Advertisement
MIRROR FOCUS

₹250 ಕೋಟಿ ಅಡಿಕೆ ತೆರಿಗೆ ವಂಚನೆ | ಮೀರತ್‌ನಲ್ಲಿ DGGI ದಾಳಿ, 4 ಮಂದಿ ಬಂಧನ

Share

ಅಡಿಕೆ ವ್ಯಾಪಾರದಲ್ಲಿ ಸಂಭವಿಸಿರುವ ದೊಡ್ಡ ಮಟ್ಟದ ತೆರಿಗೆ ವಂಚನಾ ಪ್ರಕರಣವೊಂದನ್ನು ಕೇಂದ್ರ ಸರಕಾರದ ಸರಕು ಮತ್ತು ಸೇವಾ ತೆರಿಗೆ ಗುಪ್ತಚರ ನಿರ್ದೇಶನಾಲಯ (DGGI) ಪತ್ತೆಹಚ್ಚಿದೆ. ಮೀರತ್ ವಲಯದಲ್ಲಿ ಅಡಿಕೆ ಸಾಗಣೆ ಮತ್ತು ವಿತರಣೆಯ ಹೆಸರಿನಲ್ಲಿ ನಡೆದಿರುವ ₹250 ಕೋಟಿ ಮೊತ್ತದ ಜಿಎಸ್‌ಟಿ ತಪ್ಪಿಸುವ ಜಾಲವನ್ನು ಡಿಜಿಜಿಐ ಅಧಿಕಾರಿಗಳು ಭೇದಿಸಿದ್ದು, ಇದಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಬಂಧಿಸಲಾಗಿದೆ.

ಅಧಿಕಾರಿಗಳ ಪ್ರಕಾರ, ಅಡಿಕೆ ಸಾಗಣೆಗಾಗಿ ನಕಲಿ ದಾಖಲೆಗಳು, ಬೋಗಸ್ ಕಂಪನಿಗಳು, ಅಸಲಿ ಅಲ್ಲದ ಇನ್ವಾಯ್ಸ್‌ಗಳನ್ನು ಬಳಸಿಕೊಂಡು ಜಿಎಸ್‌ಟಿ ತಪ್ಪಿಸುವ ಜಾಲವನ್ನು ಮಾಡಲಾಗಿತ್ತು.  ವ್ಯಾಪಾರ ಜಾಲವು ಹಲವು ಜಿಲ್ಲೆಗಳ ಮೂಲಕ ವಿಸ್ತರಿಸಿಕೊಂಡಿದ್ದು, ಮೀರತ್ ವಲಯ ಪ್ರಮುಖ ಕೇಂದ್ರವಾಗಿತ್ತು ಎಂದು ತಿಳಿದುಬಂದಿದೆ.

ಡಿಜಿಜಿಐ ದಾಳಿ ವೇಳೆ ಮಹತ್ವದ ಸಾಕ್ಷ್ಯ ವಶಪಡಿಸಿಕೊಂಡಿದ್ದು, ಡಿಜಿಜಿಐ ನಡೆಸಿದ ದಾಳಿ ವೇಳೆ ಲೆಕ್ಕಪತ್ರಗಳು, ವ್ಯಾಪಾರ ದಾಖಲೆಗಳು, ಡಿಜಿಟಲ್ ಸಾಕ್ಷ್ಯಗಳು, ಅನುಮಾನಾಸ್ಪದ ವಿತರಣಾ ದಾಖಲೆಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಈ ಜಾಲವು ಇನ್ನಷ್ಟು ದೊಡ್ಡ ಮಟ್ಟದಲ್ಲಿ ಕಾರ್ಯನಿರ್ವಹಿಸಿರುವ ಸಾಧ್ಯತೆ ಇರುವುದರಿಂದ ತನಿಖೆಯನ್ನು ವಿಸ್ತರಿಸಲಾಗುತ್ತಿದೆ. ಭಾರತದಾದ್ಯಂತ ಸುಮಾರು ₹5,000 ಕೋಟಿ ಮೌಲ್ಯದ ಅಡಿಕೆಯನ್ನು ಪಾನ್ ಮಸಾಲಾ ತಯಾರಕರಿಗೆ ಸಾಗಿಸಿದೆ ಎಂದು ಆರೋಪಿಸಲಾಗಿದೆ.

ಅಡಿಕೆ ಮಾರುಕಟ್ಟೆ ಮತ್ತು ಕೃಷಿಕರ ಬದುಕಿಗೆ ಅತ್ಯಂತ ಮುಖ್ಯವಾದ ಬೆಳೆ ಅಡಿಕೆ. ಆದರೆ ಇಂತಹ ವಂಚನಾ ಚಟುವಟಿಕೆಗಳು ವ್ಯಾಪಾರದ ನಂಬಿಕೆಗೆ ಧಕ್ಕೆ, ಮಾರುಕಟ್ಟೆಯಲ್ಲಿ ಅಸ್ಥಿರತೆ, ಕೃಷಿಕರ ಆದಾಯಕ್ಕೆ ಪರೋಕ್ಷ ಹೊಡೆತ ಉಂಟು ಮಾಡುತ್ತದೆ ಎಂದು  ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ.

