ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅತಿವೃಷ್ಟಿ ನಿರ್ವಹಣೆ ಕುರಿತು ಸಭೆ

May 31, 2025
9:08 PM

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತೀವ್ರ ಮಳೆಯಾಗುತ್ತಿದ್ದು, ಸಾರ್ವಜನಿಕರ ಜೀವಹಾನಿ ತಪ್ಪಿಸಲು ಸರಕಾರ ಗರಿಷ್ಠ ಆದ್ಯತೆ ನೀಡಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಮಂಗಳೂರಿನಲ್ಲಿ ಹಿರಿಯ ಅಧಿಕಾರಿಗಳೊಂದಿಗೆ ಜಿಲ್ಲೆಯ ಅತಿವೃಷ್ಟಿ ನಿರ್ವಹಣೆ ಕುರಿತು ಸಭೆ ನಡೆಸಿದ ಅವರು, ಸಂಭಾವ್ಯ ಭೂಕುಸಿತ ಪ್ರದೇಶಗಳನ್ನು ಮೊದಲೇ ಗುರುತಿಸಿ, ಅಲ್ಲಿ ನೆಲೆಸಿರುವವರನ್ನು ಸ್ಥಳಾಂತರಿಸಬೇಕು. ಸ್ಥಳೀಯ ಮಟ್ಟದ ಅಧಿಕಾರಿಗಳು ಸಾರ್ವಜನಿಕರ ಅಹವಾಲುಗಳಿಗೆ ತಕ್ಷಣವೇ ಸ್ಪಂದಿಸಬೇಕು. ತಾಲೂಕು ಮತ್ತು ಜಿಲ್ಲಾ ಮಟ್ಟದ ಕಂಟ್ರೋಲ್ ರೂಂಗಳು ದಿನದ 24 ಗಂಟೆ ಕಾರ್ಯನಿರ್ವಹಿಸಬೇಕು ಎಂದು ಸೂಚನೆ ನೀಡಿದರು. ನಗರದ ಪಂಪ್ ವೆಲ್, ಕೊಟ್ಟಾರಚೌಕಿ, ಕೆತ್ತಿಕಲ್ ಸೇರಿದಂತೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಪ್ರತಿವರ್ಷ ಮಳೆಯಿಂದ ಸಮಸ್ಯೆ ಉಂಟಾಗುತ್ತಿರುವ ಸ್ಥಳಗಳಲ್ಲಿ ಶಾಶ್ವತ ಪರಿಹಾರಕ್ಕೆ ಹೆದ್ದಾರಿ ಪ್ರಾಧಿಕಾರವು ಸೂಕ್ತ ತಂತ್ರಜ್ಞಾನ ಅನ್ವಯಿಸಿ ಪರಿಹಾರ ಕಂಡುಕೊಳ್ಳಬೇಕು ಎಂದು ಸಚಿವ ದಿನೇಶ್ ಗುಂಡೂರಾವ್, ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕರಿಗೆ ಸೂಚಿಸಿದರು. ನಂತರ ಅವರು, ಪ್ರಾಕೃತಿಕ ವಿಕೋಪದಿಂದ ಜಿಲ್ಲೆಯಲ್ಲಿ ಮೃತಪಟ್ಟವರ ಮನೆಗಳಿಗೆ ಭೇಟಿ ನೀಡಿ, ಕುಟುಂಬದವರಿಗೆ ಸಾಂತ್ವಾನ ಹೇಳಿದರು. ಇದೇ ಸಂದರ್ಭ ಅವರು ರಾಜ್ಯ ಸರಕಾರದ ವತಿಯಿಂದ ತಲಾ ಐದು ಲಕ್ಷ ಪರಿಹಾರ ನೆರವು ವಿತರಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಉತ್ತರ ಕರ್ನಾಟಕದಲ್ಲಿ ಬಿಸಿಗಾಳಿ ಅಲರ್ಟ್ | ಎಪ್ರಿಲ್ 15 -17 ರವರೆಗೆ ಆರೆಂಜ್ ಅಲರ್ಟ್ ಘೋಷಣೆ
April 13, 2026
11:30 PM
by: ಮಿರರ್‌ ಡೆಸ್ಕ್
ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ಸ್ವಯಂಚಾಲಿತ ಹವಾಮಾನ ಕೇಂದ್ರ ಆರಂಭ
April 13, 2026
10:45 PM
by: ಮಿರರ್‌ ಡೆಸ್ಕ್
ವನ್ಯಜೀವಿಗಳಿಗೆ ಸಂತಾನಹರಣ ಚಿಂತನೆಗೆ ವಿರೋಧ
April 13, 2026
10:28 PM
by: ಮಿರರ್‌ ಡೆಸ್ಕ್
ಬಾಳೆಬರೆ ಘಾಟಿಯಲ್ಲಿ ವಾಹನ ಸಂಚಾರ ತಾತ್ಕಾಲಿಕ ನಿಷೇಧ
April 13, 2026
10:21 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror