Advertisement
ಸುದ್ದಿಗಳು

ಕೆಂಪು ಈರುಳ್ಳಿಗಿಂತ ಬಿಳಿ ಈರುಳ್ಳಿ ಆರೋಗ್ಯಕರವಂತೆ! ಹೇಗೆ ಗೊತ್ತಾ?

Share

ಈರುಳ್ಳಿಯನ್ನು ಹೆಚ್ಚಾಗಿ ತರಕಾರಿಯ ರೂಪದಲ್ಲಿ ಉಪಯೋಗಿಸುತ್ತೇವೆ.
ಬೋಂಡಾ ಬಜ್ಜಿ ಪಲ್ಲೆ ಸಾಂಬಾರು ಸಾರು ಸಾಸಿವೆ ಮುಂತಾದ ಆಹಾರ ಪದಾರ್ಥಗಳ ತಯಾರಿಕೆಯಲ್ಲಿ ಮತ್ತು ಅಡುಗೆಯ ರುಚಿಯನ್ನು ಹೆಚ್ಚಿಸಲು ಬಳಸುವ ಈರುಳ್ಳಿಯಲ್ಲಿ ಔಷಧೀಯ ಗುಣಗಳು ತುಂಬಾ ಇದೆ. ಬಿಳಿ ಈರುಳ್ಳಿ ದೇಹಕ್ಕೆ ಅತ್ಯಂತ ಪ್ರಯೋಜನಕಾರಿಯಾಗಿದೆ. ಇದು ಉರಿಯೂತ ನಿವಾರಕ ಮತ್ತು ಆ್ಯಂಟಿಬಯೋಟಿಕ್ ಗುಣಲಕ್ಷಣಗಳನ್ನು ಹೊಂದಿದೆ. ಅಲ್ಲದೆ ಆರ್ಯುವೇದ ಅತೀ ಹೆಚ್ಚು ಬೆಲೆಯನ್ನು ಹೊಂದಿದೆ 

ಕೆಂಪು ಈರುಳ್ಳಿ, ಬಿಳಿ ಈರುಳ್ಳಿ, ಸಿಹಿ ಈರುಳ್ಳಿ ತುಂಬಾ ವಿಧಗಳು ಇದ್ದರೂ ಬಿಳಿ ಈರುಳ್ಳಿಯ ಔಷಧೀಯ ಗುಣಗಳು ಹೆಚ್ಚು.  ಇದು ನಾನು ಚಿಕ್ಕವಳಿದ್ದಾಗ ನನ್ನ ಅಜ್ಜಿ ಎಂದ ಕೇಳುವ ಫೇವರೆಟ್ ಕಥೆ. ಈರುಳ್ಳಿ ಸ್ತೂಲ ಶರೀರವನ್ನು ಬೆಳ್ಳುಳ್ಳಿ ಕೃಷ ಶರೀರವನ್ನು ಉಂಟುಮಾಡುತ್ತದೆ.

