೆ-ಎಂಐಎಸ್ ಅಡಿಯಲ್ಲಿ ಬೆಲೆ ಕೊರತೆ ಪಾವತಿ-ಪಿಡಿಪಿ ಯೋಜನೆಯನ್ನು…

18 hours ago

ಅಕ್ರಮ ಮರಳು ಗಣಿಗಾರಿಕೆ | 5 ವರ್ಷಗಳಲ್ಲಿ 47 ಕೋಟಿ ರೂಪಾಯಿ ದಂಡ ಸಂಗ್ರಹ

ಅನಧಿಕೃತ ಮರಳು ಸಾಗಾಟ ತಡೆಯಲು ಜಿಲ್ಲಾ ಮಟ್ಟದಲ್ಲಿ ರಚಿಸಲಾಗಿರುವ ಕಾರ್ಯಪಡೆ ಮರಳು ಸಮಿತಿಗೆ…

19 hours ago