ಈ ಪ್ರಕರಣವು ಅಡಿಕೆ ವ್ಯಾಪಾರದಲ್ಲಿ ನಡೆಯುತ್ತಿರುವ ಅಕ್ರಮ ವ್ಯವಹಾರಗಳ ಮೇಲೆ ಬೆಳಕು ಚೆಲ್ಲಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಬಂಧನಗಳ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ಇದನ್ನೂ ಓದಿ….

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬಿ ಎಸ್ ಎನ್ ಎಲ್ ವಿರುದ್ಧ ಸುಳ್ಯದ ಗ್ರಾಹಕನಿಗೆ ಜಯ – ಇಂಟರ್ನೆಟ್ ಸೇವೆಯಲ್ಲಿ ವ್ಯತ್ಯಯಕ್ಕೆ ₹30,000 ಪರಿಹಾರ ಆದೇಶ..!

ಇಂಟರ್ನೆಟ್ ಸೇವೆ ವ್ಯತ್ಯಯಕ್ಕೆ ಸುಳ್ಯದ ಗ್ರಾಹಕನಿಗೆ ₹30,000 ಪರಿಹಾರ ನೀಡಲು ಆದೇಶ. ಬಿ…

4 hours ago

ಹವಾಮಾನ ವರದಿ | 01-05-2026 | ಮಳೆಯ ಚಟುವಟಿಕೆ ಕಡಿಮೆಯಾಗುತ್ತಾ? ಮೇ 2ರಿಂದ ಕೆಲವು ದಿನ ಮಳೆ ಕಡಿಮೆ, ಬಳಿಕ ಮತ್ತೆ ಚುರುಕು..!?

ಮೇ 2ರಿಂದ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಕಡಿಮೆಯಾಗುವ ಸೂಚನೆಗಳು ಕಂಡುಬರುತ್ತಿವೆ. ಮೇ…

4 hours ago

ಚಿಕ್ಕಮಗಳೂರಿನಲ್ಲಿ ದಾಳಿ – ಅಕ್ರಮವಾಗಿ ಸಂಗ್ರಹಿಸಿದ್ದ 181 ಯೂರಿಯಾ ಚೀಲಗಳು ಜಪ್ತಿ

ಚಿಕ್ಕಮಗಳೂರಿನಲ್ಲಿ ಅಕ್ರಮವಾಗಿ ಶೇಖರಿಸಿದ್ದ ಯೂರಿಯಾ ಗೊಬ್ಬರ ಜಪ್ತಿ ಮಾಡಲಾಗಿದೆ. 181 ಚೀಲಗಳು ಹಾಗೂ…

7 hours ago

ರಾಜ್ಯದ ಹಲವು ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ – ಮುಂದಿನ ಕೆಲ ದಿನ ಮಳೆ ಎಚ್ಚರಿಕೆ..!

ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲ ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ.…

7 hours ago

ಪದವಿಪೂರ್ವ ಶಿಕ್ಷಣ ಮತ್ತು ನೀಟ್ ಪರೀಕ್ಷೆಯ ಒತ್ತಡ : ಪರ್ಯಾಯ ದೃಷ್ಟಿಕೋನ

NEET ಪರೀಕ್ಷೆಯ ಒತ್ತಡದಿಂದ ವಿದ್ಯಾರ್ಥಿಗಳಲ್ಲಿ ಮಾನಸಿಕ ಸಮಸ್ಯೆಗಳು ಹೆಚ್ಚುತ್ತಿವೆ. ಒತ್ತಡರಹಿತ, ಅನುಭವಾಧಾರಿತ ಶಿಕ್ಷಣ…

8 hours ago

ಪೂರೈಕೆ ಕೊರತೆ, ಹೆಚ್ಚಿದ ಬೇಡಿಕೆ – ಮೇ ತಿಂಗಳಲ್ಲಿ ಅಡಿಕೆ ಮಾರುಕಟ್ಟೆ ಚೇತರಿಕೆಯತ್ತ..!

ಮೇ ತಿಂಗಳಲ್ಲಿ ಅಡಿಕೆ ಮಾರುಕಟ್ಟೆ ಚೇತರಿಕೆ ಕಂಡುಬಂದಿದ್ದು, ಹಳೆ ಚಾಲಿಗೆ ಭಾರೀ ಬೇಡಿಕೆ…

8 hours ago