ಈರುಳ್ಳಿ ಕೇವಲ ಅಡುಗೆಗೆ ಮಾತ್ರವಲ್ಲದೆ ದರ ಉಪಯೋಗದಿಂದ ಆರೋಗ್ಯಕ್ಕೂ ಬಹಳ ಉಪಯೋಗವಿದೆ.
1) ಬಿಳಿ ಈರುಳ್ಳಿಯ ರಸವನ್ನು ಬಿಸಿ ಮಾಡಿ ಕಿವಿಗೆ ಬಿಡುವುದರಿಂದ ಕರ್ಣ ಶೂಲೆ ಗುಣವಾಗುತ್ತದೆ.
2) ಕಿವಿಯನ್ನು ಸ್ವಚ್ಛಗೊಳಿಸಿ ಈರುಳ್ಳಿಯ ರಸವನ್ನು ಬಿಡುವುದರಿಂದ ಕಿವಿ ಸೋರುವುದು ನಿಲ್ಲುತ್ತದೆ. ತುಂಬಾ ದಿನ ಮಾಡಬೇಕಾಗುತ್ತದೆ.
3) ಶೀತಕಾಲದಲ್ಲಿ ಅರ್ಧ ಚಮಚ ದಿಂದ ಒಂದು ಚಮಚ ಈರುಳ್ಳಿಯ ರಸವನ್ನು ಜೇನುತುಪ್ಪದೊಂದಿಗೆ ಸೇವಿಸುವುದರಿಂದ ದೇಹ ಪುಷ್ಟಿ ಆಗುತ್ತದೆ.
4) ಪ್ರತಿದಿನ ಅರ್ಧ ಕಪ್ ಈರುಳ್ಳಿ ರಸಕ್ಕೆ ಕಲ್ಲು ಸಕ್ಕರೆ ಸೇರಿಸಿ ಸೇವಿಸುವುದರಿಂದ ಸಣ್ಣ ಪ್ರಮಾಣದ ಮೂತ್ರದ ಕಲ್ಲು ನಿವಾರಣೆ ಆಗುತ್ತದೆ.
5) ಊರಿನಲ್ಲಿ ಕಾಲರ ಬಂದಾಗ ಈರುಳ್ಳಿ ರಸವನ್ನು ಪ್ರತಿದಿನ ಸೇವಿಸುತ್ತಾ ಬಂದರೆ ಊರಿನ ಕಾಲರ ಮನೆಗೆ ಬರುವುದಿಲ್ಲ.
6) ಈರುಳ್ಳಿಯ ಪೀಸ್ ಗಳನ್ನು ಮನೆಯಲ್ಲಿ ಅಲ್ಲಲ್ಲಿ ಇಡುವುದರಿಂದ ಸಾಂಕ್ರಾಮಿಕ ರೋಗಗಳು ಬರುವುದಿಲ್ಲ.
7) ಈರುಳ್ಳಿಯನ್ನು ಸುಟ್ಟು ಬೆಲ್ಲ ಹಾಕಿ ಸೇವಿಸುವುದರಿಂದ ಕೆಮ್ಮು ಗುಣವಾಗುತ್ತದೆ.
8) ಈರುಳ್ಳಿ ರಸಕ್ಕೆ ಬೆಲ್ಲ ಸೇರಿಸಿ ಸೇವಿಸುವುದರಿಂದ ಬೇಗನೆ ಮುಟ್ಟು ಬರುತ್ತದೆ.
9) ಈರುಳ್ಳಿ ಹೆಚ್ಚುವಾಗ ಬರುವ ಗಾಟನ್ನು ಕಣ್ಣಿಗೆ ತೆಗೆದುಕೊಳ್ಳುವುದರಿಂದ ಕಣ್ಣು ಸ್ವಚ್ಚವಾಗುತ್ತದೆ.
10) ಈರುಳ್ಳಿಯ ರಸವನ್ನು ಕೂದಲಿನ ಬುಡದಲ್ಲಿ ಹಚ್ಚುವುದರಿಂದ ಕೂದಲಿನ ಉದುರುವ ಹೊಟ್ಟಿನ ಮತ್ತು ಹೇನಿನ ಸಮಸ್ಯೆ ಪರಿಹಾರವಾಗುತ್ತದೆ.
11) ಈರುಳ್ಳಿಯ ರಸ ತೆಗೆದು ಎಣ್ಣೆಯಲ್ಲಿ ಕುದಿಸಿ ಕೂದಲಿಗೆ ಹಚ್ಚುವುದರಿಂದ ಕೂದಲು ಸೊಂಪಾಗಿ ಬೆಳೆಯುತ್ತದೆ.
12) ಪ್ರತಿನಿತ್ಯ ಈರುಳ್ಳಿ ಹೆಚ್ಚು ಉಪಯೋಗಿಸುವುದರಿಂದ ಶರೀರದ ತೂಕ ಹೆಚ್ಚುತ್ತದೆ.
13) ಈರುಳ್ಳಿಯ ಸೊಪ್ಪನ್ನು ಪೇಸ್ಟ್ ಮಾಡಿ ಸುಟ್ಟ ಗಾಯಕ್ಕೆ ಹಚ್ಚುವುದರಿಂದ ಗಾಯ ಗುಣವಾಗುತ್ತದೆ. ಬೊಬ್ಬೆಗಳು ಬರುವುದಿಲ್ಲ.
14) ನಾನು ತಯಾರಿಸುವ ತೊನ್ನಿನ ಔಷಧಿ ಯಲ್ಲಿ ಇದರ ಬೀಜದ ಅಗತ್ಯ ಇರುತ್ತದೆ.
*ವಿಶೇಷ ಸೂಚನೆ*
15) ಈರುಳ್ಳಿಯ ಹೆಚ್ಚು ಸೇವನೆಯಿಂದ ಬುದ್ಧಿ ಸಾಮರ್ಥ್ಯ ಕಡಿಮೆಯಾಗುತ್ತದೆ.
16) ತಾಮಸಿಕ ಗುಣವನ್ನು ಹೆಚ್ಚಿಸುತ್ತದೆ. ಲೈಂಗಿಕ ಆಸಕ್ತಿಯನ್ನು ಹೆಚ್ಚಿಸುತ್ತದೆ.
17) ಇದರ ಘಾಟು ವಾಸನೆ ಬೇರೆಯವರೊಂದಿಗೆ ಮಾತನಾಡುವಾಗ ಅನುಕೂಲಕರವಾಗಿರುವುದಿಲ್ಲ.
🥢 ಸುಮನಾ ಮಳಲಗದ್ದೆ 9980182883.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಭಾರೀ ಮಳೆ ಹಿನ್ನೆಲೆ – ದಕ್ಷಿಣ ಕನ್ನಡದಲ್ಲಿ ಇಂದು ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಡಳಿತ ಆದೇಶ

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಜುಲೈ 23ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ…

5 hours ago

ಹವಾಮಾನ ವರದಿ | 22.07.2026 | ಉತ್ತರ ಕನ್ನಡ, ಉಡುಪಿಯಲ್ಲಿ ಉತ್ತಮ ಮಳೆಯ ಸಾಧ್ಯತೆ; ರಾಜ್ಯದಲ್ಲಿ ಮಳೆ ಚಟುವಟಿಕೆ ಮುಂದುವರಿಕೆ

23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…

21 hours ago

ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ

ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…

2 days ago

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…

2 days ago

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…

3 days ago

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್

ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…

3 days ago