ಸುದ್ದಿಗಳು

ಅಗತ್ಯ ಔಷಧಗಳ ಬೆಲೆಯಲ್ಲಿ ಶೇ 12.12 ರಷ್ಟು ಹೆಚ್ಚಳ | ಜನೌಷಧಿಯಿಂದ ಔಷಧ ಖರೀದಿಸುವಂತೆ ತಜ್ಞರ ಸಲಹೆ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಅಗತ್ಯ ಔಷಧಗಳ ಬೆಲೆಯನ್ನು ಶೇ 12.12 ರಷ್ಟು ಏರಿಕೆ ಮಾಡಲು ರಾಷ್ಟ್ರೀಯ ಔಷಧೀಯ ಬೆಲೆ ಪ್ರಾಧಿಕಾರ ಅನುಮೋದನೆ ನೀಡಿದ್ದು, ಬೆಲೆ ಏರಿಕೆ ಹಿನ್ನೆಲೆಯಲ್ಲಿ ಜನೌಷಧಿ ಕೇಂದ್ರಗಳಲ್ಲಿ ಔಷಧಿಗಳ ಖರೀದಿ ಮಾಡುವಂತೆ ತಜ್ಞರು ಸಲಹೆ ನೀಡಿದ್ದಾರೆ.

Advertisement
Advertisement

ಖಾಸಗಿ ಮತ್ತು ಸರ್ಕಾರಿ ವ್ಯವಸ್ಥೆಗಳಲ್ಲಿ ಚಿಕಿತ್ಸಾ ವೆಚ್ಚವನ್ನು ಹೆಚ್ಚಳ ಮಾಡಿರುವುದರಿಂದ ಇದು ಗ್ರಾಹಕರ ಮೇಲೆ ಹೆಚ್ಚಿನ ಪರಿಣಾಮ ಬೀರಲಿದೆ ಎಂದು ಫಾರ್ಮಸಿ ಕೌನ್ಸಿಲ್ ಆಫ್ ಇಂಡಿಯಾ (ಪಿಸಿಐ) ನಿವೃತ್ತ ಉಪ ನಿರ್ದೇಶಕ ಪಿಎಸ್ ಭಗವಾನ್ ಅವರು ಹೇಳಿದ್ದಾರೆ.

ವಿಶೇಷವಾಗಿ ಬಡ ಹಾಗೂ ಮಧ್ಯಮ ಕುಟುಂಬಗಳ ಮೇಲೆ ಇದರ ಪರಿಣಾಮ ಹೆಚ್ಚಾಗಿ ಬೀರಲಿದ್ದು, ಇಂತಹವರು ಜನೌಷಧಿ ಕೇಂದ್ರಗಳಲ್ಲಿ ಔಷಧಿಗಳನ್ನು ಖರೀದಿ ಮಾಡಬೇಕು. ಜನೌಷಧಿ ಕೇಂದ್ರಗಳಲ್ಲಿನ ಔಷಧಿಯೂ ಬ್ರ್ಯಾಂಡೆಡ್ ಔಷಧಿಗಳಂತೆಯೇ ಉತ್ತಮವಾಗಿರುತ್ತದೆ ಮತ್ತು ಹೆಚ್ಚು ಅಗ್ಗವಾಗಿರುತ್ತದೆ ಎಂದು ತಜ್ಞರು ಹೇಳಿದ್ದಾರೆ.

ಆಸ್ಪತ್ರೆಗಳು ಔಷಧಿಗಳನ್ನು ದೊಡ್ಡ ಪ್ರಮಾಣದಲ್ಲಿ ಖರೀದಿ ಮಾಡುವುದರಿಂದ ಅವರಿಗೆ ರಿಯಾಯಿತಿ ದರದಲ್ಲಿ ಔಷಧಿಗಳನ್ನು ನೀಡಲಾಗುತ್ತದೆ. ಆದರೆ, ಇದರ ಬರೆ ಸಾಮಾನ್ಯ ಜನರ ಮೇಲೆ ಬೀಳುತ್ತದೆ ಎಂದು ಭಗವಾನ್ ಅವರು ತಿಳಿಸಿದ್ದಾರೆ.

