Advertisement
ಸುದ್ದಿಗಳು

ಅಗತ್ಯ ಔಷಧಗಳ ಬೆಲೆಯಲ್ಲಿ ಶೇ 12.12 ರಷ್ಟು ಹೆಚ್ಚಳ | ಜನೌಷಧಿಯಿಂದ ಔಷಧ ಖರೀದಿಸುವಂತೆ ತಜ್ಞರ ಸಲಹೆ |

Share

ಅಗತ್ಯ ಔಷಧಗಳ ಬೆಲೆಯನ್ನು ಶೇ 12.12 ರಷ್ಟು ಏರಿಕೆ ಮಾಡಲು ರಾಷ್ಟ್ರೀಯ ಔಷಧೀಯ ಬೆಲೆ ಪ್ರಾಧಿಕಾರ ಅನುಮೋದನೆ ನೀಡಿದ್ದು, ಬೆಲೆ ಏರಿಕೆ ಹಿನ್ನೆಲೆಯಲ್ಲಿ ಜನೌಷಧಿ ಕೇಂದ್ರಗಳಲ್ಲಿ ಔಷಧಿಗಳ ಖರೀದಿ ಮಾಡುವಂತೆ ತಜ್ಞರು ಸಲಹೆ ನೀಡಿದ್ದಾರೆ.

ಖಾಸಗಿ ಮತ್ತು ಸರ್ಕಾರಿ ವ್ಯವಸ್ಥೆಗಳಲ್ಲಿ ಚಿಕಿತ್ಸಾ ವೆಚ್ಚವನ್ನು ಹೆಚ್ಚಳ ಮಾಡಿರುವುದರಿಂದ ಇದು ಗ್ರಾಹಕರ ಮೇಲೆ ಹೆಚ್ಚಿನ ಪರಿಣಾಮ ಬೀರಲಿದೆ ಎಂದು ಫಾರ್ಮಸಿ ಕೌನ್ಸಿಲ್ ಆಫ್ ಇಂಡಿಯಾ (ಪಿಸಿಐ) ನಿವೃತ್ತ ಉಪ ನಿರ್ದೇಶಕ ಪಿಎಸ್ ಭಗವಾನ್ ಅವರು ಹೇಳಿದ್ದಾರೆ.

ವಿಶೇಷವಾಗಿ ಬಡ ಹಾಗೂ ಮಧ್ಯಮ ಕುಟುಂಬಗಳ ಮೇಲೆ ಇದರ ಪರಿಣಾಮ ಹೆಚ್ಚಾಗಿ ಬೀರಲಿದ್ದು, ಇಂತಹವರು ಜನೌಷಧಿ ಕೇಂದ್ರಗಳಲ್ಲಿ ಔಷಧಿಗಳನ್ನು ಖರೀದಿ ಮಾಡಬೇಕು. ಜನೌಷಧಿ ಕೇಂದ್ರಗಳಲ್ಲಿನ ಔಷಧಿಯೂ ಬ್ರ್ಯಾಂಡೆಡ್ ಔಷಧಿಗಳಂತೆಯೇ ಉತ್ತಮವಾಗಿರುತ್ತದೆ ಮತ್ತು ಹೆಚ್ಚು ಅಗ್ಗವಾಗಿರುತ್ತದೆ ಎಂದು ತಜ್ಞರು ಹೇಳಿದ್ದಾರೆ.

ಆಸ್ಪತ್ರೆಗಳು ಔಷಧಿಗಳನ್ನು ದೊಡ್ಡ ಪ್ರಮಾಣದಲ್ಲಿ ಖರೀದಿ ಮಾಡುವುದರಿಂದ ಅವರಿಗೆ ರಿಯಾಯಿತಿ ದರದಲ್ಲಿ ಔಷಧಿಗಳನ್ನು ನೀಡಲಾಗುತ್ತದೆ. ಆದರೆ, ಇದರ ಬರೆ ಸಾಮಾನ್ಯ ಜನರ ಮೇಲೆ ಬೀಳುತ್ತದೆ ಎಂದು ಭಗವಾನ್ ಅವರು ತಿಳಿಸಿದ್ದಾರೆ.

