Advertisement
ಸುದ್ದಿಗಳು

ಅಡಿಕೆ ಎಲೆಚುಕ್ಕೆ ರೋಗ | ಔಷಧ ವಿತರಣೆಗೆ ಸೂಕ್ತ ಕ್ರಮ | ಅಡಿಕೆ ಬೆಳೆಗಾರರ ಸಮಸ್ಯೆಗಳ ಬಗ್ಗೆ ಸರ್ಕಾರಕ್ಕೆ ಮಾಹಿತಿ | ಸಚಿವ ಅಂಗಾರ |

Share

ಅಡಿಕೆ ಮರಗಳನ್ನು ಕಾಡುತ್ತಿರುವ ಎಲೆಚುಕ್ಕೆ ರೋಗಕ್ಕೆ ಸೂಕ್ತ ಪರಿಹಾರ ಕಾಣುವ ನಿಟ್ಟಿನಲ್ಲಿ ಕೃಷಿಕರಿಗೆ ಉಚಿತ ಔಷಧಿ ನೀಡಲು ಕ್ರಮ ಕೈಗೊಳ್ಳಲಾಗುತ್ತದೆ ಎಂದು  ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್‌. ಅಂಗಾರ ತಿಳಿಸಿದ್ದಾರೆ.

ಸುಳ್ಯದಲ್ಲಿ ಮಾತನಾಡಿದ ಅವರು ಅಡಿಕೆ ಹಳದಿ ಎಲೆರೋಗ ಹಾಗೂ ಎಲೆಚುಕ್ಕೆ ರೋಗ ಈಗ ಗಂಭೀರ ಸ್ವರೂಪದಲ್ಲಿ ಅಡಿಕೆ ಕೃಷಿಕರನ್ನು ಕಾಡುತ್ತಿದೆ. ಈ ಬಗ್ಗೆ ಇತ್ತೀಚೆಗೆ ತೋಟಗಾರಿಕೆ ಸಚಿವ ಮುನಿರತ್ನ ಮತ್ತು ಗೃಹ ಸಚಿವ ಆರಗ ಜ್ಞಾನೇಂದ್ರ ಅವರೊಂದಿಗೆ ಬೆಂಗಳೂರಿನಲ್ಲಿ ಸಭೆ ನಡೆಸಲಾಗಿತ್ತು. ಅಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಯ ಬಗ್ಗೆ ಗಮನಕ್ಕೆ ತರಲಾಗಿದೆ. ಸುಳ್ಯ ಸೇರಿದಂತೆ ದಕ ಜಿಲ್ಲೆಯ ಅಡಿಕೆ ಬೆಳೆಗಾರರ ಸಮಸ್ಯೆಯ ಬಗ್ಗೆ ಗಮನಕ್ಕೆ ತರಲಾಗಿದೆ. ಸದ್ಯದಲ್ಲೇ ಸುಳ್ಯಕ್ಕೆ ತೋಟಗಾರಿಕೆ ಸಚಿವರು ಬಂದು ರೈತರ ಅಭಿಪ್ರಾಯ ಸಂಗ್ರಹಿಸುವರು ಎಂದು ಅವರು ಹೇಳಿದರು. ಇದರ ಜೊತೆಗೆ ದೋಟಿಗೆ ಸಹಾಯಧನ ನೀಡುವ ಬಗ್ಗೆಯೂ ಸರ್ಕಾರ ಮಟ್ಟದಲ್ಲಿ ಚಿಂತನೆ ನಡೆದಿದೆ ಎಂದು ಹೇಳಿದರು.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

23 hours ago

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

2 days ago

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

2 days ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

2 days ago

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುತ್ತಿದೆಯೇ? – ಹೊಸ ಅಧ್ಯಯನದ ಎಚ್ಚರಿಕೆ

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…

2 days ago

ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ

ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…

2 days ago