ಸಗಟು ಬೆಲೆ ಸೂಚ್ಯಂಕ (ಡಬ್ಲ್ಯುಪಿಐ), ಅಂತಾರಾಷ್ಟ್ರೀಯ ಮಾರುಕಟ್ಟೆಯ ಮೂಲಕ ಔಷಧಗಳ ಲಭ್ಯತೆ/ಆಮದು ಮತ್ತು ಮಾರುಕಟ್ಟೆ ವೆಚ್ಚಗಳಿಂದಾಗಿ ಬ್ರಾಂಡೆಡ್ ಔಷಧಗಳ ಬೆಲೆಯಲ್ಲಿ ಏರಿಕೆಗಳು ಕಂಡು ಬಂದಿದೆ ಎಂದು ಭಗವಾನ್ ಅವರು ವರಿಸಿದ್ದಾರೆ.

Advertisement

ಬೆಂಗಳೂರಿನ ಫೀಲ್ಡ್ ಆಫೀಸರ್ ಅನುಪಮ್ ಪಾಠಕ್ ಅವರು ಮಾತನಾಡಿ, ಜನೌಷಧಿ ಕೇಂದ್ರಗಳು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿವೆ. ಹಲವು ಕೇಂದ್ರಗಳ ವಾರ್ಷಿಕ ಆದಾಯ 1 ಕೋಟಿಗೂ ಹೆಚ್ಚು ದಾಟಿವೆ ಎಂದು ತಿಳಿಸಿದ್ದಾರೆ.

ಕೈಗೆಟಕುವ ದರದಲ್ಲಿ ಗುಣಮಟ್ಟದ ಔಷಧಗಳನ್ನು ಪೂರೈಸುವುದು ಈ ಕೇಂದ್ರಗಳ ಉದ್ದೇಶವಾಗಿತ್ತು. ಬೆಲೆ ಏರಿಕೆಯು ಕಡಿಮೆ ಆದಾಯವುಳ್ಳ, ಬಡವರ ಮೇಲೆ ಪರಿಣಾಮ ಬೀರಲಿದೆ. ಬಹುತೇಕ ಜನರು ತಾವು ಗಳಿಸುವ ಹಣವನ್ನು ದುಬಾರಿ ಔಷಧಿಗಳ ಖರೀದಿಗೆ ಖರ್ಚು ಮಾಡಬೇಕಾಗುತ್ತದೆ ಎಂದು ಹೇಳಿದ್ದಾರೆ.

ಆರ್ಥಿಕವಾಗಿ ಹಿಂದುಳಿದ ಜನರಿಗೆ ಅನುಕೂಲವಾಗುವಂತೆ ಇಂತಹ ಔಷಧಿ ಕೇಂದ್ರಗಳನ್ನು ದೇಶಾದ್ಯಂತ ವಿಸ್ತರಿಸಲು ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ. ಪ್ರಸ್ತುತ, ಕರ್ನಾಟಕದ 31 ಜಿಲ್ಲೆಗಳಲ್ಲಿ 1,050 ಕೇಂದ್ರಗಳಿದ್ದು, ಈ ಕೇಂದ್ರಗಳಲ್ಲಿ 1,076 ಔಷಧಿಗಳು ಮತ್ತು 145 ಶಸ್ತ್ರಚಿಕಿತ್ಸಾ ವಸ್ತುಗಳನ್ನು ಅಗ್ಗದ ದರದಲ್ಲಿ ಮಾರಾಟ ಮಾಡಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಪ್ರೋಟಾನ್ ಥೆರಪಿ ಮೂಲಕ ಕ್ಯಾನ್ಸರ್ ಗೆ ಚಿಕಿತ್ಸೆ | ಕಿದ್ವಾಯಿ ಆಸ್ಪತ್ರೆಯಲ್ಲಿ ಸೌಲಭ್ಯ ಜಾರಿಗೆ ಪ್ರಸ್ತಾವನೆ

