ಅಡಿಕೆ ಎಲೆಚುಕ್ಕೆ ರೋಗ | ಔಷಧ ವಿತರಣೆಗೆ ಸೂಕ್ತ ಕ್ರಮ | ಅಡಿಕೆ ಬೆಳೆಗಾರರ ಸಮಸ್ಯೆಗಳ ಬಗ್ಗೆ ಸರ್ಕಾರಕ್ಕೆ ಮಾಹಿತಿ | ಸಚಿವ ಅಂಗಾರ |

October 2, 2022
11:14 AM

ಅಡಿಕೆ ಮರಗಳನ್ನು ಕಾಡುತ್ತಿರುವ ಎಲೆಚುಕ್ಕೆ ರೋಗಕ್ಕೆ ಸೂಕ್ತ ಪರಿಹಾರ ಕಾಣುವ ನಿಟ್ಟಿನಲ್ಲಿ ಕೃಷಿಕರಿಗೆ ಉಚಿತ ಔಷಧಿ ನೀಡಲು ಕ್ರಮ ಕೈಗೊಳ್ಳಲಾಗುತ್ತದೆ ಎಂದು  ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್‌. ಅಂಗಾರ ತಿಳಿಸಿದ್ದಾರೆ.

ಸುಳ್ಯದಲ್ಲಿ ಮಾತನಾಡಿದ ಅವರು ಅಡಿಕೆ ಹಳದಿ ಎಲೆರೋಗ ಹಾಗೂ ಎಲೆಚುಕ್ಕೆ ರೋಗ ಈಗ ಗಂಭೀರ ಸ್ವರೂಪದಲ್ಲಿ ಅಡಿಕೆ ಕೃಷಿಕರನ್ನು ಕಾಡುತ್ತಿದೆ. ಈ ಬಗ್ಗೆ ಇತ್ತೀಚೆಗೆ ತೋಟಗಾರಿಕೆ ಸಚಿವ ಮುನಿರತ್ನ ಮತ್ತು ಗೃಹ ಸಚಿವ ಆರಗ ಜ್ಞಾನೇಂದ್ರ ಅವರೊಂದಿಗೆ ಬೆಂಗಳೂರಿನಲ್ಲಿ ಸಭೆ ನಡೆಸಲಾಗಿತ್ತು. ಅಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಯ ಬಗ್ಗೆ ಗಮನಕ್ಕೆ ತರಲಾಗಿದೆ. ಸುಳ್ಯ ಸೇರಿದಂತೆ ದಕ ಜಿಲ್ಲೆಯ ಅಡಿಕೆ ಬೆಳೆಗಾರರ ಸಮಸ್ಯೆಯ ಬಗ್ಗೆ ಗಮನಕ್ಕೆ ತರಲಾಗಿದೆ. ಸದ್ಯದಲ್ಲೇ ಸುಳ್ಯಕ್ಕೆ ತೋಟಗಾರಿಕೆ ಸಚಿವರು ಬಂದು ರೈತರ ಅಭಿಪ್ರಾಯ ಸಂಗ್ರಹಿಸುವರು ಎಂದು ಅವರು ಹೇಳಿದರು. ಇದರ ಜೊತೆಗೆ ದೋಟಿಗೆ ಸಹಾಯಧನ ನೀಡುವ ಬಗ್ಗೆಯೂ ಸರ್ಕಾರ ಮಟ್ಟದಲ್ಲಿ ಚಿಂತನೆ ನಡೆದಿದೆ ಎಂದು ಹೇಳಿದರು.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ – ಭಾರತೀಯ ರೈತರಿಗೆ ಏನು ಸಂದೇಶ?
March 14, 2026
7:21 AM
by: ದ ರೂರಲ್ ಮಿರರ್.ಕಾಂ
ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಬಲಿ; ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರ ಆಕ್ರೋಶ
March 14, 2026
7:01 AM
by: ಮಿರರ್‌ ಡೆಸ್ಕ್
ಹಾಲಿನಲ್ಲಿ ಕಲಬೆರಕೆ ಪತ್ತೆಗೆ ವಿಶೇಷ ಕಿಟ್‌
March 14, 2026
6:55 AM
by: ಮಿರರ್‌ ಡೆಸ್ಕ್
ಸೌದೆ ಬೇಡಿಕೆ ಏರಿಕೆ ಹಿನ್ನೆಲೆ | ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ ಖಂಡ್ರೆ ಕಟ್ಟುನಿಟ್ಟಿನ ಸೂಚನೆ
March 13, 2026
10:24 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror