Advertisement
MIRROR FOCUS

₹250 ಕೋಟಿ ಅಡಿಕೆ ತೆರಿಗೆ ವಂಚನೆ | ಮೀರತ್‌ನಲ್ಲಿ DGGI ದಾಳಿ, 4 ಮಂದಿ ಬಂಧನ

Share

ಅಡಿಕೆ ವ್ಯಾಪಾರದಲ್ಲಿ ಸಂಭವಿಸಿರುವ ದೊಡ್ಡ ಮಟ್ಟದ ತೆರಿಗೆ ವಂಚನಾ ಪ್ರಕರಣವೊಂದನ್ನು ಕೇಂದ್ರ ಸರಕಾರದ ಸರಕು ಮತ್ತು ಸೇವಾ ತೆರಿಗೆ ಗುಪ್ತಚರ ನಿರ್ದೇಶನಾಲಯ (DGGI) ಪತ್ತೆಹಚ್ಚಿದೆ. ಮೀರತ್ ವಲಯದಲ್ಲಿ ಅಡಿಕೆ ಸಾಗಣೆ ಮತ್ತು ವಿತರಣೆಯ ಹೆಸರಿನಲ್ಲಿ ನಡೆದಿರುವ ₹250 ಕೋಟಿ ಮೊತ್ತದ ಜಿಎಸ್‌ಟಿ ತಪ್ಪಿಸುವ ಜಾಲವನ್ನು ಡಿಜಿಜಿಐ ಅಧಿಕಾರಿಗಳು ಭೇದಿಸಿದ್ದು, ಇದಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಬಂಧಿಸಲಾಗಿದೆ.

ಅಧಿಕಾರಿಗಳ ಪ್ರಕಾರ, ಅಡಿಕೆ ಸಾಗಣೆಗಾಗಿ ನಕಲಿ ದಾಖಲೆಗಳು, ಬೋಗಸ್ ಕಂಪನಿಗಳು, ಅಸಲಿ ಅಲ್ಲದ ಇನ್ವಾಯ್ಸ್‌ಗಳನ್ನು ಬಳಸಿಕೊಂಡು ಜಿಎಸ್‌ಟಿ ತಪ್ಪಿಸುವ ಜಾಲವನ್ನು ಮಾಡಲಾಗಿತ್ತು.  ವ್ಯಾಪಾರ ಜಾಲವು ಹಲವು ಜಿಲ್ಲೆಗಳ ಮೂಲಕ ವಿಸ್ತರಿಸಿಕೊಂಡಿದ್ದು, ಮೀರತ್ ವಲಯ ಪ್ರಮುಖ ಕೇಂದ್ರವಾಗಿತ್ತು ಎಂದು ತಿಳಿದುಬಂದಿದೆ.

ಡಿಜಿಜಿಐ ದಾಳಿ ವೇಳೆ ಮಹತ್ವದ ಸಾಕ್ಷ್ಯ ವಶಪಡಿಸಿಕೊಂಡಿದ್ದು, ಡಿಜಿಜಿಐ ನಡೆಸಿದ ದಾಳಿ ವೇಳೆ ಲೆಕ್ಕಪತ್ರಗಳು, ವ್ಯಾಪಾರ ದಾಖಲೆಗಳು, ಡಿಜಿಟಲ್ ಸಾಕ್ಷ್ಯಗಳು, ಅನುಮಾನಾಸ್ಪದ ವಿತರಣಾ ದಾಖಲೆಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಈ ಜಾಲವು ಇನ್ನಷ್ಟು ದೊಡ್ಡ ಮಟ್ಟದಲ್ಲಿ ಕಾರ್ಯನಿರ್ವಹಿಸಿರುವ ಸಾಧ್ಯತೆ ಇರುವುದರಿಂದ ತನಿಖೆಯನ್ನು ವಿಸ್ತರಿಸಲಾಗುತ್ತಿದೆ. ಭಾರತದಾದ್ಯಂತ ಸುಮಾರು ₹5,000 ಕೋಟಿ ಮೌಲ್ಯದ ಅಡಿಕೆಯನ್ನು ಪಾನ್ ಮಸಾಲಾ ತಯಾರಕರಿಗೆ ಸಾಗಿಸಿದೆ ಎಂದು ಆರೋಪಿಸಲಾಗಿದೆ.

ಅಡಿಕೆ ಮಾರುಕಟ್ಟೆ ಮತ್ತು ಕೃಷಿಕರ ಬದುಕಿಗೆ ಅತ್ಯಂತ ಮುಖ್ಯವಾದ ಬೆಳೆ ಅಡಿಕೆ. ಆದರೆ ಇಂತಹ ವಂಚನಾ ಚಟುವಟಿಕೆಗಳು ವ್ಯಾಪಾರದ ನಂಬಿಕೆಗೆ ಧಕ್ಕೆ, ಮಾರುಕಟ್ಟೆಯಲ್ಲಿ ಅಸ್ಥಿರತೆ, ಕೃಷಿಕರ ಆದಾಯಕ್ಕೆ ಪರೋಕ್ಷ ಹೊಡೆತ ಉಂಟು ಮಾಡುತ್ತದೆ ಎಂದು  ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ.

ಈ ಪ್ರಕರಣವು ಅಡಿಕೆ ವ್ಯಾಪಾರದಲ್ಲಿ ನಡೆಯುತ್ತಿರುವ ಅಕ್ರಮ ವ್ಯವಹಾರಗಳ ಮೇಲೆ ಬೆಳಕು ಚೆಲ್ಲಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಬಂಧನಗಳ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ಇದನ್ನೂ ಓದಿ….

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 03-09-2026 | ಕರಾವಳಿ–ಮಲೆನಾಡಿನಲ್ಲಿ ಮತ್ತೆ ಮಳೆಯ ಸಾಧ್ಯತೆ…?

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…

4 hours ago

ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ

ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…

10 hours ago

ನಾವು ತಿನ್ನುವ ಆಹಾರದಲ್ಲಿ ಕೀಟನಾಶಕ – ಕರ್ನಾಟಕದಲ್ಲಿ 9,176 ಮಾದರಿಗಳಲ್ಲಿ 334 ಮಿತಿ ಮೀರಿವೆ – ದೇಶದ ಅಂಕಿ ಏನು ಹೇಳುತ್ತದೆ?

2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…

18 hours ago

ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ

ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…

22 hours ago

ಹವಾಮಾನ ವರದಿ | 02-09-2026 | ಉತ್ತರ ಭಾರತದ ವಾಯುಭಾರ ಕುಸಿತ ದುರ್ಬಲವಾಗುವ ಸಾಧ್ಯತೆ

ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…

1 day ago

ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ

ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್‌ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…

1 day ago