Advertisement
ಸುದ್ದಿಗಳು

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅತಿವೃಷ್ಟಿ ನಿರ್ವಹಣೆ ಕುರಿತು ಸಭೆ

Share

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತೀವ್ರ ಮಳೆಯಾಗುತ್ತಿದ್ದು, ಸಾರ್ವಜನಿಕರ ಜೀವಹಾನಿ ತಪ್ಪಿಸಲು ಸರಕಾರ ಗರಿಷ್ಠ ಆದ್ಯತೆ ನೀಡಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಮಂಗಳೂರಿನಲ್ಲಿ ಹಿರಿಯ ಅಧಿಕಾರಿಗಳೊಂದಿಗೆ ಜಿಲ್ಲೆಯ ಅತಿವೃಷ್ಟಿ ನಿರ್ವಹಣೆ ಕುರಿತು ಸಭೆ ನಡೆಸಿದ ಅವರು, ಸಂಭಾವ್ಯ ಭೂಕುಸಿತ ಪ್ರದೇಶಗಳನ್ನು ಮೊದಲೇ ಗುರುತಿಸಿ, ಅಲ್ಲಿ ನೆಲೆಸಿರುವವರನ್ನು ಸ್ಥಳಾಂತರಿಸಬೇಕು. ಸ್ಥಳೀಯ ಮಟ್ಟದ ಅಧಿಕಾರಿಗಳು ಸಾರ್ವಜನಿಕರ ಅಹವಾಲುಗಳಿಗೆ ತಕ್ಷಣವೇ ಸ್ಪಂದಿಸಬೇಕು. ತಾಲೂಕು ಮತ್ತು ಜಿಲ್ಲಾ ಮಟ್ಟದ ಕಂಟ್ರೋಲ್ ರೂಂಗಳು ದಿನದ 24 ಗಂಟೆ ಕಾರ್ಯನಿರ್ವಹಿಸಬೇಕು ಎಂದು ಸೂಚನೆ ನೀಡಿದರು. ನಗರದ ಪಂಪ್ ವೆಲ್, ಕೊಟ್ಟಾರಚೌಕಿ, ಕೆತ್ತಿಕಲ್ ಸೇರಿದಂತೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಪ್ರತಿವರ್ಷ ಮಳೆಯಿಂದ ಸಮಸ್ಯೆ ಉಂಟಾಗುತ್ತಿರುವ ಸ್ಥಳಗಳಲ್ಲಿ ಶಾಶ್ವತ ಪರಿಹಾರಕ್ಕೆ ಹೆದ್ದಾರಿ ಪ್ರಾಧಿಕಾರವು ಸೂಕ್ತ ತಂತ್ರಜ್ಞಾನ ಅನ್ವಯಿಸಿ ಪರಿಹಾರ ಕಂಡುಕೊಳ್ಳಬೇಕು ಎಂದು ಸಚಿವ ದಿನೇಶ್ ಗುಂಡೂರಾವ್, ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕರಿಗೆ ಸೂಚಿಸಿದರು. ನಂತರ ಅವರು, ಪ್ರಾಕೃತಿಕ ವಿಕೋಪದಿಂದ ಜಿಲ್ಲೆಯಲ್ಲಿ ಮೃತಪಟ್ಟವರ ಮನೆಗಳಿಗೆ ಭೇಟಿ ನೀಡಿ, ಕುಟುಂಬದವರಿಗೆ ಸಾಂತ್ವಾನ ಹೇಳಿದರು. ಇದೇ ಸಂದರ್ಭ ಅವರು ರಾಜ್ಯ ಸರಕಾರದ ವತಿಯಿಂದ ತಲಾ ಐದು ಲಕ್ಷ ಪರಿಹಾರ ನೆರವು ವಿತರಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಜಾಗತಿಕ ತಾಪಮಾನ ಏರಿಕೆ ಎಚ್ಚರಿಕೆ – 1 ಡಿಗ್ರಿ ತಾಪಮಾನ ಹೆಚ್ಚಾದರೆ ಭಾರತದ ಭತ್ತದ ಇಳುವರಿ 6.6% ಕುಸಿಯುವ ಸಾಧ್ಯತೆ

ಜಾಗತಿಕ ತಾಪಮಾನ ಪ್ರತಿ 1 ಡಿಗ್ರಿ ಏರಿದರೆ ಭಾರತದ ಭತ್ತದ ಇಳುವರಿ ಶೇ.6.6ರಷ್ಟು…

48 minutes ago

ಹಗಲು ನಿದ್ರೆ ಅನೇಕ ರೋಗಗಳಿಗೆ ಆಹ್ವಾನ ; ಔಷಧಿಗಿಂತ ಉತ್ತಮ ಜೀವನಶೈಲಿಯೇ ಪರಿಹಾರ: ರಾಘವೇಶ್ವರ ಶ್ರೀ

ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…

2 hours ago

ಕೇರಳದಲ್ಲಿ ಭಾರಿ ಮಳೆ ಆರ್ಭಟ : ಮಲಪ್ಪುರಂನಲ್ಲಿ ಸರಣಿ ಭೂಕುಸಿತ , ಸಂಚಾರ ಸಂಪೂರ್ಣ ಸ್ಥಗಿತ

ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…

4 hours ago

ಆಕೆ ಏಕೆ ತನ್ನ ನೋವನ್ನು ಯಾರಿಗೂ ಹೇಳುವುದಿಲ್ಲ..?

ಕುಟುಂಬದ ನೆಮ್ಮದಿಗಾಗಿ ತನ್ನ ನೋವನ್ನೂ ಮರೆಮಾಚುವ ಅಮ್ಮಂದಿರ ಮೌನ ತ್ಯಾಗವನ್ನು 'ತಿರುವು' ಅಂಕಣ…

7 hours ago

ಹಿಂದೂ ಮಹಾಸಾಗರದ ಹವಾಮಾನದಲ್ಲಿ ಹಠಾತ್ ಬದಲಾವಣೆ – ಮತ್ತೆ ಮಹಾಮಳೆಗೆ ಕಾರಣವಾಗುತ್ತಿದೆಯೇ?

ಹಿಂದೂ ಮಹಾಸಾಗರದ ಹವಾಮಾನ ಬದಲಾವಣೆ ಹಾಗೂ ಸಕಾರಾತ್ಮಕ IOD ಪರಿಣಾಮದಿಂದ ಕರ್ನಾಟಕದಲ್ಲಿ ಮುಂಗಾರು…

10 hours ago