ಅತ್ಯಾಧುನಿಕವಾದ ಪ್ರೋಟಾನ್ ರೇಡಿಯೋ ಥೆರಪಿ ಮೂಲಕ ಕ್ಯಾನ್ಸರ್ ಶುಶ್ರೂಷೆಗೆ ಅಗತ್ಯ ಆರ್ಥಿಕ ನೆರವು…

2 hours ago

ನೈರುತ್ಯ ಮುಂಗಾರು ಉತ್ತರ ಒಳನಾಡಿನಲ್ಲಿ ತೀವ್ರ  | ರಾಜ್ಯದ ವಿವಿದೆಡೆ ಮಳೆ

ರಾಜ್ಯದಲ್ಲಿ ನೈರುತ್ಯ ಮುಂಗಾರು ಉತ್ತರ ಒಳನಾಡಿನಲ್ಲಿ ತೀವ್ರವಾಗಿದ್ದು, ದಕ್ಷಿಣ ಒಳನಾಡಿನಲ್ಲಿ ಸಕ್ರಿಯವಾಗಿದ್ದು, ಕರಾವಳಿಯಲ್ಲಿ…

2 hours ago

ಹಾವೇರಿ ಜಿಲ್ಲೆಯಲ್ಲಿ 441 ಸಾಕ್ಷರತಾ ಕಲಿಕಾ ಕೇಂದ್ರ ಸ್ಥಾಪನೆ

ಹಾವೇರಿ ಜಿಲ್ಲೆಯಲ್ಲಿರುವ ಅನಕ್ಷರಸ್ಥರನ್ನು ಅಕ್ಷರಸ್ಥರನ್ನಾಗಿ ಮಾಡಲು ನಿರಂತರವಾಗಿ ಪ್ರಯತ್ನಿಸಲಾಗುತ್ತಿದ್ದು, ಸಾಕ್ಷರತಾ ಕಾರ್ಯಕ್ರಮದಡಿ ಜಿಲ್ಲೆಯ…

2 hours ago

ಹವಾಮಾನ ವರದಿ | 09-06-2025 | ಜೂನ್ 10 ರಿಂದ ಮಳೆಯ ಪ್ರಮಾಣ ಹೆಚ್ಚಾಗುವ ನಿರೀಕ್ಷೆ ಇದೆ | ಮುಂದಿನ 10 ದಿನಗಳವರೆಗೂ ಉತ್ತಮ ಮಳೆ ಸಾಧ್ಯತೆ|

ಅರಬ್ಬಿ ಸಮುದ್ರದ ಮೇಲ್ಮೈ ಸುಳಿಗಾಳೀಯು ಪಶ್ಚಿಮಾಭಿಮುಖವಾಗಿ ಚಲಿಸುತ್ತಿದ್ದು, ಇದೇ ಸಂದರ್ಭದಲ್ಲಿ ಬಂಗಾಳಕೊಲ್ಲಿಯಲ್ಲೂ ಸಣ್ಣ…

12 hours ago

ಅಡಿಕೆಯ ಮೌಲ್ಯವರ್ಧಿತ ಉತ್ಪನ್ನಗಳು

ಭಾರತದಲ್ಲಿ ಉತ್ಪಾದನೆ ಆಗುತ್ತಿರುವ ಒಟ್ಟು ಅಡಿಕೆಯ ಪ್ರಮಾಣ ಸುಮಾರು ಹದಿನಾರು ಲಕ್ಷ ಟನ್,…

13 hours ago

ವಿಶ್ವದ ಅತೀ ಎತ್ತರದ ಚೆನಾಬ್ ರೈಲ್ವೆ ಸೇತುವೆ ನಿರ್ಮಾಣ | ಬೆಂಗಳೂರಿನ ಜಿ.ಮಾಧವಿ ಲತಾ ಪ್ರಮುಖ ಪಾತ್ರ | ಭೂತಾಂತ್ರಿಕ ಸಲಹೆಗಾರರಾಗಿ 17 ವರ್ಷಗಳ ಕಾಲ ಕೊಡುಗೆ

1,486 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ಚೆನಾಬ್ ಸೇತುವೆಯನ್ನು ಸರ್ಕಾರವು "ಇತ್ತೀಚಿನ ಇತಿಹಾಸದಲ್ಲಿ…

16 hours ago