ಸಗಟು ಬೆಲೆ ಸೂಚ್ಯಂಕ (ಡಬ್ಲ್ಯುಪಿಐ), ಅಂತಾರಾಷ್ಟ್ರೀಯ ಮಾರುಕಟ್ಟೆಯ ಮೂಲಕ ಔಷಧಗಳ ಲಭ್ಯತೆ/ಆಮದು ಮತ್ತು ಮಾರುಕಟ್ಟೆ ವೆಚ್ಚಗಳಿಂದಾಗಿ ಬ್ರಾಂಡೆಡ್ ಔಷಧಗಳ ಬೆಲೆಯಲ್ಲಿ ಏರಿಕೆಗಳು ಕಂಡು ಬಂದಿದೆ ಎಂದು ಭಗವಾನ್ ಅವರು ವರಿಸಿದ್ದಾರೆ.

ಬೆಂಗಳೂರಿನ ಫೀಲ್ಡ್ ಆಫೀಸರ್ ಅನುಪಮ್ ಪಾಠಕ್ ಅವರು ಮಾತನಾಡಿ, ಜನೌಷಧಿ ಕೇಂದ್ರಗಳು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿವೆ. ಹಲವು ಕೇಂದ್ರಗಳ ವಾರ್ಷಿಕ ಆದಾಯ 1 ಕೋಟಿಗೂ ಹೆಚ್ಚು ದಾಟಿವೆ ಎಂದು ತಿಳಿಸಿದ್ದಾರೆ.

ಕೈಗೆಟಕುವ ದರದಲ್ಲಿ ಗುಣಮಟ್ಟದ ಔಷಧಗಳನ್ನು ಪೂರೈಸುವುದು ಈ ಕೇಂದ್ರಗಳ ಉದ್ದೇಶವಾಗಿತ್ತು. ಬೆಲೆ ಏರಿಕೆಯು ಕಡಿಮೆ ಆದಾಯವುಳ್ಳ, ಬಡವರ ಮೇಲೆ ಪರಿಣಾಮ ಬೀರಲಿದೆ. ಬಹುತೇಕ ಜನರು ತಾವು ಗಳಿಸುವ ಹಣವನ್ನು ದುಬಾರಿ ಔಷಧಿಗಳ ಖರೀದಿಗೆ ಖರ್ಚು ಮಾಡಬೇಕಾಗುತ್ತದೆ ಎಂದು ಹೇಳಿದ್ದಾರೆ.

ಆರ್ಥಿಕವಾಗಿ ಹಿಂದುಳಿದ ಜನರಿಗೆ ಅನುಕೂಲವಾಗುವಂತೆ ಇಂತಹ ಔಷಧಿ ಕೇಂದ್ರಗಳನ್ನು ದೇಶಾದ್ಯಂತ ವಿಸ್ತರಿಸಲು ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ. ಪ್ರಸ್ತುತ, ಕರ್ನಾಟಕದ 31 ಜಿಲ್ಲೆಗಳಲ್ಲಿ 1,050 ಕೇಂದ್ರಗಳಿದ್ದು, ಈ ಕೇಂದ್ರಗಳಲ್ಲಿ 1,076 ಔಷಧಿಗಳು ಮತ್ತು 145 ಶಸ್ತ್ರಚಿಕಿತ್ಸಾ ವಸ್ತುಗಳನ್ನು ಅಗ್ಗದ ದರದಲ್ಲಿ ಮಾರಾಟ ಮಾಡಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

3 hours ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

3 hours ago

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುತ್ತಿದೆಯೇ? – ಹೊಸ ಅಧ್ಯಯನದ ಎಚ್ಚರಿಕೆ

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…

3 hours ago

ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ

ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…

14 hours ago

ಗುಟ್ಕಾ ನಿಷೇಧದ ಹೆಸರಿನಲ್ಲಿ ಅಡಿಕೆ ಬೆಳೆಗಾರರಿಗೆ ತೊಂದರೆ ಆಗದಂತೆ ಸರ್ಕಾರ ಸ್ಪಷ್ಟ ಮಾರ್ಗಸೂಚಿ ನೀಡಲಿ

ಗುಟ್ಕಾ ಮತ್ತು ಪಾನ್‌ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…

14 hours ago

ತಂಬಾಕು ನಿಷೇಧ ಜಾರಿ: ಅಡಿಕೆ ಬೆಳೆಗಾರರ ಹಿತ ಕಾಪಾಡಲು ಸ್ಪಷ್ಟ ಚೌಕಟ್ಟು ರೂಪಿಸಿ – ಕ್ಯಾಂಪ್ಕೊ

ತಂಬಾಕು ಮತ್ತು ನಿಕೋಟಿನ್ ಅಂಶವುಳ್ಳ ಉತ್ಪನ್ನಗಳ ನಿಷೇಧ ಜಾರಿಯಲ್ಲಿ ಅಡಿಕೆ ಬೆಳೆಗಾರರು ಹಾಗೂ…

14 hours ago